Homeಮುಖಪುಟ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

- Advertisement -
- Advertisement -

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ದ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ, ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ‘ಮಹಿಳೆಯೊಬ್ಬಳು ಸೀರೆ ಧರಿಸಿ ಕಾಲು ಪ್ರದರ್ಶಿಸುತ್ತಿರುವುದು ಬಂಗಾಳಿ ಸಂಸ್ಕೃತಿಯ ಪ್ರತೀಕವಲ್ಲ’ ಎಂದು ಗುರುವಾರ ಹೇಳಿದ್ದಾರೆ.

ಮಂಗಳವಾರ ಪುರುಲಿಯಾದಲ್ಲಿ ನಡೆದ ಚುನಾವಣಾ ರ್‍ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ್ದ ದಿಲೀಪ್ ಘೋಷ್, ಮಮತಾ ಬ್ಯಾನರ್ಜಿ ಅವರ ಗಾಯಗೊಂಡ ಕಾಲನ್ನು ಗುರಿಯಾಗಿಸಿಕೊಂಡಿದ್ದರು. ಮತಗಳಿಗಾಗಿ ಅವರು ತನ್ನ ಮುರಿದ ಕಾಲನ್ನು ಪ್ರದರ್ಶಿಸುತ್ತಿದ್ದಾರೆ. ಅದಕ್ಕಾಗಿ ಅವರು ಬರ್ಮುಡಾ ಶಾರ್ಟ್ಸ್ ಧರಿಸಲಿ, ಆಗ ಜನರಿಗೆ ಅವರ ಕಾಲು ಸ್ಪಷ್ಟವಾಗಿ ಕಾಣುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ತಮ್ಮ ಹೇಳಿಕೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದಿಲೀಪ್ ಘೋಷ್‌, “ಮಹಿಳಾ ಮುಖ್ಯಮಂತ್ರಿ ಆಗಿರುವುದರಿಂದ ಬಂಗಾಳದ ಸಂಸ್ಕೃತಿ, ಸಂಪ್ರದಾಯ ಹಾಗೂ ಬಂಗಾಳಿ ಮಹಿಳೆಯ ಮೌಲ್ಯಗಳೊಂದಿಗೆ ಉತ್ತಮವಾದ ಸಭ್ಯತೆಯನ್ನು ನಾವು ಖಂಡಿತವಾಗಿಯೂ ನಿರೀಕ್ಷಿಸುತ್ತೇವೆ” ಎಂದು ಹೇಳಿದ್ದಾರೆ.

“ಆದಾಗ್ಯೂ, ಸೀರೆ ಧರಿಸಿದ ಮಹಿಳೆಯು ತನ್ನ ಕಾಲುಗಳನ್ನು ಪ್ರರ್ಶಿಸುತ್ತಿರುವುದನ್ನು ನಾವು ಆಗಾಗ್ಗೆ ನೋಡುತ್ತಿದ್ದೇವೆ. ಇದನ್ನು ನೀವು ಬಂಗಾಳದ ಸಂಸ್ಕೃತಿಯ ಪ್ರತಿಬಿಂಬವೆಂದು ಪರಿಗಣಿಸುತ್ತೀರಾ? ಇದನ್ನು ನಾನು ಸಭೆಯಲ್ಲಿ ವಿರೋಧಿಸಿದ್ದೇನೆ” ಎಂದು ಅವರು ತನ್ನ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ದಿಲೀಪ್‌ ಘೋಷ್ ಅವರ ಸಮರ್ಥನೆಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್, “ಬಿಜೆಪಿಯ ಅಧ್ಯಕ್ಷರು ಬಂಗಾಳದ ಮಗಳಿಗೆ ಮಾಡಿದ ಅವಮಾನವನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಈ ಸ್ತ್ರೀದ್ವೇಷಕ್ಕೆ ಜನರು ಶಿಕ್ಷೆ ವಿಧಿಸುತ್ತಾರೆ. ಸೀರೆ ಧರಿಸಿರುವ ಮಹಿಳೆಯರಾಗಲಿ ಅಥವಾ ಸೀಳಿರುವ ಜೀನ್ಸ್ ಧರಿಸಿದವರಾಗಿರಲಿ, ಬಂಗಾಳ ಕ್ಷಮಿಸುವುದಿಲ್ಲ!” ಎಂದು ಹೇಳಿದೆ.

ಇದನ್ನೂ ಓದಿ: ಎನ್‌ಸಿಪಿ ನಾಯಕ ಶರದ್ ಪವಾರ್‌‌ ಬಂಗಾಳದಲ್ಲಿ ತೃಣಮೂಲ ಪರ ಪ್ರಚಾರ!

“ಅಂತಹ ಮನಸ್ಥಿತಿಯ ಜನರಿಗೆ ಬಂಗಾಳದ ಮಹಿಳೆಯರು ಒಂದೇ ಮತ ನೀಡುವುದಿಲ್ಲ” ಎಂದು ರಾಜ್ಯ ಸಚಿವ ಚಂದ್ರೀಮಾ ಭಟ್ಟಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

ನಟಿ, ರಾಜಕಾರಣಿ ನುಸ್ರತ್ ಜಹಾನ್, “ಸ್ತ್ರೀದ್ವೇಷ ಮತ್ತು ಪುರುಷರ ಇಚ್ಛೆಯಂತೆ ಮಹಿಳೆಯರನ್ನು ನಿಯಂತ್ರಿಸುವ ಬಯಕೆಯು ಬಿಜೆಪಿ ನಾಯಕರಲ್ಲಿ ಎಷ್ಟು ಆಳವಾಗಿ ಹುದುಗಿದೆ ಎಂದರೆ ಅದು ಈಗ ರಾಷ್ಟ್ರೀಯ ಕಾಳಜಿಯ ವಿಷಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗಾಳ ಬಿಜೆಪಿ ರಾಜ್ಯ ಅಧ್ಯಕ್ಷರಾಗಿರುವ ದಿಲೀಪ್ ಘೋಷ್‌ ಈ ಹಿಂದಿನಿಂದಲೂ ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತಲೆ ಬರುತ್ತಿದ್ದಾರೆ. ಹಿಂದೆ ಅವರು “ಸ್ಥಳೀಯ ಹಸುಗಳ ಹಾಲಿನಲ್ಲಿ ಚಿನ್ನದ ಅಂಶವಿದೆ”, “ಕಮ್ಯುನಿಸ್ಟರನ್ನು ಹೊರಹಾಕಲು ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಬಾಲಕೋಟ್ ತರಹದ ಸರ್ಜಿಕರಲ್‌ ಸ್ಟ್ರೈಕ್ ನಡೆಸಬೇಕು” ಎಂಬ ಹೇಳಿಕೆಯನ್ನು ನೀಡಿದ್ದರು.

ಮಾರ್ಚ್ 10 ರಂದು ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ್ದ ಮಮತಾ ಅವರ ಕಾಲಿಗೆ ತೀವ್ರ ತರದ ಗಾಯವಾಗಿತ್ತು. ಅದರ ನಂತರ ಅವರು ತನ್ನ ಎಡಗಾಲಿಗೆ ಪ್ಲ್ಯಾಸ್ಟರ್ ಹಾಕಿದ್ದು ಗಾಲಿಕುರ್ಚಿಯಲ್ಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಫೈನಲ್ ಲಿಸ್ಟ್ ಬಿಡುಗಡೆ: ಮಿಥುನ್ ಚಕ್ರವರ್ತಿಗೆ ಟಿಕೆಟ್ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...