Homeಮುಖಪುಟಭ್ರಷ್ಟಾಚಾರವನ್ನು ಶರವೇಗದಲ್ಲಿ ಬೆಳೆಸುತ್ತಿರುವ ಅಮಿತ್ ಶಾ ಮತ್ತು ಬಿಜೆಪಿ...

ಭ್ರಷ್ಟಾಚಾರವನ್ನು ಶರವೇಗದಲ್ಲಿ ಬೆಳೆಸುತ್ತಿರುವ ಅಮಿತ್ ಶಾ ಮತ್ತು ಬಿಜೆಪಿ…

ಸ್ಥಿರ ಸರ್ಕಾರಕ್ಕಾಗಿ ಲೋಕಸಭೆಯಲ್ಲಿ ಜನತೆ ಕೊಟ್ಟ ಭಾರೀ ಬಹುಮತವನ್ನು ಬಿಜೆಪಿ, ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಮತ್ತು ಭ್ರಷ್ಟಾಚಾರ ಹೆಚ್ಚು ಮಾಡಲು ಬಳಸುತ್ತಿರುವುದು ದುರಂತ

- Advertisement -
- Advertisement -

ಚುನಾವಣಾ ಅಫಿಡವಿಟ್‍ನಲ್ಲಿ ಘೋಷಿಸಿಕೊಂಡಂತೆ ಭಾರತದ ಅತ್ಯಂತ ಶ್ರೀಮಂತ ಎಂ.ಎಲ್.ಎ ಇವರು. ಅದು ಬರೋಬ್ಬರಿ 1015 ಕೋಟಿ ರೂಗಳ ಒಡೆಯ. ಇವರು ಕರ್ನಾಟಕದವರೆಂಬ ಹೆಮ್ಮೆ ಪಡುವ ವಿಷಯವೇನಲ್ಲ… ಅವರೇ ಶ್ರೀಮಂತ ರಾಜಕಾರಣಿ ಎಂಟಿಬಿ ನಾಗರಾಜ್.. ಹೊಸಕೋಟೆಯ ಶಾಸಕ ಮತ್ತು ಕರ್ನಾಟದ ವಸತಿ ಸಚಿವರಾಗಿದ್ದ ಇವರು ಸದ್ಯಕ್ಕೆ ಅತೃಪ್ತರ ಗ್ಯಾಂಗ್ ನಲ್ಲಿದ್ದಾರೆ.

ಇನ್ನು ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ.

ಅ (ತೃಪ್ತ) ರಾಜಕಾರಣಿ, ಬಹುದೊಡ್ಡ ಸಿನಿಮಾ ನಿರ್ಮಾಪಕ, ಅಗರ್ಭ ಶ್ರೀಮಂತ, ಹಗರಣಗಳ ಸರದಾರ ಮುನಿರತ್ನ.. ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ. ಇವರಿಗೂ ಯಾವ ರೀತಿಯ ಅತೃಪ್ತಿಯೋ ಗೊತ್ತಿಲ್ಲ, ಕ್ಷೇತ್ರ ಬಿಟ್ಟು ರಾಜಿನಾಮೆ ಕೊಟ್ಟು ಮುಂಬೈ ಸೇರಿಕೊಂಡಿದ್ದಾರೆ. ಇವರಿಬ್ಬರಷ್ಟೇ ಅಲ್ಲ, ಇದೇ ರೀತಿ ಅಗರ್ಭ ಶ್ರೀಮಂತರಾದ ಹೆಬ್ಬಾಳ ಶಾಸಕ ಭೈರತಿ ಸುರೇಶ್, ಯಶವಂತಪುರದ ಶಾಸಕ ಎಸ್.ಟಿ ಸೋಮಶೇಖರ್, ಮಾಜಿ ಸಚಿವ ಬಿಟಿಎಂ ಲೇಔಟ್‍ನ ರಾಮಲಿಂಗಾರೆಡ್ಡಿ ಸಹ ಕಾಂಗ್ರೆಸ್ ನೊಂದಿಗೆ ಮುನಿಸಿಕೊಂಡು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯ ಸಂಪೂರ್ಣ ಬೆಂಬಲದಿಂದ ಬದುಕುತ್ತಿದ್ದಾರೆ.

ಇವರೇಕೆ ಹೀಗೆ ಮಾಡಿದರು? ಇವರಿಗೆ ಹಣದ ಕೊರತೆಯಿಲ್ಲ ಹಾಗಾಗಿ ಬಿಜೆಪಿ ಇವರನ್ನು ಹಣದಿಂದ ಕೊಳ್ಳಲು ಸಾಧ್ಯವಿಲ್ಲ. ಇನ್ನು ಅಧಿಕಾರದ ಆಸೆಯ ಸೆಳೆಯುವಿಕೆಯೂ ಸಾಧ್ಯವಿಲ್ಲ. ಆದರೂ ಸಹ ಇವರೆಲ್ಲರೂ ಪಕ್ಷ ಬಿಟ್ಟು ಹೋಗಲಿಕ್ಕೆ ಕಾರಣವೇನು? ಉಳಿದವರು ಬಿಟ್ಟುಬಿಡೋಣ ಎಂಟಿಬಿ ನಾಗರಾಜ್ ರವರಿಗೆ ಸಾವಿರಾರು ಕೋಟಿ ಘೋಷಿತ ಆಸ್ತಿ ಇದೆ. ವಸತಿ ಸಚಿವ ಸ್ಥಾನವೂ ಇದೆ. ಸಿದ್ದರಾಮಯ್ಯನವರ ಆಪ್ತ ಬಳಗದವರು. ಅವರೇಕೆ ಪಕ್ಷ ಬಿಟ್ಟು ಹೋಗುತ್ತಿದ್ದಾರೆ? ಅವರಿಗೆ ಬಿಜೆಪಿಯವರು ಏನು ಕೊಡಲಿಕ್ಕೆ ಸಾಧ್ಯ? ಬಿಜೆಪಿ ಇವರಿಗೆ ಯಾವುದೇ ಆಮಿಷ ಒಡ್ಡಿಲ್ಲದಿದ್ದರೂ ಏಕೆ ಹೋದರು?

ಬಿಜೆಪಿ ಮಾಡಿದ್ದು ಇಷ್ಟೆ.

ಬಿಜೆಪಿ ಕೆಲ ಆಯ್ದ ಶಾಸಕರಿಗೆ ಕೊಟ್ಟ ಸೂಚನೆ ಇಷ್ಟೇ. ಕೇವಲ ಒಂದೇ ಮಾತು ಹೇಳದ್ದು. ಅದೇಂದರೆ 4 ದಿನದಲ್ಲಿ ರಾಜೀನಾಮೆ ಕೊಟ್ಟು ಬರಬೇಕು ಅಷ್ಟೇ. ಬಿಜೆಪಿ ಇವರಿಗೆ ಧಮಕಿ ಕೂಡ ಹಾಕಿಲ್ಲ. ಆ ಬಿಜೆಪಿಯವರ ಮಾತನ್ನು ಶಿರಾವಹಿಸಿ ಪಾಲಿಸಿದವರು ಈ ಶಾಸಕರು. ಇಲ್ಲದಿದ್ದರೆ ಈ ಶ್ರೀಮಂತ ಎಮ್ಮೆಲ್ಲೆಗಳಿಗೆ ಇಡಿ ಐಟಿ ಸಿಬಿಐ ರೈಡ್ ನಂತಹ ಅಸ್ತ್ರಗಳು ಕಾದು ಕುಳಿತಿದ್ದವು. ಮೊದಲೇ ಸಾಕಷ್ಟು ಸಂಪತ್ತಿನ ಒಡೆಯರಾದ ಇವರಿಗೆ ತಮ್ಮ ಸಂಪತ್ತನ್ನು ಉಳಿಸಿಕೊಳ್ಳಬೇಕಾದರೆ ಇದ್ದ ಮಾರ್ಗ ಒಂದೇ ಅದು ರಾಜೀನಾಮೆ ಕೊಡುವುದು.

ಇದರ ಕುರಿತು ರಾಮಲಿಂಗರೆಡ್ಡಿ ಸೂಚ್ಯವಾಗಿ ಹೇಳಿದ್ದಾರೆ. ನನ್ನನ್ನು ಸೇರಿದಂತೆ ನಮ್ಮ ಶಾಸಕರ ಮೇಲಿನ ದಾಳಿಗಳನ್ನು ತಡೆಯಲು ಪಕ್ಷ ಏನು ಮಾಡಿದೆ? ನಮಗೆ ಯಾವ ರೀತಿಯ ರಕ್ಷಣೆ ನೀಡಿದೆ ಎಂದು ಕೇಳಿದರು. ಅದಕ್ಕೆ ಕಾಂಗ್ರೆಸ್ಸಿನ ಯಾವ ನಾಯಕನ ಬಳಿಯೂ ಉತ್ತರವಿರಲಿಲ್ಲ. ಇದರ ಸುಳಿವ ಅರಿತ ಮತ್ತು ಈ ದಾಳಿಗಳನ್ನು ಮೂರು ವರ್ಷಗಳಿಂದಲೂ ಎದುರಿಸುತ್ತಿರುವ ಡಿ.ಕೆ ಶಿವಕುಮಾರ್ ಎಂಟಿಬಿ ನಾಗಾರಾಜ್‍ರನ್ನು ಮನವೊಲಿಸುತ್ತಾ ನನ್ನ ಮೇಲೆಯೂ ಐಟಿ ಇಡಿ ದಾಳಿ ಆಗಿದೆ. ಹಾಗಂತ ಹೆದರೋಕೆ ಆಗುತ್ತಾ ಎಂದು ಹೇಳಿಯೇ ಸ್ವಲ್ಪ ಮಟ್ಟಿಗೆ ಕನ್ವಿನ್ಸ್ ಮಾಡಿದ್ದರು. ಆದರೆ ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿರುವುದು, ಕೇಂದ್ರದಲ್ಲಿ ಬಿಜೆಪಿ ಭಾರೀ ಅಂತರದಲ್ಲಿ ಗೆದ್ದಿರುವುದನ್ನು ಕಂಡಿರುವ ಎಂಟಿಬಿ ನಾಗರಾಜ್‍ಗೆ ಧೈರ್ಯ ಸಾಲಲಿಲ್ಲ. ಅವರು ಡಿಕೆಶಿ ಕಣ್ತಪ್ಪಿಸಿ ಮುಂಬೈಗೆ ವಿಮಾನ ಹತ್ತಿದರು.

ಕರ್ನಾಟಕದ ಈ ಎಲ್ಲಾ ನಾಟಕದ ಹಿಂದೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಕೈವಾಡವಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬರೆಯಿತು. ಆನಂತರ ಟೈಮ್ಸ್ ಪತ್ರಿಕೆ ತನ್ನ ಬರವಣಿಗೆಯಿಂದ ಹಿಂದೆ ಸರಿಯಿತು. ಕಾರಣ ಯಾರಾದರೂ ಊಹಿಸಿಕೊಳ್ಳಬಹುದು.

ಅಧಿಕಾರ ದುರುಪಯೋಗ

ಈ ಎಲ್ಲಾ ಬೆಳವಣಿಗೆಗಳ ಹಿಂದಿರುವ ನಿಜವಾದ ಸೂತ್ರದಾರ ಅಮಿತ್ ಶಾ ಎಂದು ಹೇಳಲಾಗುತ್ತಿದೆ. ಅಮಿತವಾದ ಅವಕಾಶವಿರುವಾಗ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವುದನ್ನು ಬಿಟ್ಟು ಗೊಂದಲ ಸೃಷ್ಟಿಸುತ್ತಾ ಸಾಗಿರುವ ಶಾ ನ ಮುಂದಿನ ನಡೆಯ ಬಗ್ಗೆ ಲೆಕ್ಕಾ ಹಾಕುವುದು ಕಷ್ಟ ಸಾಧ್ಯವಾಗಿದೆ. ಆದರೆ ಲೋಕಸಭೆಯಲ್ಲಿ ಬಿಜೆಪಿಗೆ ಜನತೆ ನೀಡಿರುವ ಬಹುಮತವನ್ನು ದುರುಪಯೋಗಮಾಡಿಕೊಂಡು ಈ ರೀತಿ ಶಾಸಕರನ್ನು ಎದುರಿಸುತ್ತಿದ್ದಾರೆ ಎನ್ನುವುದು ಮಾತ್ರ ಸೂರ್ಯನಷ್ಟೇ ಸ್ಪಷ್ಟವಾಗಿದೆ.

 

ಇದೇ ಸಂದರ್ಭದಲ್ಲಿ ಗೋವಾದಲ್ಲಿಯೂ ಸಹ ಕಾಂಗ್ರೆಸ್ ನ ಹತ್ತು ಶಾಸಕರು ಕಾಂಗ್ರೆಸ್ ತೊರೆದು ಸಾಮೂಹಿಕವಾಗಿ ಬಿಜೆಪಿ ಸೇರಿದ್ದಾಗಿದೆ. ಅದರಲ್ಲಿ ಕೆಲವರಿಗೆ ಸಚಿವ ಸ್ಥಾನ, ಉಪಮುಖ್ಯಮಂತ್ರಿ ಹುದ್ದೆಗಳು ಸಹ ದೊರೆತಿವೆ. ಸಮಸ್ಯೆ ಇರುವುದು ಇಲ್ಲಿಯೇ.. ಶಾಸಕರು ಅಕ್ರಮ/ಬೇನಾಮಿ ಆಸ್ತಿ ಮಾಡಿದ್ದರೆ, ಜನರ ಹಣವನ್ನು ಲೂಟಿ ಮಾಡಿದ್ದರೆ, ತೆರಿಗೆ ವಂಚನೆ ಮಾಡಿದ್ದರೆ ಅವರ ಮೇಲೆ ಖಂಡಿತ ಈಡಿ ಐಟಿ ಸಿಬಿಐ ದಾಳಿ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಅಕ್ರಮ ಸಂಪತ್ತನ್ನು ಸರ್ಕಾರ ಬೊಕ್ಕಸಕ್ಕೆ ಸೇರಿಸಬೇಕು. ಅದು ಸಾಂವಿಧಾನಿಕ ಕ್ರಮ. ಆದರೆ ಬಿಜೆಪಿ ಹಾಗೆ ಮಾಡುತ್ತಿಲ್ಲ. ಬದಲಿಗೆ ಆ ಬೆದರಿಕೆ ಒಡ್ಡಿ ಅವರನ್ನು ತಮ್ಮ ಪಕ್ಷಗಳತ್ತ ಸೆಳೆದುಕೊಂಡು ಅಕ್ರಮ ಮಾರ್ಗದಲ್ಲಿ ಸರ್ಕಾರ ರಚಿಸುತ್ತಿದೆ. ಅವರಿಗೆ ಮಂತ್ರಿ ಪದವಿ ಜೊತೆಗೆ ಮತ್ತಷ್ಟು ಹಣದ ಹೊಳೆ ಹರಿಸುತ್ತಿದೆ. (ಆ ಹಣದ ಮೂಲ ಕೆದಕಿದರೆ ಅದು ಜನಸಾಮಾನ್ಯರ ತೆರಿಗೆ ಎಂಬುದು ಸ್ಪಷ್ಟವಾಗುತ್ತದೆ) ಆ ಮೂಲಕ ಭ್ರಷ್ಟರನ್ನು ಮತ್ತಷ್ಟು ಕೊಬ್ಬಿಸುವುದರ ಜೊತೆಗೆ ಭ್ರಷ್ಟಾಚಾರಕ್ಕೆ ಮತ್ತಷ್ಟು ಪ್ರೋತ್ಸಾಹ ಕೊಡುತ್ತಿದೆ. ಸ್ಥಿರ ಸರ್ಕಾರ ರಚಿಸುವ ಸಲುವಾಗಿ ಜನರು ಕೊಟ್ಟ ಬಹುಮತವನ್ನು ಈ ರೀತಿ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ ಸ್ಥಾಪನೆಗೆ ಮುಂದಾಗುತ್ತಿದೆ.

ಬಿಜೆಪಿಯ ಆಟ ಇಲ್ಲಿಗೆ ನಿಲ್ಲಲ್ಲಿದೆ ಎಂದು ತಿಳಿಯಬೇಡಿ. ಆ ಪಕ್ಷದ ಮುಖುಲ್ ರಾಯ್ ಎಂಬುವವರು ಈಗಾಗಲೇ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ಪಕ್ಷಗಳಿಂದ ಸುಮಾರು 107 ಜನ ಶಾಸಕರ ತಮ್ಮ ಪಕ್ಷ ತೊರೆದು ನಮ್ಮ ಪಕ್ಷ ಸೇರಲಿದ್ದಾರೆ ಎಂದು ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಈ ರೀತಿ ಇವರು ಬಹಿರಂಗವಾಗಿಯೇ ಕುದುರೆ ವ್ಯಾಪಾರಕ್ಕೆ ನಿಂತಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಟಿಎಂಸಿಯ 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಅವರೆಲ್ಲಾ ಟಿಎಂಸಿ ತ್ಯಜಿಸಿ ಬಿಜೆಪಿ ಸೇರಲಿದ್ದಾರೆ ಎಂದು ಬಹಿರಂಗ ಬೆದರಿಕೆ ಒಡ್ಡಿದ್ದನ್ನು ನಾವು ಮರೆಯಬಾರದು. ನಿನ್ನೆ ತಾನೇ ಐಎಂಎ ಆರೋಪಿ ರೋಷನ್ ಬೇಗ್ ನನ್ನು ಸಹ ಪಕ್ಷಕ್ಕೆ ಸೇರಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದರು. ಕೊನೆ ಕ್ಷಣದಲ್ಲಿ ಎಸ್.ಐ.ಟಿ ದಾಳಿಯಿಂದ ವಿಫಲವಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...