Homeಮುಖಪುಟ'ಬಿಜೆಪಿ ಭಾರತ ಬಿಟ್ಟು ತೊಲಗು' ಅಭಿಯಾನ ಬಿಹಾರದಲ್ಲಿ ಉತ್ತಮ ಆರಂಭ ಕಂಡಿದೆ: ಅಖಿಲೇಶ್ ಯಾದವ್

‘ಬಿಜೆಪಿ ಭಾರತ ಬಿಟ್ಟು ತೊಲಗು’ ಅಭಿಯಾನ ಬಿಹಾರದಲ್ಲಿ ಉತ್ತಮ ಆರಂಭ ಕಂಡಿದೆ: ಅಖಿಲೇಶ್ ಯಾದವ್

- Advertisement -
- Advertisement -

ಬಿಹಾರದಲ್ಲಿ ಜೆಡಿಯು ಪಕ್ಷವು ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಲು ಮುಂದಾಗಿರುವುದನ್ನು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಸ್ವಾಗತಿಸಿದ್ದಾರೆ.

ಬಿಹಾರದ ರಾಜಕೀಯ ಬೆಳವಣಿಗೆಗಳನ್ನು ಉತ್ತಮ ಆರಂಭ ಎಂದು ಕರೆದಿರುವ ಅವರು, ದೇಶದ ಹಲವು ಪಕ್ಷಗಳು ಜೆಡಿಯು ಹಾದಿ ತುಳಿಯಲಿವೆ ಮತ್ತು ಬಿಜೆಪಿಯನ್ನು ಭಾರತದಿಂದ ಕಿತ್ತೊಗೆಯಲಿವೆ ಎಂದಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಅವರು, “ಬ್ರೀಟಿಷರೆ ಭಾರತ ಬಿಟ್ಟು ತೊಲಗಿ ಎಂದು 1942ರಲ್ಲಿ ಚಳವಳಿ ಆರಂಭಿಸಲಾಗಿತ್ತು. ಇಂದು ಬಿಹಾರದಿಂದ ‘ಬಿಜೆಪಿ ತೊಲಗಿಸಿ’ ಘೋಷಣೆ ಬರುತ್ತಿದೆ. ದೇಶದ ಜನರು ಮತ್ತು ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ನಿಲುವು ತೆಗೆದುಕೊಳ್ಳುತ್ತವೆ ಎಂದು ನನಗನಿಸುತ್ತದೆ” ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ನಿತೀಶ್ ಕುಮಾರ್‌ರವರು ಬಿಹಾರದ ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಂತರ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಜೊತೆ ಸಭೆ ನಡೆಸಿ 160 ಶಾಸಕರ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಲು ರಾಜ್ಯಪಾಲರ ಭವನದತ್ತ ಸಾಗಿದ್ದಾರೆ.

ಮುಂದಿನ ಹೊಸ ಸರ್ಕಾರದಲ್ಲಿ ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ. ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಎಲ್ಲಾ ಸಚಿವಾಲಯಗಳ ನಿಯೋಜನೆಯಲ್ಲಿ ನಿತೀಶ್ ಕುಮಾರ್ ಅವರಿಗೆ ವಿಶೇಷಾಧಿಕಾರ ನೀಡಲಾಗುತ್ತದೆ ಎನ್ನಲಾಗಿದೆ.

ಮುಂದಿನ ಸ್ಪೀಕರ್‌‌ ಸ್ಥಾನವನ್ನು ತೇಜಸ್ವಿ ಯಾದವ್‌ ಅವರ ಪಕ್ಷವಾದ ಆರ್‌ಜೆಡಿಯಿಂದ ಆಯ್ಕೆ ಮಾಡಲಾಗುತ್ತಿದೆ. ನಿತೀಶ್ ಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಪಾಲ್ಗೊಳ್ಳಲು ಸಿದ್ಧರಿರುವ ಎಡಪಕ್ಷಗಳು ಮತ್ತು ಕಾಂಗ್ರೆಸ್‌ನಂತಹ ಇತರ ವಿರೋಧ ಪಕ್ಷಗಳೊಂದಿಗೆ ತೇಜಸ್ವಿ ಯಾದವ್ ಅವರು ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನು ಸ್ವಲ್ಪ ದಿವಸ ಗಳಲ್ಲಿ ಆರ್ಯರೇ ಭಾರತ ಬಿಟ್ಟು ತೊಲಗಿ ಎಂಬ. ಘೋಷಣೆ ಮೊಳಗಿದರೆ ಆಶ್ಚರ್ಯ ವೇನಿಲ್ಲ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...