Homeಮುಖಪುಟಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿಜೆಪಿ ರಾಷ್ಟ್ರಾಧ್ಯಕ್ಷ!

ಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿಜೆಪಿ ರಾಷ್ಟ್ರಾಧ್ಯಕ್ಷ!

- Advertisement -
- Advertisement -

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ್ದಾರೆ. “ಕರ್ನಾಟಕದಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತಮ ಕೆಲಸ ಮಾಡಿದ್ದಾರೆ ಮತ್ತು ರಾಜ್ಯದಲ್ಲಿ ಯಾವುದೆ ರಾಜಕೀಯ ಬಿಕ್ಕಟ್ಟು ಇಲ್ಲ” ಎಂದು ಅವರು ಭಾನುವಾರ ತಿಳಿಸಿದ್ದಾರೆ.

ಗೋವಾದ ಪಣಜಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘‘ಯಡಿಯೂರಪ್ಪ ಅವರು ರಾಜ್ಯದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರು ಕರ್ನಾಟಕವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಯಡಿಯೂರಪ್ಪ ಅವರು ತಮ್ಮದೇ ಆದ ರೀತಿಯಲ್ಲಿ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಬೆಂಬಲ: ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಠಾಧೀಶರ ಸಮಾವೇಶ

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟಿನ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಹಾಗೆಂದು ನಿಮಗೆ ಅನಿಸುತ್ತಿದೆ. ಆದರೆ ನಮಗೆ ಹಾಗೆ ಅನಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

ಇಂದು ಸಂಜೆ ವೇಳೆಗೆ ಸಿಎಂ ಬದಲಾವಣೆಯ ಕುರಿತ ಸಂದೇಶ ಪಕ್ಷದ ಹೈಕಮಾಂಡ್‌ನಿಂದ ಬರಲಿದೆ ಎಂದು ಯಡಿಯೂರಪ್ಪ ಭಾನುವಾರ ಬೆಳಿಗ್ಗೆ ಬೆಳಗಾವಿಯಲ್ಲಿ ಹೇಳಿದ್ದರು. ಅವರು, “ಸಂಜೆಯ ಹೊತ್ತಿಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಮಾಧ್ಯಮಗಳು ಸಹ ಇದರ ಬಗ್ಗೆ ತಿಳಿದುಕೊಳ್ಳುವಿರಿ” ಎಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದ್ದರು. ಇದಾದ ಕೆಲ ಗಂಟೆಗಳಲ್ಲಿಯೇ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರತಿಕ್ರಿಯಿಸಿದ್ದು, ಭಾರಿ ಮಹತ್ವ ಪಡೆದುಕೊಂಡಿದೆ.

ಯಡಿಯೂರಪ್ಪ ಅವರ ಸರ್ಕಾರವು ಅಧಿಕಾರಕ್ಕೆ ಬಂದು ಇನ್ನೆರೆಡು ದಿನಗಳಲ್ಲಿ ಎರಡು ವರ್ಷಗಳಾಗಿದೆ. ಹಿಂದಿನಿಂದಲೂ ಅವರ ನಾಯಕತ್ವದ ಬಗ್ಗೆ ಬಿಜೆಪಿಯೊಳಗೆ ಅಸಮಾಧಾನಗಳು ಇದ್ದವು. ಇದನ್ನು ಪಕ್ಷದ ನಾಯಕರೆ ಬಹಿರಂಗವಾಗಿ ಹೇಳಿದ್ದರು. ಈ ಹಿಂದೆ ಕೂಡಾ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕದಲ್ಲಿ ಸರಣಿ ಸಭೆಗಳನ್ನು ನಡೆಸಿ, ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳಿದ್ದರು. ಆದರೆ ಅದರ ನಂತರ ಕೂಡಾ ಪಕ್ಷದೊಳಗಿನ ಕಚ್ಚಾಟಗಳು ನಿಂತಿರಲಿಲ್ಲ.

ಇದನ್ನೂ ಓದಿ: ಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿ ಸರಣಿ ಸಭೆಯನ್ನು ನಡೆಸಿದ್ದರು. ಆದರೆ ಸಭೆಯ ನಂತರ ಅವರು ಅನಾರೋಗ್ಯದ ಕಾರಣ ನೀಡಿ ರಾಜೀನಾಮೆಗೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದಾಗ್ಯೂ, ಅಲ್ಲಿ ಅವರು ರಾಜೀನಾಮೆಯ ಸುದ್ದಿಯನ್ನು ಅಲ್ಲಗೆಳೆದಿದ್ದರು. ಆದರೆ ಗುರವಾರದಂದು ಮತ್ತೇ ರಾಜೀನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದ ಯಡಿಯೂರಪ್ಪ, ಹೈಕಮಾಂಡ್‌ನಿಂದ ಸಂದೇಶವನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ಅದಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದರು.

ಈ ಮಧ್ಯೆ ಸೋಮವಾರದಂದು ತಮ್ಮ ಸರ್ಕಾರದ ಎರಡು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆಯನ್ನು ಯಡಿಯೂರಪ್ಪ ನಡೆಸಲಿದ್ದಾರೆ. ಈ ಬಗ್ಗೆ ವಿಧಾನ ಸೌಧದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು, ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿಮಾಡುವ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಲಾಗುತ್ತದೆ.

ನಾಯಕತ್ವದ ಬದಲಾವಣೆಯ ಬಗ್ಗೆ ಕೇಂದ್ರ ನಾಯಕರು ಉತ್ಸುಕರಾಗಿದ್ದರೂ, ಯಡಿಯೂರಪ್ಪ ಅವರ ಉತ್ತರಾಧಿಕಾರಿಯನ್ನು ಅವರು ಇನ್ನೂ ನಿರ್ಧರಿಸಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೆ ಪ್ರವಾಹದಿಂದ ಸಾವಿರಾರು ಜನರು ಕಷ್ಟ ಪಡುತ್ತಿರುವಾಗ ಮುಖ್ಯಮಂತ್ರಿ ಬದಲಾವಣೆಯು ಪಕ್ಷಕ್ಕೆ ಅಪಾಯ ತಂದೊಡ್ಡಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: ವರಿಷ್ಠರ ಸೂಚನೆಯಂತೆ ನಡೆಯುವೆ: ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ವಿಡಿಯೊ ನೋಡಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದ ಕೇಂದ್ರ ಸರ್ಕಾರ.. ಹಾಗಾದರೆ ಇವು ಏನು??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...