Homeಮುಖಪುಟಭ್ರಷ್ಟಾಚಾರವನ್ನು ಶರವೇಗದಲ್ಲಿ ಬೆಳೆಸುತ್ತಿರುವ ಅಮಿತ್ ಶಾ ಮತ್ತು ಬಿಜೆಪಿ...

ಭ್ರಷ್ಟಾಚಾರವನ್ನು ಶರವೇಗದಲ್ಲಿ ಬೆಳೆಸುತ್ತಿರುವ ಅಮಿತ್ ಶಾ ಮತ್ತು ಬಿಜೆಪಿ…

ಸ್ಥಿರ ಸರ್ಕಾರಕ್ಕಾಗಿ ಲೋಕಸಭೆಯಲ್ಲಿ ಜನತೆ ಕೊಟ್ಟ ಭಾರೀ ಬಹುಮತವನ್ನು ಬಿಜೆಪಿ, ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಮತ್ತು ಭ್ರಷ್ಟಾಚಾರ ಹೆಚ್ಚು ಮಾಡಲು ಬಳಸುತ್ತಿರುವುದು ದುರಂತ

- Advertisement -
- Advertisement -

ಚುನಾವಣಾ ಅಫಿಡವಿಟ್‍ನಲ್ಲಿ ಘೋಷಿಸಿಕೊಂಡಂತೆ ಭಾರತದ ಅತ್ಯಂತ ಶ್ರೀಮಂತ ಎಂ.ಎಲ್.ಎ ಇವರು. ಅದು ಬರೋಬ್ಬರಿ 1015 ಕೋಟಿ ರೂಗಳ ಒಡೆಯ. ಇವರು ಕರ್ನಾಟಕದವರೆಂಬ ಹೆಮ್ಮೆ ಪಡುವ ವಿಷಯವೇನಲ್ಲ… ಅವರೇ ಶ್ರೀಮಂತ ರಾಜಕಾರಣಿ ಎಂಟಿಬಿ ನಾಗರಾಜ್.. ಹೊಸಕೋಟೆಯ ಶಾಸಕ ಮತ್ತು ಕರ್ನಾಟದ ವಸತಿ ಸಚಿವರಾಗಿದ್ದ ಇವರು ಸದ್ಯಕ್ಕೆ ಅತೃಪ್ತರ ಗ್ಯಾಂಗ್ ನಲ್ಲಿದ್ದಾರೆ.

ಇನ್ನು ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ.

ಅ (ತೃಪ್ತ) ರಾಜಕಾರಣಿ, ಬಹುದೊಡ್ಡ ಸಿನಿಮಾ ನಿರ್ಮಾಪಕ, ಅಗರ್ಭ ಶ್ರೀಮಂತ, ಹಗರಣಗಳ ಸರದಾರ ಮುನಿರತ್ನ.. ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ. ಇವರಿಗೂ ಯಾವ ರೀತಿಯ ಅತೃಪ್ತಿಯೋ ಗೊತ್ತಿಲ್ಲ, ಕ್ಷೇತ್ರ ಬಿಟ್ಟು ರಾಜಿನಾಮೆ ಕೊಟ್ಟು ಮುಂಬೈ ಸೇರಿಕೊಂಡಿದ್ದಾರೆ. ಇವರಿಬ್ಬರಷ್ಟೇ ಅಲ್ಲ, ಇದೇ ರೀತಿ ಅಗರ್ಭ ಶ್ರೀಮಂತರಾದ ಹೆಬ್ಬಾಳ ಶಾಸಕ ಭೈರತಿ ಸುರೇಶ್, ಯಶವಂತಪುರದ ಶಾಸಕ ಎಸ್.ಟಿ ಸೋಮಶೇಖರ್, ಮಾಜಿ ಸಚಿವ ಬಿಟಿಎಂ ಲೇಔಟ್‍ನ ರಾಮಲಿಂಗಾರೆಡ್ಡಿ ಸಹ ಕಾಂಗ್ರೆಸ್ ನೊಂದಿಗೆ ಮುನಿಸಿಕೊಂಡು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯ ಸಂಪೂರ್ಣ ಬೆಂಬಲದಿಂದ ಬದುಕುತ್ತಿದ್ದಾರೆ.

ಇವರೇಕೆ ಹೀಗೆ ಮಾಡಿದರು? ಇವರಿಗೆ ಹಣದ ಕೊರತೆಯಿಲ್ಲ ಹಾಗಾಗಿ ಬಿಜೆಪಿ ಇವರನ್ನು ಹಣದಿಂದ ಕೊಳ್ಳಲು ಸಾಧ್ಯವಿಲ್ಲ. ಇನ್ನು ಅಧಿಕಾರದ ಆಸೆಯ ಸೆಳೆಯುವಿಕೆಯೂ ಸಾಧ್ಯವಿಲ್ಲ. ಆದರೂ ಸಹ ಇವರೆಲ್ಲರೂ ಪಕ್ಷ ಬಿಟ್ಟು ಹೋಗಲಿಕ್ಕೆ ಕಾರಣವೇನು? ಉಳಿದವರು ಬಿಟ್ಟುಬಿಡೋಣ ಎಂಟಿಬಿ ನಾಗರಾಜ್ ರವರಿಗೆ ಸಾವಿರಾರು ಕೋಟಿ ಘೋಷಿತ ಆಸ್ತಿ ಇದೆ. ವಸತಿ ಸಚಿವ ಸ್ಥಾನವೂ ಇದೆ. ಸಿದ್ದರಾಮಯ್ಯನವರ ಆಪ್ತ ಬಳಗದವರು. ಅವರೇಕೆ ಪಕ್ಷ ಬಿಟ್ಟು ಹೋಗುತ್ತಿದ್ದಾರೆ? ಅವರಿಗೆ ಬಿಜೆಪಿಯವರು ಏನು ಕೊಡಲಿಕ್ಕೆ ಸಾಧ್ಯ? ಬಿಜೆಪಿ ಇವರಿಗೆ ಯಾವುದೇ ಆಮಿಷ ಒಡ್ಡಿಲ್ಲದಿದ್ದರೂ ಏಕೆ ಹೋದರು?

ಬಿಜೆಪಿ ಮಾಡಿದ್ದು ಇಷ್ಟೆ.

ಬಿಜೆಪಿ ಕೆಲ ಆಯ್ದ ಶಾಸಕರಿಗೆ ಕೊಟ್ಟ ಸೂಚನೆ ಇಷ್ಟೇ. ಕೇವಲ ಒಂದೇ ಮಾತು ಹೇಳದ್ದು. ಅದೇಂದರೆ 4 ದಿನದಲ್ಲಿ ರಾಜೀನಾಮೆ ಕೊಟ್ಟು ಬರಬೇಕು ಅಷ್ಟೇ. ಬಿಜೆಪಿ ಇವರಿಗೆ ಧಮಕಿ ಕೂಡ ಹಾಕಿಲ್ಲ. ಆ ಬಿಜೆಪಿಯವರ ಮಾತನ್ನು ಶಿರಾವಹಿಸಿ ಪಾಲಿಸಿದವರು ಈ ಶಾಸಕರು. ಇಲ್ಲದಿದ್ದರೆ ಈ ಶ್ರೀಮಂತ ಎಮ್ಮೆಲ್ಲೆಗಳಿಗೆ ಇಡಿ ಐಟಿ ಸಿಬಿಐ ರೈಡ್ ನಂತಹ ಅಸ್ತ್ರಗಳು ಕಾದು ಕುಳಿತಿದ್ದವು. ಮೊದಲೇ ಸಾಕಷ್ಟು ಸಂಪತ್ತಿನ ಒಡೆಯರಾದ ಇವರಿಗೆ ತಮ್ಮ ಸಂಪತ್ತನ್ನು ಉಳಿಸಿಕೊಳ್ಳಬೇಕಾದರೆ ಇದ್ದ ಮಾರ್ಗ ಒಂದೇ ಅದು ರಾಜೀನಾಮೆ ಕೊಡುವುದು.

ಇದರ ಕುರಿತು ರಾಮಲಿಂಗರೆಡ್ಡಿ ಸೂಚ್ಯವಾಗಿ ಹೇಳಿದ್ದಾರೆ. ನನ್ನನ್ನು ಸೇರಿದಂತೆ ನಮ್ಮ ಶಾಸಕರ ಮೇಲಿನ ದಾಳಿಗಳನ್ನು ತಡೆಯಲು ಪಕ್ಷ ಏನು ಮಾಡಿದೆ? ನಮಗೆ ಯಾವ ರೀತಿಯ ರಕ್ಷಣೆ ನೀಡಿದೆ ಎಂದು ಕೇಳಿದರು. ಅದಕ್ಕೆ ಕಾಂಗ್ರೆಸ್ಸಿನ ಯಾವ ನಾಯಕನ ಬಳಿಯೂ ಉತ್ತರವಿರಲಿಲ್ಲ. ಇದರ ಸುಳಿವ ಅರಿತ ಮತ್ತು ಈ ದಾಳಿಗಳನ್ನು ಮೂರು ವರ್ಷಗಳಿಂದಲೂ ಎದುರಿಸುತ್ತಿರುವ ಡಿ.ಕೆ ಶಿವಕುಮಾರ್ ಎಂಟಿಬಿ ನಾಗಾರಾಜ್‍ರನ್ನು ಮನವೊಲಿಸುತ್ತಾ ನನ್ನ ಮೇಲೆಯೂ ಐಟಿ ಇಡಿ ದಾಳಿ ಆಗಿದೆ. ಹಾಗಂತ ಹೆದರೋಕೆ ಆಗುತ್ತಾ ಎಂದು ಹೇಳಿಯೇ ಸ್ವಲ್ಪ ಮಟ್ಟಿಗೆ ಕನ್ವಿನ್ಸ್ ಮಾಡಿದ್ದರು. ಆದರೆ ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿರುವುದು, ಕೇಂದ್ರದಲ್ಲಿ ಬಿಜೆಪಿ ಭಾರೀ ಅಂತರದಲ್ಲಿ ಗೆದ್ದಿರುವುದನ್ನು ಕಂಡಿರುವ ಎಂಟಿಬಿ ನಾಗರಾಜ್‍ಗೆ ಧೈರ್ಯ ಸಾಲಲಿಲ್ಲ. ಅವರು ಡಿಕೆಶಿ ಕಣ್ತಪ್ಪಿಸಿ ಮುಂಬೈಗೆ ವಿಮಾನ ಹತ್ತಿದರು.

ಕರ್ನಾಟಕದ ಈ ಎಲ್ಲಾ ನಾಟಕದ ಹಿಂದೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಕೈವಾಡವಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬರೆಯಿತು. ಆನಂತರ ಟೈಮ್ಸ್ ಪತ್ರಿಕೆ ತನ್ನ ಬರವಣಿಗೆಯಿಂದ ಹಿಂದೆ ಸರಿಯಿತು. ಕಾರಣ ಯಾರಾದರೂ ಊಹಿಸಿಕೊಳ್ಳಬಹುದು.

ಅಧಿಕಾರ ದುರುಪಯೋಗ

ಈ ಎಲ್ಲಾ ಬೆಳವಣಿಗೆಗಳ ಹಿಂದಿರುವ ನಿಜವಾದ ಸೂತ್ರದಾರ ಅಮಿತ್ ಶಾ ಎಂದು ಹೇಳಲಾಗುತ್ತಿದೆ. ಅಮಿತವಾದ ಅವಕಾಶವಿರುವಾಗ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವುದನ್ನು ಬಿಟ್ಟು ಗೊಂದಲ ಸೃಷ್ಟಿಸುತ್ತಾ ಸಾಗಿರುವ ಶಾ ನ ಮುಂದಿನ ನಡೆಯ ಬಗ್ಗೆ ಲೆಕ್ಕಾ ಹಾಕುವುದು ಕಷ್ಟ ಸಾಧ್ಯವಾಗಿದೆ. ಆದರೆ ಲೋಕಸಭೆಯಲ್ಲಿ ಬಿಜೆಪಿಗೆ ಜನತೆ ನೀಡಿರುವ ಬಹುಮತವನ್ನು ದುರುಪಯೋಗಮಾಡಿಕೊಂಡು ಈ ರೀತಿ ಶಾಸಕರನ್ನು ಎದುರಿಸುತ್ತಿದ್ದಾರೆ ಎನ್ನುವುದು ಮಾತ್ರ ಸೂರ್ಯನಷ್ಟೇ ಸ್ಪಷ್ಟವಾಗಿದೆ.

 

ಇದೇ ಸಂದರ್ಭದಲ್ಲಿ ಗೋವಾದಲ್ಲಿಯೂ ಸಹ ಕಾಂಗ್ರೆಸ್ ನ ಹತ್ತು ಶಾಸಕರು ಕಾಂಗ್ರೆಸ್ ತೊರೆದು ಸಾಮೂಹಿಕವಾಗಿ ಬಿಜೆಪಿ ಸೇರಿದ್ದಾಗಿದೆ. ಅದರಲ್ಲಿ ಕೆಲವರಿಗೆ ಸಚಿವ ಸ್ಥಾನ, ಉಪಮುಖ್ಯಮಂತ್ರಿ ಹುದ್ದೆಗಳು ಸಹ ದೊರೆತಿವೆ. ಸಮಸ್ಯೆ ಇರುವುದು ಇಲ್ಲಿಯೇ.. ಶಾಸಕರು ಅಕ್ರಮ/ಬೇನಾಮಿ ಆಸ್ತಿ ಮಾಡಿದ್ದರೆ, ಜನರ ಹಣವನ್ನು ಲೂಟಿ ಮಾಡಿದ್ದರೆ, ತೆರಿಗೆ ವಂಚನೆ ಮಾಡಿದ್ದರೆ ಅವರ ಮೇಲೆ ಖಂಡಿತ ಈಡಿ ಐಟಿ ಸಿಬಿಐ ದಾಳಿ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಅಕ್ರಮ ಸಂಪತ್ತನ್ನು ಸರ್ಕಾರ ಬೊಕ್ಕಸಕ್ಕೆ ಸೇರಿಸಬೇಕು. ಅದು ಸಾಂವಿಧಾನಿಕ ಕ್ರಮ. ಆದರೆ ಬಿಜೆಪಿ ಹಾಗೆ ಮಾಡುತ್ತಿಲ್ಲ. ಬದಲಿಗೆ ಆ ಬೆದರಿಕೆ ಒಡ್ಡಿ ಅವರನ್ನು ತಮ್ಮ ಪಕ್ಷಗಳತ್ತ ಸೆಳೆದುಕೊಂಡು ಅಕ್ರಮ ಮಾರ್ಗದಲ್ಲಿ ಸರ್ಕಾರ ರಚಿಸುತ್ತಿದೆ. ಅವರಿಗೆ ಮಂತ್ರಿ ಪದವಿ ಜೊತೆಗೆ ಮತ್ತಷ್ಟು ಹಣದ ಹೊಳೆ ಹರಿಸುತ್ತಿದೆ. (ಆ ಹಣದ ಮೂಲ ಕೆದಕಿದರೆ ಅದು ಜನಸಾಮಾನ್ಯರ ತೆರಿಗೆ ಎಂಬುದು ಸ್ಪಷ್ಟವಾಗುತ್ತದೆ) ಆ ಮೂಲಕ ಭ್ರಷ್ಟರನ್ನು ಮತ್ತಷ್ಟು ಕೊಬ್ಬಿಸುವುದರ ಜೊತೆಗೆ ಭ್ರಷ್ಟಾಚಾರಕ್ಕೆ ಮತ್ತಷ್ಟು ಪ್ರೋತ್ಸಾಹ ಕೊಡುತ್ತಿದೆ. ಸ್ಥಿರ ಸರ್ಕಾರ ರಚಿಸುವ ಸಲುವಾಗಿ ಜನರು ಕೊಟ್ಟ ಬಹುಮತವನ್ನು ಈ ರೀತಿ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ ಸ್ಥಾಪನೆಗೆ ಮುಂದಾಗುತ್ತಿದೆ.

ಬಿಜೆಪಿಯ ಆಟ ಇಲ್ಲಿಗೆ ನಿಲ್ಲಲ್ಲಿದೆ ಎಂದು ತಿಳಿಯಬೇಡಿ. ಆ ಪಕ್ಷದ ಮುಖುಲ್ ರಾಯ್ ಎಂಬುವವರು ಈಗಾಗಲೇ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ಪಕ್ಷಗಳಿಂದ ಸುಮಾರು 107 ಜನ ಶಾಸಕರ ತಮ್ಮ ಪಕ್ಷ ತೊರೆದು ನಮ್ಮ ಪಕ್ಷ ಸೇರಲಿದ್ದಾರೆ ಎಂದು ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಈ ರೀತಿ ಇವರು ಬಹಿರಂಗವಾಗಿಯೇ ಕುದುರೆ ವ್ಯಾಪಾರಕ್ಕೆ ನಿಂತಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಟಿಎಂಸಿಯ 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಅವರೆಲ್ಲಾ ಟಿಎಂಸಿ ತ್ಯಜಿಸಿ ಬಿಜೆಪಿ ಸೇರಲಿದ್ದಾರೆ ಎಂದು ಬಹಿರಂಗ ಬೆದರಿಕೆ ಒಡ್ಡಿದ್ದನ್ನು ನಾವು ಮರೆಯಬಾರದು. ನಿನ್ನೆ ತಾನೇ ಐಎಂಎ ಆರೋಪಿ ರೋಷನ್ ಬೇಗ್ ನನ್ನು ಸಹ ಪಕ್ಷಕ್ಕೆ ಸೇರಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದರು. ಕೊನೆ ಕ್ಷಣದಲ್ಲಿ ಎಸ್.ಐ.ಟಿ ದಾಳಿಯಿಂದ ವಿಫಲವಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...