Homeಮುಖಪುಟಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

ಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

- Advertisement -
- Advertisement -

ಉಕ್ರೇನ್‌ನಲ್ಲಿ ಸಿಲುಕಿರುವವ ಭಾರತೀಯರನ್ನು ಸ್ಥಳಾಂತರಿಸುತ್ತಿರುವುದನ್ನೂ ಬಿಜೆಪಿ ತನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

ವಾಪಸ್‌ ಕರೆತರುವ ವಿಚಾರದಲ್ಲಿ ಬಿಜೆಪಿ ಸಚಿವರು ಪ್ರಚಾರ ಪಡೆಯುತ್ತಿರುವುದು ಅತ್ಯಂತ ಅವಮಾನಕರ ಹಾಗೂ ಅಸಹ್ಯಕರ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಡಾ.ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಯಾವುದೇ ಗಡಿಬಿಡಿ, ಪ್ರಚಾರ ಇಲ್ಲದೆ ಲಿಬಿಯಾದ ಯುದ್ಧ ಭೂಮಿಯಿಂದ 16,000 ಭಾರತೀಯರನ್ನು ಸ್ಥಳಾಂತರಿಸಿದ್ದರು. ಇದು ಒಂದು ಸರ್ಕಾರದ ಬದ್ಧತೆಯೇ ಹೊರತು ಉಪಕಾರವೇನಲ್ಲ” ಎಂದು ತಿಳಿಸಿದ್ದಾರೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ ಅವರು ಟ್ವೀಟ್ ಮಾಡಿರುವ ವಿಡಿಯೊವನ್ನು ಹಂಚಿಕೊಂಡಿರುವ ಪ್ರಿಯಾಂಕ್, ಸರ್ಕಾರದ ವರ್ತನೆಯನ್ನು ಖಂಡಿಸಿದ್ದಾರೆ.

ಉಕ್ರೇನ್‌ನಿಂದ ವಾಪಸ್‌ ಭಾರತಕ್ಕೆ ಮರಳಿದ 250 ವಿದ್ಯಾರ್ಥಿಗಳಿಗೆ ವಿದೇಶಾಂಗ ವ್ಯವಹಾರಗಳು ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಮುರುಳಿಧರನ್‌ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧ್ಯಾ ಸ್ವಾಗತ ಕೋರುತ್ತಿರುವ ವಿಡಿಯೊವನ್ನು ಪ್ರಿಯಾಂಕ್‌ ಹಂಚಿಕೊಂಡಿದ್ದಾರೆ.

“ಎಲ್ಲರಿಗೂ ಸ್ವಾಗತ. ಸುರಕ್ಷಿತವಾಗಿ ನೀವೆಲ್ಲ ಮಾತೃಭೂಮಿಗೆ ಹಿಂತಿರುಗಿದ್ದೀರಿ. ಪ್ರಧಾನಿಯವರ ಪರವಾಗಿ ನಾವು ಇಲ್ಲಿದ್ದೇವೆ. ಪ್ರಧಾನಿ ನರೇಂದ್ರಮೋದಿಯವರು ನಿಮ್ಮೊಂದಿಗೆ ಇರುತ್ತಾರೆ. 130 ಕೋಟಿ ಭಾರತೀಯರು ನಿಮ್ಮೊಂದಿಗೆ ಇರುತ್ತಾರೆ. ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಕರೆತರುತ್ತೇವೆ ಎಂಬ ಸಂದೇಶವನ್ನು ನೀವು ಎಲ್ಲರಿಗೂ ನೀಡಿ” ಎಂದು ಸಿಂಧ್ಯಾ ಹೇಳಿರುವುದನ್ನು ಇಲ್ಲಿ ಕಾಣಬಹುದು.

“ಭಾರತೀಯರನ್ನು ಸುರಕ್ಷಿತವಾಗಿ ಕರೆತರುವುದು ಸರ್ಕಾರದ ಕರ್ತವ್ಯ. ಅದರಲ್ಲಿಯೂ ಪ್ರಚಾರ ಪಡೆಯುವುದು ಅಸಹ್ಯಕರ ಸಂಗತಿ” ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಸಿಂಧ್ಯಾ ಪೋಸ್ಟ್‌ಗೆ ‘ಐ ಸಪೋರ್ಟ್ ರಾಹುಲ್‌ಗಾಂಧಿ’ ಟ್ವಿಟರ್‌ ಖಾತೆಯು ಪ್ರತಿಕ್ರಿಯೆ ನೀಡಿದ್ದು, ರಾಹುಲ್‌ ಗಾಂಧಿಯವರ ಟ್ವೀಟ್‌ ಲಗತ್ತಿಸಲಾಗಿದೆ. ಉಕ್ರೇನ್‌ನಲ್ಲಿರುವ ಪರಿಸ್ಥಿತಿಯನ್ನು ಕಂಡು ಭಾರತೀಯ ಪೋಷಕರು ಆತಂಕದಲ್ಲಿದ್ದಾರೆ ಎಂದು ರಾಹುಲ್‌ ಟ್ವೀಟ್ ಮಾಡಿರುವುದನ್ನು ಸಿಂಧ್ಯಾ ಅವರ ಗಮನಕ್ಕೆ ತರಲಾಗಿದೆ. “ಗ್ರೌಂಡ್‌ ರಿಯಾಲಿಟಿ ಇದು. ಪ್ರಚಾರವನ್ನು ನಿಲ್ಲಿಸಿ” ಎಂದು ಆಗ್ರಹಿಸಲಾಗಿದೆ.

ಸಚಿವರ ವರ್ತನೆಗೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಉಕ್ರೇನ್‌ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ಕಂಡು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ಅನುಸರಿಸುತ್ತಿರುವ ಪ್ರಚಾರದ ನೀತಿಯನ್ನು ಖಂಡಿಸಿದ್ದಾರೆ.


ಇದನ್ನೂ ಓದಿರಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...