Homeಮುಖಪುಟ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

- Advertisement -
- Advertisement -

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ದ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ, ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ‘ಮಹಿಳೆಯೊಬ್ಬಳು ಸೀರೆ ಧರಿಸಿ ಕಾಲು ಪ್ರದರ್ಶಿಸುತ್ತಿರುವುದು ಬಂಗಾಳಿ ಸಂಸ್ಕೃತಿಯ ಪ್ರತೀಕವಲ್ಲ’ ಎಂದು ಗುರುವಾರ ಹೇಳಿದ್ದಾರೆ.

ಮಂಗಳವಾರ ಪುರುಲಿಯಾದಲ್ಲಿ ನಡೆದ ಚುನಾವಣಾ ರ್‍ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ್ದ ದಿಲೀಪ್ ಘೋಷ್, ಮಮತಾ ಬ್ಯಾನರ್ಜಿ ಅವರ ಗಾಯಗೊಂಡ ಕಾಲನ್ನು ಗುರಿಯಾಗಿಸಿಕೊಂಡಿದ್ದರು. ಮತಗಳಿಗಾಗಿ ಅವರು ತನ್ನ ಮುರಿದ ಕಾಲನ್ನು ಪ್ರದರ್ಶಿಸುತ್ತಿದ್ದಾರೆ. ಅದಕ್ಕಾಗಿ ಅವರು ಬರ್ಮುಡಾ ಶಾರ್ಟ್ಸ್ ಧರಿಸಲಿ, ಆಗ ಜನರಿಗೆ ಅವರ ಕಾಲು ಸ್ಪಷ್ಟವಾಗಿ ಕಾಣುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ತಮ್ಮ ಹೇಳಿಕೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದಿಲೀಪ್ ಘೋಷ್‌, “ಮಹಿಳಾ ಮುಖ್ಯಮಂತ್ರಿ ಆಗಿರುವುದರಿಂದ ಬಂಗಾಳದ ಸಂಸ್ಕೃತಿ, ಸಂಪ್ರದಾಯ ಹಾಗೂ ಬಂಗಾಳಿ ಮಹಿಳೆಯ ಮೌಲ್ಯಗಳೊಂದಿಗೆ ಉತ್ತಮವಾದ ಸಭ್ಯತೆಯನ್ನು ನಾವು ಖಂಡಿತವಾಗಿಯೂ ನಿರೀಕ್ಷಿಸುತ್ತೇವೆ” ಎಂದು ಹೇಳಿದ್ದಾರೆ.

“ಆದಾಗ್ಯೂ, ಸೀರೆ ಧರಿಸಿದ ಮಹಿಳೆಯು ತನ್ನ ಕಾಲುಗಳನ್ನು ಪ್ರರ್ಶಿಸುತ್ತಿರುವುದನ್ನು ನಾವು ಆಗಾಗ್ಗೆ ನೋಡುತ್ತಿದ್ದೇವೆ. ಇದನ್ನು ನೀವು ಬಂಗಾಳದ ಸಂಸ್ಕೃತಿಯ ಪ್ರತಿಬಿಂಬವೆಂದು ಪರಿಗಣಿಸುತ್ತೀರಾ? ಇದನ್ನು ನಾನು ಸಭೆಯಲ್ಲಿ ವಿರೋಧಿಸಿದ್ದೇನೆ” ಎಂದು ಅವರು ತನ್ನ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ದಿಲೀಪ್‌ ಘೋಷ್ ಅವರ ಸಮರ್ಥನೆಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್, “ಬಿಜೆಪಿಯ ಅಧ್ಯಕ್ಷರು ಬಂಗಾಳದ ಮಗಳಿಗೆ ಮಾಡಿದ ಅವಮಾನವನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಈ ಸ್ತ್ರೀದ್ವೇಷಕ್ಕೆ ಜನರು ಶಿಕ್ಷೆ ವಿಧಿಸುತ್ತಾರೆ. ಸೀರೆ ಧರಿಸಿರುವ ಮಹಿಳೆಯರಾಗಲಿ ಅಥವಾ ಸೀಳಿರುವ ಜೀನ್ಸ್ ಧರಿಸಿದವರಾಗಿರಲಿ, ಬಂಗಾಳ ಕ್ಷಮಿಸುವುದಿಲ್ಲ!” ಎಂದು ಹೇಳಿದೆ.

ಇದನ್ನೂ ಓದಿ: ಎನ್‌ಸಿಪಿ ನಾಯಕ ಶರದ್ ಪವಾರ್‌‌ ಬಂಗಾಳದಲ್ಲಿ ತೃಣಮೂಲ ಪರ ಪ್ರಚಾರ!

“ಅಂತಹ ಮನಸ್ಥಿತಿಯ ಜನರಿಗೆ ಬಂಗಾಳದ ಮಹಿಳೆಯರು ಒಂದೇ ಮತ ನೀಡುವುದಿಲ್ಲ” ಎಂದು ರಾಜ್ಯ ಸಚಿವ ಚಂದ್ರೀಮಾ ಭಟ್ಟಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

ನಟಿ, ರಾಜಕಾರಣಿ ನುಸ್ರತ್ ಜಹಾನ್, “ಸ್ತ್ರೀದ್ವೇಷ ಮತ್ತು ಪುರುಷರ ಇಚ್ಛೆಯಂತೆ ಮಹಿಳೆಯರನ್ನು ನಿಯಂತ್ರಿಸುವ ಬಯಕೆಯು ಬಿಜೆಪಿ ನಾಯಕರಲ್ಲಿ ಎಷ್ಟು ಆಳವಾಗಿ ಹುದುಗಿದೆ ಎಂದರೆ ಅದು ಈಗ ರಾಷ್ಟ್ರೀಯ ಕಾಳಜಿಯ ವಿಷಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗಾಳ ಬಿಜೆಪಿ ರಾಜ್ಯ ಅಧ್ಯಕ್ಷರಾಗಿರುವ ದಿಲೀಪ್ ಘೋಷ್‌ ಈ ಹಿಂದಿನಿಂದಲೂ ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತಲೆ ಬರುತ್ತಿದ್ದಾರೆ. ಹಿಂದೆ ಅವರು “ಸ್ಥಳೀಯ ಹಸುಗಳ ಹಾಲಿನಲ್ಲಿ ಚಿನ್ನದ ಅಂಶವಿದೆ”, “ಕಮ್ಯುನಿಸ್ಟರನ್ನು ಹೊರಹಾಕಲು ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಬಾಲಕೋಟ್ ತರಹದ ಸರ್ಜಿಕರಲ್‌ ಸ್ಟ್ರೈಕ್ ನಡೆಸಬೇಕು” ಎಂಬ ಹೇಳಿಕೆಯನ್ನು ನೀಡಿದ್ದರು.

ಮಾರ್ಚ್ 10 ರಂದು ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ್ದ ಮಮತಾ ಅವರ ಕಾಲಿಗೆ ತೀವ್ರ ತರದ ಗಾಯವಾಗಿತ್ತು. ಅದರ ನಂತರ ಅವರು ತನ್ನ ಎಡಗಾಲಿಗೆ ಪ್ಲ್ಯಾಸ್ಟರ್ ಹಾಕಿದ್ದು ಗಾಲಿಕುರ್ಚಿಯಲ್ಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಫೈನಲ್ ಲಿಸ್ಟ್ ಬಿಡುಗಡೆ: ಮಿಥುನ್ ಚಕ್ರವರ್ತಿಗೆ ಟಿಕೆಟ್ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....