Homeಕರ್ನಾಟಕಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಹಿಜಾಬ್‌ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಬಿಜೆಪಿ ನಾಯಕರು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದರು.

- Advertisement -
- Advertisement -

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ರದ್ದು ಮಾಡಿದೆ.

ಟ್ವಿಟರ್‌ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಗುರುತಿಸಿರುವ ಟ್ವಿಟರ್‌ ಸಂಸ್ಥೆಯು, ಟ್ವೀಟ್‌ಗಳನ್ನು ತೆಗೆದುಹಾಕಿದೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಲಾಗಿತ್ತು.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದರು. ಈ ಸಂಬಂಧ ‘ನಾನುಗೌರಿ.ಕಾಂ’ ಕೂಡ ವರದಿ ಮಾಡಿತ್ತು. (ಬಿಜೆಪಿ ಟ್ವೀಟ್‌ನ ಆರ್ಕೈವ್‌ ಲಿಂಕ್‌ ಇಲ್ಲಿದೆ).

ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ಉಡುಪಿ ಬಾಲಕಿರು ವಿದ್ಯಾರ್ಥಿನಿಯರ ದಾಖಲಾತಿ ವಿವರಗಳನ್ನು ಕಾಲೇಜು ಸೋರಿಕೆ ಮಾಡಿದೆ ಎಂದು ‘ದಿ ಕ್ವಿಂಟ್’ ಜಾಲತಾಣ ಈ ಹಿಂದೆ ವರದಿ ಮಾಡಿತ್ತು. ಈ ಕುರಿತು ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು ತಾವು ಸ್ವೀಕರಿಸುತ್ತಿರುವ ಥ್ರೆಟ್‌ ಕಾಲ್‌ಗಳಿಂದ ಭಯಗೊಂಡಿರುವುದಾಗಿ ಹೇಳಿದ್ದರು.

ಇಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿಗೆ ಸ್ಥಳೀಯ ಶಾಸಕ ರಘುಪತಿ ಭಟ್ ಅಧ್ಯಕ್ಷರಾಗಿದ್ದಾರೆ. ಆದರೆ ಖಾಸಗಿ ವಿವರಗಳು ಹೇಗೆ ಸೋರಿಕೆಯಾದವು ಎಂಬ ಮಾಹಿತಿ ಇರಲಿಲ್ಲ. ಆದರೆ ಬಿಜೆಪಿಯವರು ಟ್ವಿಟರ್‌ ಖಾತೆಯ ಮೂಲಕ ಖಾಸಗಿ ವಿವರಗಳನ್ನು ಬಹಿರಂಗಗೊಳಿಸಿದ್ದರು.

 

“ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು? ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ?” ಎಂದು ಪೋಸ್ಟ್‌ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ವಿದ್ಯಾರ್ಥಿನಿಯರ ವಿಳಾಸಗಳನ್ನು ಒಳಗೊಂಡ ಕೋರ್ಟ್ ಪ್ರತಿಯನ್ನು ಹಂಚಿಕೊಂಡಿದ್ದರು. ಇದೇ ರೀತಿಯಲ್ಲಿಯೇ ‘ಬಿಜೆಪಿ ಕರ್ನಾಟಕ’ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿತ್ತು. ಈ ಎರಡು ಟ್ವೀಟ್‌ಗಳನ್ನು ರದ್ದು ಟ್ವಿಟರ್‌ ಸಂಸ್ಥೆ ಮಾಡಿದೆ.

 

ಹೀಗೆ ಅಪ್ರಾಪ್ತ ಮಕ್ಕಳ ಖಾಸಗಿ ವಿವರಗಳನ್ನು ಹಂಚಿಕೊಳ್ಳುವುದು ಕಾನೂನಿಗೆ ವಿರುದ್ಧ. ಈ ಸಂಬಂಧ ಮಕ್ಕಳ ಹಕ್ಕುಗಳ ತಜ್ಞರು ‘ನಾನುಗೌರಿ.ಕಾಂ’ನೊಂದಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ವಿರುದ್ಧ ಕ್ರಮ ಜರುಗಿಸುವುದಾಗಿ ಮಕ್ಕಳ ಹಕ್ಕುಗಳ ಆಯೋಗಯೂ ಎಚ್ಚರಿಸಿದೆ.

ಈ ಹಿಂದೆ ವಿದ್ಯಾರ್ಥಿನಿಯರ ವಿವರಗಳು ಸೋರಿಕೆಯಾಗಿವೆ ಎಂದು ವರದಿಯಾಗಿತ್ತು. ದಿ ಕ್ವಿಂಟ್‌ನೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು, “ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದು ವಿದ್ಯಾರ್ಥಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದರು.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...