Homeಮುಖಪುಟಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ

ಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21ರಂದು ಬಂಧನಕ್ಕೊಳಗಾದಾಗಿನಿಂದ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಎಎಪಿ ಹಿರಿಯ ನಾಯಕಿ, ದೆಹಲಿ ಸಚಿವೆ ಅತಿಶಿ ಹೇಳಿದ್ದು, ಅವರನ್ನು ಜೈಲಿನಲ್ಲಿ ಇರಿಸುವ ಮೂಲಕ ಬಿಜೆಪಿ ಅವರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದ್ದಾರೆ.

ಏಪ್ರಿಲ್ 15ರವರೆಗೆ ಕೇಜ್ರಿವಾಲ್ ಜೈಲಿನಲ್ಲಿರಬೇಕಾಗಿರುವ ತಿಹಾರ್ ಜೈಲಿನ ಆಡಳಿತವು ಈ ಆಪಾದನೆಯನ್ನು ತಳ್ಳಿ ಹಾಕಿದೆ. ತಿಹಾರ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಕೇಜ್ರಿವಾಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರಿಗೆ ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.

ಅರವಿಂದ್ ಕೇಜ್ರಿವಾಲ್ ಅವರು ಮಧುಮೇಹದಿಂದ ತೀವ್ರವಾಗಿ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಅವರು ದಿನದ 24 ಗಂಟೆಗಳ ಕಾಲ ದೇಶ ಸೇವೆಯಲ್ಲಿ ತೊಡಗಿದ್ದರು. ಅವರ ಬಂಧನದಿಂದ ಕೇಜ್ರಿವಾಲ್ ಅವರ ತೂಕ 4.5 ಕೆಜಿಯಷ್ಟು ಕಡಿಮೆಯಾಗಿದೆ. ಇದು ತುಂಬಾ ಆತಂಕಕಾರಿಯಾಗಿದೆ. ಬಿಜೆಪಿ ಕೇಜ್ರಿವಾಲ್‌ ಅವರನ್ನು ಜೈಲಿನಲ್ಲಿ ಇರಿಸಿ ಅವರ ಆರೋಗ್ಯವನ್ನು ಅಪಾಯದಲ್ಲಿರಿಸಿದೆ ಎಂದು ಆರೋಪಿಸಿದ್ದಾರೆ.

ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿಗೆ ಮನೆ ಅಡುಗೆ ಸ್ವೀಕರಿಸಲು ಅವಕಾಶ ನೀಡಲಾಗಿದೆ. ಮಂಗಳವಾರ ಬೆಳಗ್ಗೆ ಕೇಜ್ರಿವಾಲ್ ಅವರ ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾಗಿತ್ತು. ಅವರ ಶುಗರ್ ಲೆವೆಲ್ ಏರುಪೇರಾಗುತ್ತಿದ್ದರಿಂದ ತಿಹಾರ್ ಜೈಲಿನ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿಹಾರ್ ಜೈಲಿನ ಮೂಲಗಳ ಪ್ರಕಾರ, ಅವರನ್ನು ಜೈಲಿಗೆ ಕರೆ ತಂದಾಗ ಅವರ ತೂಕ 55 ಕೆಜಿ ಇತ್ತು ಹಾಗೂ ಅವರ ತೂಕದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೇಜ್ರಿವಾಲ್ ಅವರ ದೇಹದಲ್ಲಿ ಸಕ್ಕರೆ ಪ್ರಮಾಣವು ಸಾಮಾನ್ಯವಾಗಿದ್ದು, ಅವರು ಪ್ರತಿ ದಿನ ಬೆಳಗ್ಗೆ ಅವರು ಯೋಗ ಮತ್ತು ಧ್ಯಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ನಿವಾಸದಲ್ಲಿ ಹಲವು ಗಂಟೆಗಳ ವಿಚಾರಣೆಯ ನಂತರ ಮಾರ್ಚ್ 21 ರಾತ್ರಿ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ರಾತ್ರಿ ಕೇಜ್ರಿವಾಲ್ ಅವರು ತಮ್ಮ ಐಫೋನ್ ಸ್ವಿಚ್ ಆಫ್ ಮಾಡಿ ಪಾಸ್ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ್ದರು ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದರು. ಫೋನ್ ಅನ್ ಲಾಕ್ ಮಾಡಲು ಜಾರಿ ನಿರ್ದೇಶನಾಲಯ ಆ್ಯಪಲ್ ಸಂಸ್ಥೆಯನ್ನು ಸಂಪರ್ಕಿಸಿದೆ, ಆದರೆ ಫೋನ್ ಅನ್ ಲಾಕ್ ಮಾಡಲು ಆ್ಯಪಲ್ ಸಂಸ್ಥೆ ನಿರಾಕರಿಸಿದೆ ಎಂದು ಇಡಿ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಇದನ್ನು ಓದಿ: ಮೋದಿ ಆಡಳಿತದಲ್ಲಿ ‘ಭ್ರಷ್ಟಾಚಾರ’ದ ತನಿಖೆ ಎದುರಿಸುತ್ತಿದ್ದ 25 ವಿರೋಧ ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆ, ಆ ಬಳಿಕ ನೆನೆಗುದಿಗೆ ಬಿದ್ದ ಹೆಚ್ಚಿನ ಪ್ರಕರಣಗಳು……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...