Homeಮುಖಪುಟಭ್ರಷ್ಟಾಚಾರವನ್ನು ಶರವೇಗದಲ್ಲಿ ಬೆಳೆಸುತ್ತಿರುವ ಅಮಿತ್ ಶಾ ಮತ್ತು ಬಿಜೆಪಿ...

ಭ್ರಷ್ಟಾಚಾರವನ್ನು ಶರವೇಗದಲ್ಲಿ ಬೆಳೆಸುತ್ತಿರುವ ಅಮಿತ್ ಶಾ ಮತ್ತು ಬಿಜೆಪಿ…

ಸ್ಥಿರ ಸರ್ಕಾರಕ್ಕಾಗಿ ಲೋಕಸಭೆಯಲ್ಲಿ ಜನತೆ ಕೊಟ್ಟ ಭಾರೀ ಬಹುಮತವನ್ನು ಬಿಜೆಪಿ, ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಮತ್ತು ಭ್ರಷ್ಟಾಚಾರ ಹೆಚ್ಚು ಮಾಡಲು ಬಳಸುತ್ತಿರುವುದು ದುರಂತ

- Advertisement -
- Advertisement -

ಚುನಾವಣಾ ಅಫಿಡವಿಟ್‍ನಲ್ಲಿ ಘೋಷಿಸಿಕೊಂಡಂತೆ ಭಾರತದ ಅತ್ಯಂತ ಶ್ರೀಮಂತ ಎಂ.ಎಲ್.ಎ ಇವರು. ಅದು ಬರೋಬ್ಬರಿ 1015 ಕೋಟಿ ರೂಗಳ ಒಡೆಯ. ಇವರು ಕರ್ನಾಟಕದವರೆಂಬ ಹೆಮ್ಮೆ ಪಡುವ ವಿಷಯವೇನಲ್ಲ… ಅವರೇ ಶ್ರೀಮಂತ ರಾಜಕಾರಣಿ ಎಂಟಿಬಿ ನಾಗರಾಜ್.. ಹೊಸಕೋಟೆಯ ಶಾಸಕ ಮತ್ತು ಕರ್ನಾಟದ ವಸತಿ ಸಚಿವರಾಗಿದ್ದ ಇವರು ಸದ್ಯಕ್ಕೆ ಅತೃಪ್ತರ ಗ್ಯಾಂಗ್ ನಲ್ಲಿದ್ದಾರೆ.

ಇನ್ನು ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ.

ಅ (ತೃಪ್ತ) ರಾಜಕಾರಣಿ, ಬಹುದೊಡ್ಡ ಸಿನಿಮಾ ನಿರ್ಮಾಪಕ, ಅಗರ್ಭ ಶ್ರೀಮಂತ, ಹಗರಣಗಳ ಸರದಾರ ಮುನಿರತ್ನ.. ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ. ಇವರಿಗೂ ಯಾವ ರೀತಿಯ ಅತೃಪ್ತಿಯೋ ಗೊತ್ತಿಲ್ಲ, ಕ್ಷೇತ್ರ ಬಿಟ್ಟು ರಾಜಿನಾಮೆ ಕೊಟ್ಟು ಮುಂಬೈ ಸೇರಿಕೊಂಡಿದ್ದಾರೆ. ಇವರಿಬ್ಬರಷ್ಟೇ ಅಲ್ಲ, ಇದೇ ರೀತಿ ಅಗರ್ಭ ಶ್ರೀಮಂತರಾದ ಹೆಬ್ಬಾಳ ಶಾಸಕ ಭೈರತಿ ಸುರೇಶ್, ಯಶವಂತಪುರದ ಶಾಸಕ ಎಸ್.ಟಿ ಸೋಮಶೇಖರ್, ಮಾಜಿ ಸಚಿವ ಬಿಟಿಎಂ ಲೇಔಟ್‍ನ ರಾಮಲಿಂಗಾರೆಡ್ಡಿ ಸಹ ಕಾಂಗ್ರೆಸ್ ನೊಂದಿಗೆ ಮುನಿಸಿಕೊಂಡು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯ ಸಂಪೂರ್ಣ ಬೆಂಬಲದಿಂದ ಬದುಕುತ್ತಿದ್ದಾರೆ.

ಇವರೇಕೆ ಹೀಗೆ ಮಾಡಿದರು? ಇವರಿಗೆ ಹಣದ ಕೊರತೆಯಿಲ್ಲ ಹಾಗಾಗಿ ಬಿಜೆಪಿ ಇವರನ್ನು ಹಣದಿಂದ ಕೊಳ್ಳಲು ಸಾಧ್ಯವಿಲ್ಲ. ಇನ್ನು ಅಧಿಕಾರದ ಆಸೆಯ ಸೆಳೆಯುವಿಕೆಯೂ ಸಾಧ್ಯವಿಲ್ಲ. ಆದರೂ ಸಹ ಇವರೆಲ್ಲರೂ ಪಕ್ಷ ಬಿಟ್ಟು ಹೋಗಲಿಕ್ಕೆ ಕಾರಣವೇನು? ಉಳಿದವರು ಬಿಟ್ಟುಬಿಡೋಣ ಎಂಟಿಬಿ ನಾಗರಾಜ್ ರವರಿಗೆ ಸಾವಿರಾರು ಕೋಟಿ ಘೋಷಿತ ಆಸ್ತಿ ಇದೆ. ವಸತಿ ಸಚಿವ ಸ್ಥಾನವೂ ಇದೆ. ಸಿದ್ದರಾಮಯ್ಯನವರ ಆಪ್ತ ಬಳಗದವರು. ಅವರೇಕೆ ಪಕ್ಷ ಬಿಟ್ಟು ಹೋಗುತ್ತಿದ್ದಾರೆ? ಅವರಿಗೆ ಬಿಜೆಪಿಯವರು ಏನು ಕೊಡಲಿಕ್ಕೆ ಸಾಧ್ಯ? ಬಿಜೆಪಿ ಇವರಿಗೆ ಯಾವುದೇ ಆಮಿಷ ಒಡ್ಡಿಲ್ಲದಿದ್ದರೂ ಏಕೆ ಹೋದರು?

ಬಿಜೆಪಿ ಮಾಡಿದ್ದು ಇಷ್ಟೆ.

ಬಿಜೆಪಿ ಕೆಲ ಆಯ್ದ ಶಾಸಕರಿಗೆ ಕೊಟ್ಟ ಸೂಚನೆ ಇಷ್ಟೇ. ಕೇವಲ ಒಂದೇ ಮಾತು ಹೇಳದ್ದು. ಅದೇಂದರೆ 4 ದಿನದಲ್ಲಿ ರಾಜೀನಾಮೆ ಕೊಟ್ಟು ಬರಬೇಕು ಅಷ್ಟೇ. ಬಿಜೆಪಿ ಇವರಿಗೆ ಧಮಕಿ ಕೂಡ ಹಾಕಿಲ್ಲ. ಆ ಬಿಜೆಪಿಯವರ ಮಾತನ್ನು ಶಿರಾವಹಿಸಿ ಪಾಲಿಸಿದವರು ಈ ಶಾಸಕರು. ಇಲ್ಲದಿದ್ದರೆ ಈ ಶ್ರೀಮಂತ ಎಮ್ಮೆಲ್ಲೆಗಳಿಗೆ ಇಡಿ ಐಟಿ ಸಿಬಿಐ ರೈಡ್ ನಂತಹ ಅಸ್ತ್ರಗಳು ಕಾದು ಕುಳಿತಿದ್ದವು. ಮೊದಲೇ ಸಾಕಷ್ಟು ಸಂಪತ್ತಿನ ಒಡೆಯರಾದ ಇವರಿಗೆ ತಮ್ಮ ಸಂಪತ್ತನ್ನು ಉಳಿಸಿಕೊಳ್ಳಬೇಕಾದರೆ ಇದ್ದ ಮಾರ್ಗ ಒಂದೇ ಅದು ರಾಜೀನಾಮೆ ಕೊಡುವುದು.

ಇದರ ಕುರಿತು ರಾಮಲಿಂಗರೆಡ್ಡಿ ಸೂಚ್ಯವಾಗಿ ಹೇಳಿದ್ದಾರೆ. ನನ್ನನ್ನು ಸೇರಿದಂತೆ ನಮ್ಮ ಶಾಸಕರ ಮೇಲಿನ ದಾಳಿಗಳನ್ನು ತಡೆಯಲು ಪಕ್ಷ ಏನು ಮಾಡಿದೆ? ನಮಗೆ ಯಾವ ರೀತಿಯ ರಕ್ಷಣೆ ನೀಡಿದೆ ಎಂದು ಕೇಳಿದರು. ಅದಕ್ಕೆ ಕಾಂಗ್ರೆಸ್ಸಿನ ಯಾವ ನಾಯಕನ ಬಳಿಯೂ ಉತ್ತರವಿರಲಿಲ್ಲ. ಇದರ ಸುಳಿವ ಅರಿತ ಮತ್ತು ಈ ದಾಳಿಗಳನ್ನು ಮೂರು ವರ್ಷಗಳಿಂದಲೂ ಎದುರಿಸುತ್ತಿರುವ ಡಿ.ಕೆ ಶಿವಕುಮಾರ್ ಎಂಟಿಬಿ ನಾಗಾರಾಜ್‍ರನ್ನು ಮನವೊಲಿಸುತ್ತಾ ನನ್ನ ಮೇಲೆಯೂ ಐಟಿ ಇಡಿ ದಾಳಿ ಆಗಿದೆ. ಹಾಗಂತ ಹೆದರೋಕೆ ಆಗುತ್ತಾ ಎಂದು ಹೇಳಿಯೇ ಸ್ವಲ್ಪ ಮಟ್ಟಿಗೆ ಕನ್ವಿನ್ಸ್ ಮಾಡಿದ್ದರು. ಆದರೆ ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿರುವುದು, ಕೇಂದ್ರದಲ್ಲಿ ಬಿಜೆಪಿ ಭಾರೀ ಅಂತರದಲ್ಲಿ ಗೆದ್ದಿರುವುದನ್ನು ಕಂಡಿರುವ ಎಂಟಿಬಿ ನಾಗರಾಜ್‍ಗೆ ಧೈರ್ಯ ಸಾಲಲಿಲ್ಲ. ಅವರು ಡಿಕೆಶಿ ಕಣ್ತಪ್ಪಿಸಿ ಮುಂಬೈಗೆ ವಿಮಾನ ಹತ್ತಿದರು.

ಕರ್ನಾಟಕದ ಈ ಎಲ್ಲಾ ನಾಟಕದ ಹಿಂದೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಕೈವಾಡವಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬರೆಯಿತು. ಆನಂತರ ಟೈಮ್ಸ್ ಪತ್ರಿಕೆ ತನ್ನ ಬರವಣಿಗೆಯಿಂದ ಹಿಂದೆ ಸರಿಯಿತು. ಕಾರಣ ಯಾರಾದರೂ ಊಹಿಸಿಕೊಳ್ಳಬಹುದು.

ಅಧಿಕಾರ ದುರುಪಯೋಗ

ಈ ಎಲ್ಲಾ ಬೆಳವಣಿಗೆಗಳ ಹಿಂದಿರುವ ನಿಜವಾದ ಸೂತ್ರದಾರ ಅಮಿತ್ ಶಾ ಎಂದು ಹೇಳಲಾಗುತ್ತಿದೆ. ಅಮಿತವಾದ ಅವಕಾಶವಿರುವಾಗ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವುದನ್ನು ಬಿಟ್ಟು ಗೊಂದಲ ಸೃಷ್ಟಿಸುತ್ತಾ ಸಾಗಿರುವ ಶಾ ನ ಮುಂದಿನ ನಡೆಯ ಬಗ್ಗೆ ಲೆಕ್ಕಾ ಹಾಕುವುದು ಕಷ್ಟ ಸಾಧ್ಯವಾಗಿದೆ. ಆದರೆ ಲೋಕಸಭೆಯಲ್ಲಿ ಬಿಜೆಪಿಗೆ ಜನತೆ ನೀಡಿರುವ ಬಹುಮತವನ್ನು ದುರುಪಯೋಗಮಾಡಿಕೊಂಡು ಈ ರೀತಿ ಶಾಸಕರನ್ನು ಎದುರಿಸುತ್ತಿದ್ದಾರೆ ಎನ್ನುವುದು ಮಾತ್ರ ಸೂರ್ಯನಷ್ಟೇ ಸ್ಪಷ್ಟವಾಗಿದೆ.

 

ಇದೇ ಸಂದರ್ಭದಲ್ಲಿ ಗೋವಾದಲ್ಲಿಯೂ ಸಹ ಕಾಂಗ್ರೆಸ್ ನ ಹತ್ತು ಶಾಸಕರು ಕಾಂಗ್ರೆಸ್ ತೊರೆದು ಸಾಮೂಹಿಕವಾಗಿ ಬಿಜೆಪಿ ಸೇರಿದ್ದಾಗಿದೆ. ಅದರಲ್ಲಿ ಕೆಲವರಿಗೆ ಸಚಿವ ಸ್ಥಾನ, ಉಪಮುಖ್ಯಮಂತ್ರಿ ಹುದ್ದೆಗಳು ಸಹ ದೊರೆತಿವೆ. ಸಮಸ್ಯೆ ಇರುವುದು ಇಲ್ಲಿಯೇ.. ಶಾಸಕರು ಅಕ್ರಮ/ಬೇನಾಮಿ ಆಸ್ತಿ ಮಾಡಿದ್ದರೆ, ಜನರ ಹಣವನ್ನು ಲೂಟಿ ಮಾಡಿದ್ದರೆ, ತೆರಿಗೆ ವಂಚನೆ ಮಾಡಿದ್ದರೆ ಅವರ ಮೇಲೆ ಖಂಡಿತ ಈಡಿ ಐಟಿ ಸಿಬಿಐ ದಾಳಿ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಅಕ್ರಮ ಸಂಪತ್ತನ್ನು ಸರ್ಕಾರ ಬೊಕ್ಕಸಕ್ಕೆ ಸೇರಿಸಬೇಕು. ಅದು ಸಾಂವಿಧಾನಿಕ ಕ್ರಮ. ಆದರೆ ಬಿಜೆಪಿ ಹಾಗೆ ಮಾಡುತ್ತಿಲ್ಲ. ಬದಲಿಗೆ ಆ ಬೆದರಿಕೆ ಒಡ್ಡಿ ಅವರನ್ನು ತಮ್ಮ ಪಕ್ಷಗಳತ್ತ ಸೆಳೆದುಕೊಂಡು ಅಕ್ರಮ ಮಾರ್ಗದಲ್ಲಿ ಸರ್ಕಾರ ರಚಿಸುತ್ತಿದೆ. ಅವರಿಗೆ ಮಂತ್ರಿ ಪದವಿ ಜೊತೆಗೆ ಮತ್ತಷ್ಟು ಹಣದ ಹೊಳೆ ಹರಿಸುತ್ತಿದೆ. (ಆ ಹಣದ ಮೂಲ ಕೆದಕಿದರೆ ಅದು ಜನಸಾಮಾನ್ಯರ ತೆರಿಗೆ ಎಂಬುದು ಸ್ಪಷ್ಟವಾಗುತ್ತದೆ) ಆ ಮೂಲಕ ಭ್ರಷ್ಟರನ್ನು ಮತ್ತಷ್ಟು ಕೊಬ್ಬಿಸುವುದರ ಜೊತೆಗೆ ಭ್ರಷ್ಟಾಚಾರಕ್ಕೆ ಮತ್ತಷ್ಟು ಪ್ರೋತ್ಸಾಹ ಕೊಡುತ್ತಿದೆ. ಸ್ಥಿರ ಸರ್ಕಾರ ರಚಿಸುವ ಸಲುವಾಗಿ ಜನರು ಕೊಟ್ಟ ಬಹುಮತವನ್ನು ಈ ರೀತಿ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ ಸ್ಥಾಪನೆಗೆ ಮುಂದಾಗುತ್ತಿದೆ.

ಬಿಜೆಪಿಯ ಆಟ ಇಲ್ಲಿಗೆ ನಿಲ್ಲಲ್ಲಿದೆ ಎಂದು ತಿಳಿಯಬೇಡಿ. ಆ ಪಕ್ಷದ ಮುಖುಲ್ ರಾಯ್ ಎಂಬುವವರು ಈಗಾಗಲೇ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ಪಕ್ಷಗಳಿಂದ ಸುಮಾರು 107 ಜನ ಶಾಸಕರ ತಮ್ಮ ಪಕ್ಷ ತೊರೆದು ನಮ್ಮ ಪಕ್ಷ ಸೇರಲಿದ್ದಾರೆ ಎಂದು ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಈ ರೀತಿ ಇವರು ಬಹಿರಂಗವಾಗಿಯೇ ಕುದುರೆ ವ್ಯಾಪಾರಕ್ಕೆ ನಿಂತಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಟಿಎಂಸಿಯ 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಅವರೆಲ್ಲಾ ಟಿಎಂಸಿ ತ್ಯಜಿಸಿ ಬಿಜೆಪಿ ಸೇರಲಿದ್ದಾರೆ ಎಂದು ಬಹಿರಂಗ ಬೆದರಿಕೆ ಒಡ್ಡಿದ್ದನ್ನು ನಾವು ಮರೆಯಬಾರದು. ನಿನ್ನೆ ತಾನೇ ಐಎಂಎ ಆರೋಪಿ ರೋಷನ್ ಬೇಗ್ ನನ್ನು ಸಹ ಪಕ್ಷಕ್ಕೆ ಸೇರಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದರು. ಕೊನೆ ಕ್ಷಣದಲ್ಲಿ ಎಸ್.ಐ.ಟಿ ದಾಳಿಯಿಂದ ವಿಫಲವಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...