Homeಮುಖಪುಟಕೋವಿಶೀಲ್ಡ್ ಅಡ್ಡ ಪರಿಣಾಮ: 'ಬಿಜೆಪಿ' ದೇಣಿಗೆಗಾಗಿ 'ಜನರ ಜೀವ'ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

- Advertisement -
- Advertisement -

ಕೋವಿಶೀಲ್ಡ್ ಲಸಿಕೆಯ “ಅಡ್ಡಪರಿಣಾಮಗಳ” ವಿವಾದದ ಮಧ್ಯೆ ಲಸಿಕೆ ತಯಾರಕರಿಂದ “ರಾಜಕೀಯ ದೇಣಿಗೆಗಳನ್ನು” ಪಡೆಯಲು ‘ಬಿಜೆಪಿ’ ಜನರ ಜೀವನವನ್ನು ಪಣಕ್ಕಿಟ್ಟಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಈ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಅಖಿಲೇಶ್‌ ಯಾದವ್, ಇಂತಹ ಮಾರಕ ಔಷಧಗಳನ್ನು ಅನುಮತಿಸುವುದು “ಯಾರನ್ನಾದರೂ ಕೊಲೆ ಮಾಡುವ ಪಿತೂರಿ” ಗೆ ಸಮಾನವಾಗಿದೆ ಮತ್ತು ಹೊಣೆಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.

ಸುಮಾರು 80 ಕೋಟಿ ಭಾರತೀಯರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ, ಪ್ರತಿ ವ್ಯಕ್ತಿಗೆ ಎರಡು ಡೋಸ್‌ನಂತೆ ನೀಡಲಾಗಿದೆ. ಲಸಿಕೆಯನ್ನು ತಯಾರಿಸಿದ ಕಂಪನಿಯು ಹೃದಯಾಘಾತದ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿದೆ ಎಂದು ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲಸಿಕೆಯ ದುಷ್ಪರಿಣಾಮಗಳಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರು ಅಥವಾ ಲಸಿಕೆಯ ದುಷ್ಪರಿಣಾಮಗಳ ಬಗ್ಗೆ ಭಯಪಡುವವರು, ಅವರ ಅನುಮಾನಗಳು ಮತ್ತು ಭಯಗಳು ಈಗ ಕಂಪೆನಿ ಸ್ವಯಂ ಒಪ್ಪಿಕೊಂಡಿದ್ದರಿಂದ ಸಾಬೀತಾಗಿದೆ. ಜನರ ಬದುಕಿನೊಂದಿಗೆ ಚೆಲ್ಲಾಟವಾಡುವವರನ್ನು ಕ್ಷಮಿಸಬಾರದು ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಆಡಳಿತ ಪಕ್ಷವು ಲಸಿಕೆ ತಯಾರಿಕಾ ಕಂಪನಿಯಿಂದ ರಾಜಕೀಯ ದೇಣಿಗೆ ಸಂಗ್ರಹಿಸುವ ಮೂಲಕ ಜನರ ಪ್ರಾಣವನ್ನು ಪಣಕ್ಕಿಟ್ಟಿದೆ. ಕಾನೂನು ಅಥವಾ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಈ ವಿಷಯದಲ್ಲಿ ಉನ್ನತ ಮಟ್ಟದಲ್ಲಿ ನ್ಯಾಯಾಂಗ ತನಿಖೆಯಾಗಬೇಕು, ಬಿಜೆಪಿಯು ಕೋವಿಡ್ ಲಸಿಕೆ ತಯಾರಕರಿಂದ ಕಮಿಷನ್ ತೆಗೆದುಕೊಂಡಿದೆ. ಅದನ್ನು ಭೀತಿಗೊಳಿಸಿ ಜನರಿಗೆ ಬಲವಂತವಾಗಿ ನೀಡಲಾಗಿದೆ ಎಂದು ಯಾದವ್ ಹೇಳಿದ್ದಾರೆ.

ಕೋವಿಡ್-19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿತ್ತು. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಆ ಬಳಿಕ ಬಹಿರಂಗವಾಗಿತ್ತು.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್‌ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದೆ ಮತ್ತು ದೇಶದಲ್ಲಿ ವ್ಯಾಪಕವಾಗಿ ಈ ಲಸಿಕೆಯನ್ನು ನೀಡಲಾಗಿದೆ.

ಕೋವಿಡ್‌ ಲಸಿಕೆ ಅಡ್ಡಪರಿಣಾಮದ ಬಗ್ಗೆ ಮಾಹಿತಿ ಬಯಲಾಗುತ್ತಿದ್ದಂತೆ ಈ ಹೃದಯಾಘಾತದ ಸಾವಿಗೆ ಯಾರು ಹೊಣೆ ಎಂದು ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದೆ.

ಉತ್ತರಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಕೂಡ ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಮೋದಿಯ ಗ್ಯಾರಂಟಿಯೇ? ಎಂದು ಪ್ರಶ್ನಿಸಿದ್ದಾರೆ.

ಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪಾಲ್ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಲಸಿಕೆಗಳಲ್ಲಿ ಅವರು ಕಮಿಷನ್ ತೆಗೆದುಕೊಂಡಿರುವುದು ಈಗ ಬಹಿರಂಗವಾಗಿದೆ, ಜನರಿಗೆ ಕಡಿಮೆ ಗುಣಮಟ್ಟದ ಲಸಿಕೆಗಳು ಮತ್ತು ಔಷಧಿಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಜನರಿಗೆ ಬಲವಂತವಾಗಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. 200-300ಕೋಟಿ ರೂ. ದೇಣಿಗೆಯನ್ನು ಬಿಜೆಪಿ ತೆಗೆದುಕೊಂಡು ಕಂಪೆನಿಗೆ ಲಸಿಕೆಯನ್ನು ಮಾರುಕಟ್ಟೆ ಮಾಡಲು ಅನುಮತಿ ನೀಡಿದೆ. ಜನರಿಗೆ ಬಲವಂತವಾಗಿ ಲಸಿಕೆಗಳನ್ನು ನೀಡಲಾಯಿತು. ವಿಶ್ವದಲ್ಲಿ ಎಲ್ಲಿಯೂ ಲಸಿಕೆಗಳನ್ನು ಬಲವಂತವಾಗಿ ನೀಡಲಾಗಿಲ್ಲ, ಲಸಿಕೆ ತಯಾರಿಕೆಯಲ್ಲಿನ ಭ್ರಷ್ಟಾಚಾರವು ಈಗ ಮುಂಚೂಣಿಗೆ ಬಂದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...