ರಾಜ್ಯಸಭಾ ಚುನವಣಾ ಫಲಿತಾಂಶದ ನಂತರ ವಿಧಾನಸೌಧದಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ನಾಸಿರ್ ಹುಸೇನ್ ಪರ ಅವರ ಅಭಿಮಾನಿಗಳು ಘೋಷಣೆ ಕೂಗಿದ್ದರು. ‘ನಾಸಿರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದನ್ನು, ಕೆಲ ಗೋದಿ ಮೀಡಿಯಾಗಳು ಮತ್ತು ಬಿಜೆಪಿಗರು ‘ಪಾಕಿಸ್ತಾನ್ ಝಿಂದಾಬಾದ್..’ ಎಂದು ಅಪಪ್ರಚಾರ ಮಾಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಸುಳ್ಳು ಹರಡಿದ್ದೂ ಅಲ್ಲದೆ, ‘ಭಾರತದಲ್ಲಿ ಪಾ”ಕೈ”ಸ್ತಾನವನ್ನು ಬೆಂಬಲಿಸುವವರ “ಕೈ”ಗಳನ್ನು ಹೆಡೆಮುರಿ ಕಟ್ಟಿ’ ಎಂದು ಎಕ್ಸ್ನಲ್ಲಿ ಕಾಂಗ್ರೆಸ್ ಪಕ್ಷದ ಚಿನ್ಹೆಯನ್ನು ವಿಕೃತವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿದೆ.
ಭಾರತದಲ್ಲಿ ಪಾ"ಕೈ"ಸ್ತಾನವನ್ನು ಬೆಂಬಲಿಸುವವರ "ಕೈ"ಗಳನ್ನು ಹೆಡೆಮುರಿ ಕಟ್ಟಿ.#AntiNationalCongress#AntiIndiaCongress pic.twitter.com/K93njjLcDc
— BJP Karnataka (@BJP4Karnataka) February 28, 2024
ಈ ಪೋಸ್ಟ್ ಡಿಲೀಟ್ ಮಾಡುವಂತೆ ಕಾಂಗ್ರೆಸ್ ಕೊಟ್ಟಿರುವ ಎಚ್ಚರಿಕೆಗೆ ಬಿಜೆಪಿ ಸೊಪ್ಪು ಹಾಕಿಲ್ಲ, ‘ಅಯೋಗ್ಯ ಬಿಜೆಪಿ ಈ ಅವಹೇಳನಕಾರಿ ಪೋಸ್ಟ್ ಡಿಲೀಟ್ ಮಾಡದಿದ್ದರೆ ಕಾಂಗ್ರೆಸ್ ಪಕ್ಷ ಕಠಿಣ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ’ ಎಂದು ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ‘ನೀವು ದೂರು ದಾಖಲಿಸುವುದು ಪಾಕಿಸ್ಥಾನದಲ್ಲೋ ಅಥವಾ ಭಾರತದಲ್ಲೋ?’ ಎಂದು ಹುಂಬತನ ತೋರಿದೆ.
ಅಯೋಗ್ಯ @BJP4Karnataka ,
ಈ ಅವಹೇಳನಕಾರಿ ಪೋಸ್ಟ್ ಡಿಲೀಟ್ ಮಾಡದಿದ್ದರೆ ಕಾಂಗ್ರೆಸ್ ಪಕ್ಷ ಕಠಿಣ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ. pic.twitter.com/lzlKgZ7iK6
— Karnataka Congress (@INCKarnataka) February 28, 2024
ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ, ‘ಹೇಡಿ ರಣಹೇಡಿ ಕಾಂಗ್ರೆಸ್ ಸರ್ಕಾರ! ಪಾಕಿಸ್ಥಾನ ಜಿಂದಾಬಾದ್ ಎಂದು ವಿಧಾನಸೌಧದಲ್ಲೇ ಘೋಷಣೆ ಕೂಗಿದ ದೇಶ ದ್ರೋಹಿಗಳ ಹೆಡೆಮುರಿ ಕಟ್ಟುವುದು ಬಿಟ್ಟು ಅವರನ್ನು ರಕ್ಷಣೆ ಮಾಡುತ್ತಿದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರ. ತಗಡು ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯ, ಓಲೈಕೆ, ದೇಶ ದ್ರೋಹಿಗಳ ರಕ್ಷಣೆ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ, ತುಘಲಕ್ ಸರ್ಕಾರ ಲಾಠಿ ಚಾರ್ಜ್ ಮಾಡಿ ಹತ್ತಿಕ್ಕುವ ಕೆಲಸ ಮಾಡಿದೆ. ದೇಶ ದ್ರೋಹಿಗಳಿಗೆ ಬಿರಿಯಾನಿ ಹಾಕಿ ದೇಶ ಪ್ರೇಮಿಗಳಿಗೆ ಲಾಠಿ ಏಟು ಕೊಡುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ! ಸರ್ಕಾರ ಇದಕ್ಕೆ ಪ್ರತಿಫಲ ಅನುಭವಿಸುವುದು ನಿಶ್ಚಿತ’ ಎಂದು ಅವಹೇಳನಕಾರಿಯಾಗಿ ಮಾತನಾಡಿದೆ.
ಬಿಜೆಪಿಗೆ ಸದಾ ಪಾಕಿಸ್ತಾನದ ಪ್ರೀತಿ, ಪ್ರೇಮ ಉಕ್ಕಿ ಹರಿಯುತ್ತದೆ,
ಸದಾ ಪಾಕಿಸ್ತಾನದ ಜಪ ಮಾಡುತ್ತಿರುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.ಇಂದು ನಸೀರ್ ಸಾಬ್ ಜಿಂದಾಬಾದ್ ಎಂದಿದ್ದನ್ನು ತಿರುಚಿ ಬೊಬ್ಬೆ ಹೊಡೆಯುತ್ತಿರುವ @BJP4Karnataka ತನ್ನ ಆಡಳಿತದ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರು,… pic.twitter.com/nUwwWc7rpI
— Karnataka Congress (@INCKarnataka) February 28, 2024
‘ಘಟನೆ ನಡೆದ ಸ್ಥಳದಲ್ಲಿ ಹಾಜರಿದ್ದ ಹಲವು ಪತ್ರಕರ್ತ ಮಿತ್ರರು ಅಲ್ಲಿ ನಡೆದ ಸತ್ಯವನ್ನು ಹೊರಹಾಕಿದ್ದಾರೆ, ಅಲ್ಲಿ ನಸೀರ್ ಸಾಬ್ ಜಿಂದಾಬಾದ್ ಎಂದಿದ್ದಾರೆಯೇ ಹೊರತು ಪಾಕಿಸ್ತಾನ್ ಜಿಂದಾಬಾದ್ ಎಂದಿಲ್ಲ ಎಂಬ ಸತ್ಯವನ್ನು ಪ್ರತ್ಯಕ್ಷದರ್ಶಿಯಾಗಿ ಜಗತ್ತಿಗೆ ತಿಳಿಸಿದ್ದಾರೆ. ಟೂಲ್ ಕಿಟ್ ಬಿಜೆಪಿ ಈ ಪತ್ರಕರ್ತರ ಮಾತುಗಳಿಗೆ ಕಣ್ಣು ಕಿವಿ ಮುಚ್ಚಿಕೊಂಡಿರುವುದೇಕೆ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
‘ಬಿಜೆಪಿಗೆ ಸದಾ ಪಾಕಿಸ್ತಾನದ ಪ್ರೀತಿ, ಪ್ರೇಮ ಉಕ್ಕಿ ಹರಿಯುತ್ತದೆ, ಸದಾ ಪಾಕಿಸ್ತಾನದ ಜಪ ಮಾಡುತ್ತಿರುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಇಂದು ನಸೀರ್ ಸಾಬ್ ಜಿಂದಾಬಾದ್ ಎಂದಿದ್ದನ್ನು ತಿರುಚಿ ಬೊಬ್ಬೆ ಹೊಡೆಯುತ್ತಿರುವ ಬಿಜೆಪಿ ತನ್ನ ಆಡಳಿತದ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರು, ಅವರನ್ನು ಗಲ್ಲಿಗೆ ಹಾಕಿಲ್ಲವೇಕೆ? ಅವರ ಮೇಲೆ ಪ್ರಕರಣ ದಾಖಲಿಸಿಲ್ಲ ಏಕೆ? ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದು ಬಂದವರನ್ನು ಏಕಮೇವ ನಾಯಕನೆಂದು ಕೊಂಡಾಡುವ ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ’ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳ ಮುಂದೆ ಹೇಳಿಕೆ ಕೊಡುವುದನ್ನು ಬಿಟ್ಟು, ‘ಪಾಕಿಸ್ತಾನ ಝಿಂದಾಬಾದ್..’ ವಿಚಾರದಲ್ಲಿ ಸುಳ್ಳು ಹರಡುತ್ತಿರುವವರ ವಿರುದ್ಧ ಕಾಂಗ್ರೆಸ್ ಈವರೆಗೆ ಕ್ರಮ ತೆಗೆದುಕೊಂಡಿಲ್ಲ. ಹಲವು ಮಾಧ್ಯಮಗಳು ಫ್ಯಾಕ್ಟ್ ಚೆಕ್ ಮಾಡಿದ್ದು, ಪ್ರತ್ಯಕ್ಷದರ್ಶಿಗಳು ಪಾಕ್ ಪರ ಘೋಷಣೆ ಕೂಗಿಲ್ಲ ಎಂದು ಹೇಳುತ್ತಿದ್ದು, ಈ ವಿಚಾರದಲ್ಲಿ ಹಾದಿ ತಪ್ಪಿಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುತ್ತಿದೆ.
ಇದನ್ನೂ ಓದಿ; ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್