Homeಕರೋನಾ ತಲ್ಲಣಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಸರಿಸಾಟಿಯಿಲ್ಲದ ಪ್ರಯತ್ನ ಮಾಡಿದ್ದಾರೆ ಎಂದು ಪಕ್ಷ ಕೊರೊನಾ ಪರಿಶೀಲನಾ ಸಮಿತಿ ಶ್ಲಾಘಿಸಿದೆ.

- Advertisement -
- Advertisement -

ಇತ್ತೀಚೆಗೆ ಗಂಗಾ ನದಿಯಲ್ಲಿ ಲೆಕ್ಕವಿಲ್ಲದಷ್ಟು ಮೃತ ದೇಹಗಳು ಹರಿದು ಬಂದಿರುವ ವರದಿಗಳ ಹೊರತಾಗಿಯೂ, ಉತ್ತರ ಪ್ರದೇಶದಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಸರಿಸಾಟಿಯಿಲ್ಲದ ಪ್ರಯತ್ನ ಮಾಡಿದ್ದಾರೆ ಎಂದು ಆದಿತ್ಯನಾಥ್ ಸರ್ಕಾರವನ್ನು ಬಿಜೆಪಿಯ ಕೊರೊನಾ ಪರಿಶೀಲನಾ ಸಮಿತಿ ಶ್ಲಾಘಿಸಿದೆ.

ಆಮ್ಲಜನಕ ಸೌಲಭ್ಯಗಳ ಕೊರತೆಯಿಂದಾಗಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾದ ರಾಜ್ಯದಲ್ಲಿ, ಸರ್ಕಾರದ ಕೊರೊನಾ ನಿರ್ವಹಣೆಯ ವಿರುದ್ಧವಾಗಿ ಸ್ವತಃ ಬಿಜೆಪಿಗರೆ ಆಕ್ರೋಶ ವ್ಯಕ್ತಪಡಿಸಿರುವ ಮಧ್ಯೆ ಈ ಕ್ಲೀನ್-ಚಿಟ್ ವರದಿ ಹೊರಬಿದ್ದಿದೆ.

ರಾಜ್ಯದಲ್ಲಿ ಆದಿತ್ಯನಾಥ್‌ ಕೊರೊನಾ ನಿರ್ವಹಣೆಯನ್ನು ಪರಿಶೀಲಿಸುವ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುವ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಸರ್ಕಾರದ ಸಚಿವರೊಂದಿಗೆ ಎರಡು ದಿನಗಳ ಕಾಲ ಸರಣಿ ಸಭೆ ನಡೆಸಿದ ನಂತರ ಈ ವರದಿ ಹೊರಬಿದ್ದಿದೆ.

ಇದನ್ನೂ ಓದಿ: ಲಸಿಕೆ ವಿತರಣೆಗೆ ಸರ್ಕಾರ ತನ್ನ ಸಲಹೆಗಾರನ ಮಾತು ಕೇಳಲಿ: ಡಿ.ಕೆ ಶಿವಕುಮಾರ್

2017 ರಲ್ಲಿ ಆಧಿತ್ಯನಾಥ್‌‌ ಮುಖ್ಯಮಂತ್ರಿಯಾದ ನಂತರ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ.

ರಾಜ್ಯದ ಅನೇಕ ಬಿಜೆಪಿ ನಾಯಕರು ಸಾರ್ವಜನಿಕವಾಗಿ ರಾಜ್ಯ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಟೀಕಿಸಿದ್ದರು. ನಾಯಕತ್ವದ ಈ ಬೇಜವಾಬ್ದಾರಿತನದಿಂದ ಇತ್ತೀಚಿಗೆ ರಾಜ್ಯದಲ್ಲಿ ನಡೆದ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷವು ನಿರೀಕ್ಷೆಗಿಂತ ಹೆಚ್ಚು ವೈಫಲ್ಯ ಸಾಧಿಸಿದೆ ಎಂದು ಅವರು ಗಮನಸೆಳೆದಿದ್ದರು.

ರಾಷ್ಟ್ರೀಯ ನಾಯಕತ್ವದ ಸಭೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿಯ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಸಿಂಗ್, “ಇತರ ರಾಜ್ಯಗಳಿಗೆ ಹೋಲಿಸಿದರೆ ಉತ್ತಮವಾಗಿ ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್‌ ಅವರ ಪ್ರಯತ್ನಗಳನ್ನು ಸಭೆಗಳು ಪರಿಶೀಲಿಸಿದವು” ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಈಗಿನ ನಾಯಕತ್ವವನ್ನು ಬದಲಿಸುವ ಯಾವುದೇ ಆಲೋಚನೆಯನ್ನು ಮೋಹನ್ ಸಿಂಗ್ ತಳ್ಳಿಹಾಕಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಪೂರೈಸಲು ಸಾಂಸ್ಥಿಕ ವ್ಯವಸ್ಥೆಯನ್ನು ಬಲಪಡಿಸುವುದರ ಮೇಲೆ ಸಭೆಯು ಹೆಚ್ಚಾಗಿ ಗಮನಹರಿಸಿದೆ ಎಂದು ರಾಜ್ಯದ ಮಂತ್ರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...