Homeಮುಖಪುಟಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

'ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು, ಹಾಗಾಗಿ ಬಿಜೆಪಿ ಮತ ನೀಡಿ ಎಂದು ಬೆದರಿಕೆಯೊಡ್ಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು ಎಂದು ರಾಜ್ಯದ ಲೇಖಕರು, ಸಾಹಿತಿಗಳು ಒತ್ತಾಯಿಸಿದ್ದಾರೆ.

ಪ್ರೊ. ಕೆ ಎಂ ಮರುಳಸಿದ್ದಪ್ಪ, ಡಾ. ವಿಜಯಾ, ಪ್ರೊ. ಎಸ್‌ ಜಿ ಸಿದ್ದರಾಮಯ್ಯ, ಪ್ರೊ. ಕಾಶೀನಾಥ ಅಂಬಲಗಿ, ದಿನೇಶ್‌ ಅಮೀನ್‌ ಮಟ್ಟು, ಗಿರಿಧರ ಕಾರ್ಕಳ, ಪುರುಷೋತ್ತಮ ಬಿಳಿಮಲೆ ಮತ್ತು ಶ್ರೀನಿವಾಸ ಕಾರ್ಕಳರವರು ಜಂಟಿ ಹೇಳಿಕೆ ನೀಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ 19, 2023ರಂದು ಕರ್ನಾಟದ ಚುನಾವಣಾ ಸಭೆಯೊಂದರಲ್ಲಿ ಭಾಷಣ ಮಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, “ಕರ್ನಾಟಕದಲ್ಲಿ ಅಭಿವೃದ್ಧಿಯು ನಿರಂತರವಾಗಿ ಹರಿಯಲು ನಿಮಗೆ ಮೋದೀಜಿಯವರ ಆಶೀರ್ವಾದ ಬೇಕು. ಆದ್ದರಿಂದ ರಾಜ್ಯವು ಮೋದಿ ಜಿ ಅವರ ಆಶೀರ್ವಾದದಿಂದ ದೂರವಿರಬಾರದುʼ ಎಂಬ ಮಾತನ್ನು ಹೇಳಿದ್ದಾರೆ. ಈ ಮಾತಿನ ಮೂಲಕ ನಡ್ಡಾ ಅವರು ʼ ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವದ ಮೇಲಿನ ಧಾಳಿ ಹೇಗೋ ಹಾಗೆ ಸಂವಿಧಾನದ ಮೇಲಿನ ಆಕ್ರಮಣವೂ ಹೌದು ಎಂದು ನಾವು ಭಾವಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕವೂ ಸೇರಿದಂತೆ ದೇಶದ ಯಾವ ರಾಜ್ಯವಾದರೂ ತನಗೆ ಬೇಕಾದ ಪಕ್ಷವನ್ನು ಚುನಾವಣೆಯ ಮೂಲಕ ಅಧಿಕಾರಕ್ಕೆ ತರುವ ಹಕ್ಕನ್ನು ಸಂವಿಧಾನವು ಮತದಾರರಿಗೆ ನೀಡಿದೆ. ಮತದಾರರ ಅಯ್ಕೆಯನ್ನು ಕೇಂದ್ರದಲ್ಲಿರುವ ಒಕ್ಕೂಟ ಸರಕಾರ ಗೌರವಿಸಬೇಕು. ಸಂವಿಧಾನದ ಪರಿಚ್ಛೇದ XI, ಅಧಿಕಾರವನ್ನು ರಾಜ್ಯ ಮತ್ತು ಕೇಂದ್ರಗಳ ನಡುವೆ ಹಂಚಿಕೊಟ್ಟಿರುವುದರಿಂದ ಭಾರತವು ಒಂದು ಒಕ್ಕೂಟ ರಾಷ್ಟ್ರವಾಗಿದೆ. ಇಲ್ಲಿ ಒಂದು ಇನ್ನೊಂದನ್ನು ದುರ್ಬಲಗೊಳಿಸುವುದಿಲ್ಲ ಬದಲು ಬಲಗೊಳಿಸುತ್ತದೆ. ಆದರೆ ನಡ್ಡಾ ಅವರ ಮಾತುಗಳು ಒಕ್ಕೂಟ ಸರಕಾರದ ಮೂಲ ತತ್ವಗಳಿಗೆ ವಿರೋಧವಾಗಿದ್ದು, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಕೇಂದ್ರದಲ್ಲಿರುವ ಎನ್‌ ಡಿ ಎ ಸರಕಾರವು ಹಂತ ಹಂತವಾಗಿ ರಾಜ್ಯ ಸರಕಾರಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಲೇ ಬರುತ್ತಿದೆ. ಇದಕ್ಕೆ ಪೂರಕವಾಗಿಯೇ ನಡ್ಡಾ ಅವರ ಮಾತುಗಳು ಬಂದಿವೆ. ಇದು ಅಂತಿಮವಾಗಿ ಭಾರತದ ಬಹುತ್ವವನ್ನು ನಾಶ ಮಾಡುತ್ತದೆ. ಕಾರಣ, ಸಂವಿಧಾನ ವಿರೋಧಿ ಮಾತುಗಳನ್ನಾಡಿದ ಜೆ ಪಿ ನಡ್ಡಾ ಅವರು ಕೂಡಲೇ ಭಾರತದ ಮತದಾರರ ಕ್ಷಮೆ ಯಾಚಿಸಬೇಕು ಮತ್ತು ತಮ್ಮ ಮುಂದಿನ ಭಾಷಣಗಳಲ್ಲಿ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...