Homeಮುಖಪುಟಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ

ಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21ರಂದು ಬಂಧನಕ್ಕೊಳಗಾದಾಗಿನಿಂದ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಎಎಪಿ ಹಿರಿಯ ನಾಯಕಿ, ದೆಹಲಿ ಸಚಿವೆ ಅತಿಶಿ ಹೇಳಿದ್ದು, ಅವರನ್ನು ಜೈಲಿನಲ್ಲಿ ಇರಿಸುವ ಮೂಲಕ ಬಿಜೆಪಿ ಅವರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದ್ದಾರೆ.

ಏಪ್ರಿಲ್ 15ರವರೆಗೆ ಕೇಜ್ರಿವಾಲ್ ಜೈಲಿನಲ್ಲಿರಬೇಕಾಗಿರುವ ತಿಹಾರ್ ಜೈಲಿನ ಆಡಳಿತವು ಈ ಆಪಾದನೆಯನ್ನು ತಳ್ಳಿ ಹಾಕಿದೆ. ತಿಹಾರ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಕೇಜ್ರಿವಾಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರಿಗೆ ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.

ಅರವಿಂದ್ ಕೇಜ್ರಿವಾಲ್ ಅವರು ಮಧುಮೇಹದಿಂದ ತೀವ್ರವಾಗಿ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಅವರು ದಿನದ 24 ಗಂಟೆಗಳ ಕಾಲ ದೇಶ ಸೇವೆಯಲ್ಲಿ ತೊಡಗಿದ್ದರು. ಅವರ ಬಂಧನದಿಂದ ಕೇಜ್ರಿವಾಲ್ ಅವರ ತೂಕ 4.5 ಕೆಜಿಯಷ್ಟು ಕಡಿಮೆಯಾಗಿದೆ. ಇದು ತುಂಬಾ ಆತಂಕಕಾರಿಯಾಗಿದೆ. ಬಿಜೆಪಿ ಕೇಜ್ರಿವಾಲ್‌ ಅವರನ್ನು ಜೈಲಿನಲ್ಲಿ ಇರಿಸಿ ಅವರ ಆರೋಗ್ಯವನ್ನು ಅಪಾಯದಲ್ಲಿರಿಸಿದೆ ಎಂದು ಆರೋಪಿಸಿದ್ದಾರೆ.

ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿಗೆ ಮನೆ ಅಡುಗೆ ಸ್ವೀಕರಿಸಲು ಅವಕಾಶ ನೀಡಲಾಗಿದೆ. ಮಂಗಳವಾರ ಬೆಳಗ್ಗೆ ಕೇಜ್ರಿವಾಲ್ ಅವರ ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾಗಿತ್ತು. ಅವರ ಶುಗರ್ ಲೆವೆಲ್ ಏರುಪೇರಾಗುತ್ತಿದ್ದರಿಂದ ತಿಹಾರ್ ಜೈಲಿನ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿಹಾರ್ ಜೈಲಿನ ಮೂಲಗಳ ಪ್ರಕಾರ, ಅವರನ್ನು ಜೈಲಿಗೆ ಕರೆ ತಂದಾಗ ಅವರ ತೂಕ 55 ಕೆಜಿ ಇತ್ತು ಹಾಗೂ ಅವರ ತೂಕದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೇಜ್ರಿವಾಲ್ ಅವರ ದೇಹದಲ್ಲಿ ಸಕ್ಕರೆ ಪ್ರಮಾಣವು ಸಾಮಾನ್ಯವಾಗಿದ್ದು, ಅವರು ಪ್ರತಿ ದಿನ ಬೆಳಗ್ಗೆ ಅವರು ಯೋಗ ಮತ್ತು ಧ್ಯಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ನಿವಾಸದಲ್ಲಿ ಹಲವು ಗಂಟೆಗಳ ವಿಚಾರಣೆಯ ನಂತರ ಮಾರ್ಚ್ 21 ರಾತ್ರಿ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ರಾತ್ರಿ ಕೇಜ್ರಿವಾಲ್ ಅವರು ತಮ್ಮ ಐಫೋನ್ ಸ್ವಿಚ್ ಆಫ್ ಮಾಡಿ ಪಾಸ್ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ್ದರು ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದರು. ಫೋನ್ ಅನ್ ಲಾಕ್ ಮಾಡಲು ಜಾರಿ ನಿರ್ದೇಶನಾಲಯ ಆ್ಯಪಲ್ ಸಂಸ್ಥೆಯನ್ನು ಸಂಪರ್ಕಿಸಿದೆ, ಆದರೆ ಫೋನ್ ಅನ್ ಲಾಕ್ ಮಾಡಲು ಆ್ಯಪಲ್ ಸಂಸ್ಥೆ ನಿರಾಕರಿಸಿದೆ ಎಂದು ಇಡಿ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಇದನ್ನು ಓದಿ: ಮೋದಿ ಆಡಳಿತದಲ್ಲಿ ‘ಭ್ರಷ್ಟಾಚಾರ’ದ ತನಿಖೆ ಎದುರಿಸುತ್ತಿದ್ದ 25 ವಿರೋಧ ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆ, ಆ ಬಳಿಕ ನೆನೆಗುದಿಗೆ ಬಿದ್ದ ಹೆಚ್ಚಿನ ಪ್ರಕರಣಗಳು……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...