Homeಮುಖಪುಟಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

'ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು, ಹಾಗಾಗಿ ಬಿಜೆಪಿ ಮತ ನೀಡಿ ಎಂದು ಬೆದರಿಕೆಯೊಡ್ಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು ಎಂದು ರಾಜ್ಯದ ಲೇಖಕರು, ಸಾಹಿತಿಗಳು ಒತ್ತಾಯಿಸಿದ್ದಾರೆ.

ಪ್ರೊ. ಕೆ ಎಂ ಮರುಳಸಿದ್ದಪ್ಪ, ಡಾ. ವಿಜಯಾ, ಪ್ರೊ. ಎಸ್‌ ಜಿ ಸಿದ್ದರಾಮಯ್ಯ, ಪ್ರೊ. ಕಾಶೀನಾಥ ಅಂಬಲಗಿ, ದಿನೇಶ್‌ ಅಮೀನ್‌ ಮಟ್ಟು, ಗಿರಿಧರ ಕಾರ್ಕಳ, ಪುರುಷೋತ್ತಮ ಬಿಳಿಮಲೆ ಮತ್ತು ಶ್ರೀನಿವಾಸ ಕಾರ್ಕಳರವರು ಜಂಟಿ ಹೇಳಿಕೆ ನೀಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ 19, 2023ರಂದು ಕರ್ನಾಟದ ಚುನಾವಣಾ ಸಭೆಯೊಂದರಲ್ಲಿ ಭಾಷಣ ಮಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, “ಕರ್ನಾಟಕದಲ್ಲಿ ಅಭಿವೃದ್ಧಿಯು ನಿರಂತರವಾಗಿ ಹರಿಯಲು ನಿಮಗೆ ಮೋದೀಜಿಯವರ ಆಶೀರ್ವಾದ ಬೇಕು. ಆದ್ದರಿಂದ ರಾಜ್ಯವು ಮೋದಿ ಜಿ ಅವರ ಆಶೀರ್ವಾದದಿಂದ ದೂರವಿರಬಾರದುʼ ಎಂಬ ಮಾತನ್ನು ಹೇಳಿದ್ದಾರೆ. ಈ ಮಾತಿನ ಮೂಲಕ ನಡ್ಡಾ ಅವರು ʼ ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವದ ಮೇಲಿನ ಧಾಳಿ ಹೇಗೋ ಹಾಗೆ ಸಂವಿಧಾನದ ಮೇಲಿನ ಆಕ್ರಮಣವೂ ಹೌದು ಎಂದು ನಾವು ಭಾವಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕವೂ ಸೇರಿದಂತೆ ದೇಶದ ಯಾವ ರಾಜ್ಯವಾದರೂ ತನಗೆ ಬೇಕಾದ ಪಕ್ಷವನ್ನು ಚುನಾವಣೆಯ ಮೂಲಕ ಅಧಿಕಾರಕ್ಕೆ ತರುವ ಹಕ್ಕನ್ನು ಸಂವಿಧಾನವು ಮತದಾರರಿಗೆ ನೀಡಿದೆ. ಮತದಾರರ ಅಯ್ಕೆಯನ್ನು ಕೇಂದ್ರದಲ್ಲಿರುವ ಒಕ್ಕೂಟ ಸರಕಾರ ಗೌರವಿಸಬೇಕು. ಸಂವಿಧಾನದ ಪರಿಚ್ಛೇದ XI, ಅಧಿಕಾರವನ್ನು ರಾಜ್ಯ ಮತ್ತು ಕೇಂದ್ರಗಳ ನಡುವೆ ಹಂಚಿಕೊಟ್ಟಿರುವುದರಿಂದ ಭಾರತವು ಒಂದು ಒಕ್ಕೂಟ ರಾಷ್ಟ್ರವಾಗಿದೆ. ಇಲ್ಲಿ ಒಂದು ಇನ್ನೊಂದನ್ನು ದುರ್ಬಲಗೊಳಿಸುವುದಿಲ್ಲ ಬದಲು ಬಲಗೊಳಿಸುತ್ತದೆ. ಆದರೆ ನಡ್ಡಾ ಅವರ ಮಾತುಗಳು ಒಕ್ಕೂಟ ಸರಕಾರದ ಮೂಲ ತತ್ವಗಳಿಗೆ ವಿರೋಧವಾಗಿದ್ದು, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಕೇಂದ್ರದಲ್ಲಿರುವ ಎನ್‌ ಡಿ ಎ ಸರಕಾರವು ಹಂತ ಹಂತವಾಗಿ ರಾಜ್ಯ ಸರಕಾರಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಲೇ ಬರುತ್ತಿದೆ. ಇದಕ್ಕೆ ಪೂರಕವಾಗಿಯೇ ನಡ್ಡಾ ಅವರ ಮಾತುಗಳು ಬಂದಿವೆ. ಇದು ಅಂತಿಮವಾಗಿ ಭಾರತದ ಬಹುತ್ವವನ್ನು ನಾಶ ಮಾಡುತ್ತದೆ. ಕಾರಣ, ಸಂವಿಧಾನ ವಿರೋಧಿ ಮಾತುಗಳನ್ನಾಡಿದ ಜೆ ಪಿ ನಡ್ಡಾ ಅವರು ಕೂಡಲೇ ಭಾರತದ ಮತದಾರರ ಕ್ಷಮೆ ಯಾಚಿಸಬೇಕು ಮತ್ತು ತಮ್ಮ ಮುಂದಿನ ಭಾಷಣಗಳಲ್ಲಿ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...