Homeಮುಖಪುಟಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿಜೆಪಿ ರಾಷ್ಟ್ರಾಧ್ಯಕ್ಷ!

ಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿಜೆಪಿ ರಾಷ್ಟ್ರಾಧ್ಯಕ್ಷ!

- Advertisement -
- Advertisement -

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ್ದಾರೆ. “ಕರ್ನಾಟಕದಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತಮ ಕೆಲಸ ಮಾಡಿದ್ದಾರೆ ಮತ್ತು ರಾಜ್ಯದಲ್ಲಿ ಯಾವುದೆ ರಾಜಕೀಯ ಬಿಕ್ಕಟ್ಟು ಇಲ್ಲ” ಎಂದು ಅವರು ಭಾನುವಾರ ತಿಳಿಸಿದ್ದಾರೆ.

ಗೋವಾದ ಪಣಜಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘‘ಯಡಿಯೂರಪ್ಪ ಅವರು ರಾಜ್ಯದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರು ಕರ್ನಾಟಕವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಯಡಿಯೂರಪ್ಪ ಅವರು ತಮ್ಮದೇ ಆದ ರೀತಿಯಲ್ಲಿ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಬೆಂಬಲ: ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಠಾಧೀಶರ ಸಮಾವೇಶ

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟಿನ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಹಾಗೆಂದು ನಿಮಗೆ ಅನಿಸುತ್ತಿದೆ. ಆದರೆ ನಮಗೆ ಹಾಗೆ ಅನಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

ಇಂದು ಸಂಜೆ ವೇಳೆಗೆ ಸಿಎಂ ಬದಲಾವಣೆಯ ಕುರಿತ ಸಂದೇಶ ಪಕ್ಷದ ಹೈಕಮಾಂಡ್‌ನಿಂದ ಬರಲಿದೆ ಎಂದು ಯಡಿಯೂರಪ್ಪ ಭಾನುವಾರ ಬೆಳಿಗ್ಗೆ ಬೆಳಗಾವಿಯಲ್ಲಿ ಹೇಳಿದ್ದರು. ಅವರು, “ಸಂಜೆಯ ಹೊತ್ತಿಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಮಾಧ್ಯಮಗಳು ಸಹ ಇದರ ಬಗ್ಗೆ ತಿಳಿದುಕೊಳ್ಳುವಿರಿ” ಎಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದ್ದರು. ಇದಾದ ಕೆಲ ಗಂಟೆಗಳಲ್ಲಿಯೇ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರತಿಕ್ರಿಯಿಸಿದ್ದು, ಭಾರಿ ಮಹತ್ವ ಪಡೆದುಕೊಂಡಿದೆ.

ಯಡಿಯೂರಪ್ಪ ಅವರ ಸರ್ಕಾರವು ಅಧಿಕಾರಕ್ಕೆ ಬಂದು ಇನ್ನೆರೆಡು ದಿನಗಳಲ್ಲಿ ಎರಡು ವರ್ಷಗಳಾಗಿದೆ. ಹಿಂದಿನಿಂದಲೂ ಅವರ ನಾಯಕತ್ವದ ಬಗ್ಗೆ ಬಿಜೆಪಿಯೊಳಗೆ ಅಸಮಾಧಾನಗಳು ಇದ್ದವು. ಇದನ್ನು ಪಕ್ಷದ ನಾಯಕರೆ ಬಹಿರಂಗವಾಗಿ ಹೇಳಿದ್ದರು. ಈ ಹಿಂದೆ ಕೂಡಾ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕದಲ್ಲಿ ಸರಣಿ ಸಭೆಗಳನ್ನು ನಡೆಸಿ, ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳಿದ್ದರು. ಆದರೆ ಅದರ ನಂತರ ಕೂಡಾ ಪಕ್ಷದೊಳಗಿನ ಕಚ್ಚಾಟಗಳು ನಿಂತಿರಲಿಲ್ಲ.

ಇದನ್ನೂ ಓದಿ: ಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿ ಸರಣಿ ಸಭೆಯನ್ನು ನಡೆಸಿದ್ದರು. ಆದರೆ ಸಭೆಯ ನಂತರ ಅವರು ಅನಾರೋಗ್ಯದ ಕಾರಣ ನೀಡಿ ರಾಜೀನಾಮೆಗೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದಾಗ್ಯೂ, ಅಲ್ಲಿ ಅವರು ರಾಜೀನಾಮೆಯ ಸುದ್ದಿಯನ್ನು ಅಲ್ಲಗೆಳೆದಿದ್ದರು. ಆದರೆ ಗುರವಾರದಂದು ಮತ್ತೇ ರಾಜೀನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದ ಯಡಿಯೂರಪ್ಪ, ಹೈಕಮಾಂಡ್‌ನಿಂದ ಸಂದೇಶವನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ಅದಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದರು.

ಈ ಮಧ್ಯೆ ಸೋಮವಾರದಂದು ತಮ್ಮ ಸರ್ಕಾರದ ಎರಡು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆಯನ್ನು ಯಡಿಯೂರಪ್ಪ ನಡೆಸಲಿದ್ದಾರೆ. ಈ ಬಗ್ಗೆ ವಿಧಾನ ಸೌಧದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು, ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿಮಾಡುವ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಲಾಗುತ್ತದೆ.

ನಾಯಕತ್ವದ ಬದಲಾವಣೆಯ ಬಗ್ಗೆ ಕೇಂದ್ರ ನಾಯಕರು ಉತ್ಸುಕರಾಗಿದ್ದರೂ, ಯಡಿಯೂರಪ್ಪ ಅವರ ಉತ್ತರಾಧಿಕಾರಿಯನ್ನು ಅವರು ಇನ್ನೂ ನಿರ್ಧರಿಸಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೆ ಪ್ರವಾಹದಿಂದ ಸಾವಿರಾರು ಜನರು ಕಷ್ಟ ಪಡುತ್ತಿರುವಾಗ ಮುಖ್ಯಮಂತ್ರಿ ಬದಲಾವಣೆಯು ಪಕ್ಷಕ್ಕೆ ಅಪಾಯ ತಂದೊಡ್ಡಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: ವರಿಷ್ಠರ ಸೂಚನೆಯಂತೆ ನಡೆಯುವೆ: ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ವಿಡಿಯೊ ನೋಡಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದ ಕೇಂದ್ರ ಸರ್ಕಾರ.. ಹಾಗಾದರೆ ಇವು ಏನು??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...