Homeಮುಖಪುಟಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

'ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು, ಹಾಗಾಗಿ ಬಿಜೆಪಿ ಮತ ನೀಡಿ ಎಂದು ಬೆದರಿಕೆಯೊಡ್ಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು ಎಂದು ರಾಜ್ಯದ ಲೇಖಕರು, ಸಾಹಿತಿಗಳು ಒತ್ತಾಯಿಸಿದ್ದಾರೆ.

ಪ್ರೊ. ಕೆ ಎಂ ಮರುಳಸಿದ್ದಪ್ಪ, ಡಾ. ವಿಜಯಾ, ಪ್ರೊ. ಎಸ್‌ ಜಿ ಸಿದ್ದರಾಮಯ್ಯ, ಪ್ರೊ. ಕಾಶೀನಾಥ ಅಂಬಲಗಿ, ದಿನೇಶ್‌ ಅಮೀನ್‌ ಮಟ್ಟು, ಗಿರಿಧರ ಕಾರ್ಕಳ, ಪುರುಷೋತ್ತಮ ಬಿಳಿಮಲೆ ಮತ್ತು ಶ್ರೀನಿವಾಸ ಕಾರ್ಕಳರವರು ಜಂಟಿ ಹೇಳಿಕೆ ನೀಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ 19, 2023ರಂದು ಕರ್ನಾಟದ ಚುನಾವಣಾ ಸಭೆಯೊಂದರಲ್ಲಿ ಭಾಷಣ ಮಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, “ಕರ್ನಾಟಕದಲ್ಲಿ ಅಭಿವೃದ್ಧಿಯು ನಿರಂತರವಾಗಿ ಹರಿಯಲು ನಿಮಗೆ ಮೋದೀಜಿಯವರ ಆಶೀರ್ವಾದ ಬೇಕು. ಆದ್ದರಿಂದ ರಾಜ್ಯವು ಮೋದಿ ಜಿ ಅವರ ಆಶೀರ್ವಾದದಿಂದ ದೂರವಿರಬಾರದುʼ ಎಂಬ ಮಾತನ್ನು ಹೇಳಿದ್ದಾರೆ. ಈ ಮಾತಿನ ಮೂಲಕ ನಡ್ಡಾ ಅವರು ʼ ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವದ ಮೇಲಿನ ಧಾಳಿ ಹೇಗೋ ಹಾಗೆ ಸಂವಿಧಾನದ ಮೇಲಿನ ಆಕ್ರಮಣವೂ ಹೌದು ಎಂದು ನಾವು ಭಾವಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕವೂ ಸೇರಿದಂತೆ ದೇಶದ ಯಾವ ರಾಜ್ಯವಾದರೂ ತನಗೆ ಬೇಕಾದ ಪಕ್ಷವನ್ನು ಚುನಾವಣೆಯ ಮೂಲಕ ಅಧಿಕಾರಕ್ಕೆ ತರುವ ಹಕ್ಕನ್ನು ಸಂವಿಧಾನವು ಮತದಾರರಿಗೆ ನೀಡಿದೆ. ಮತದಾರರ ಅಯ್ಕೆಯನ್ನು ಕೇಂದ್ರದಲ್ಲಿರುವ ಒಕ್ಕೂಟ ಸರಕಾರ ಗೌರವಿಸಬೇಕು. ಸಂವಿಧಾನದ ಪರಿಚ್ಛೇದ XI, ಅಧಿಕಾರವನ್ನು ರಾಜ್ಯ ಮತ್ತು ಕೇಂದ್ರಗಳ ನಡುವೆ ಹಂಚಿಕೊಟ್ಟಿರುವುದರಿಂದ ಭಾರತವು ಒಂದು ಒಕ್ಕೂಟ ರಾಷ್ಟ್ರವಾಗಿದೆ. ಇಲ್ಲಿ ಒಂದು ಇನ್ನೊಂದನ್ನು ದುರ್ಬಲಗೊಳಿಸುವುದಿಲ್ಲ ಬದಲು ಬಲಗೊಳಿಸುತ್ತದೆ. ಆದರೆ ನಡ್ಡಾ ಅವರ ಮಾತುಗಳು ಒಕ್ಕೂಟ ಸರಕಾರದ ಮೂಲ ತತ್ವಗಳಿಗೆ ವಿರೋಧವಾಗಿದ್ದು, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಕೇಂದ್ರದಲ್ಲಿರುವ ಎನ್‌ ಡಿ ಎ ಸರಕಾರವು ಹಂತ ಹಂತವಾಗಿ ರಾಜ್ಯ ಸರಕಾರಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಲೇ ಬರುತ್ತಿದೆ. ಇದಕ್ಕೆ ಪೂರಕವಾಗಿಯೇ ನಡ್ಡಾ ಅವರ ಮಾತುಗಳು ಬಂದಿವೆ. ಇದು ಅಂತಿಮವಾಗಿ ಭಾರತದ ಬಹುತ್ವವನ್ನು ನಾಶ ಮಾಡುತ್ತದೆ. ಕಾರಣ, ಸಂವಿಧಾನ ವಿರೋಧಿ ಮಾತುಗಳನ್ನಾಡಿದ ಜೆ ಪಿ ನಡ್ಡಾ ಅವರು ಕೂಡಲೇ ಭಾರತದ ಮತದಾರರ ಕ್ಷಮೆ ಯಾಚಿಸಬೇಕು ಮತ್ತು ತಮ್ಮ ಮುಂದಿನ ಭಾಷಣಗಳಲ್ಲಿ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...