Homeಕರ್ನಾಟಕ‘ರೌಡಿ ಡಿಕೆಶಿ’ ಎಂದ ಬಿಜೆಪಿ; ಬಿಜೆಪಿ ಹುಟ್ಟಿದ್ದೆ ಕೊಲೆ, ಗಲಭೆಗಳಿಂದ ಎಂದು ಕಾಂಗ್ರೆಸ್ ತಿರುಗೇಟು!

‘ರೌಡಿ ಡಿಕೆಶಿ’ ಎಂದ ಬಿಜೆಪಿ; ಬಿಜೆಪಿ ಹುಟ್ಟಿದ್ದೆ ಕೊಲೆ, ಗಲಭೆಗಳಿಂದ ಎಂದು ಕಾಂಗ್ರೆಸ್ ತಿರುಗೇಟು!

- Advertisement -
- Advertisement -

ಹೆಗಲಿಗೆ ಕೈಯಿಟ್ಟಿದ್ದಾರೆಂದು ಆರೋಪಿಸಿ ಪಕ್ಷದ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ರಾಜ್ಯ ಬಿಜೆಪಿ ‘ರೌಡಿ ಡಿಕೆಶಿ’ ಎಂದು ಕರೆದಿದೆ. “ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌‌ಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ” ಎಂದು ಬಿಜೆಪಿ ಶನಿವಾರ ಹೇಳಿದೆ.

ಮಂಡ್ಯದ ಎಂ.ಕೆ. ದೊಡ್ಡಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ತನ್ನ ಹೆಗಲ ಮೇಲೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಿಟ್ಟಿದ್ದಾರೆ ಎಂದು ಹೇಳಿ ಶಿವಕುಮಾರ್‌‌ ಅವರ ಕಪಾಳಕ್ಕೆ ಬಾರಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ನಡೆಸುವುದು ಡಿಕೆಶಿ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಡಿಕೆಶಿಯವರೇ, ನೀವು ರಾಜಕಾರಣಿಯೋ ಅಥವಾ ರೌಡಿಯೋ!?” ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

“ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿಕೆಶಿ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು ? ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ?” ಎಂದು ಬಿಜೆಪಿ ಕೇಳಿದೆ. ಜೊತೆಗೆ ಈ ಹಿಂದಿನ ಇಂತಹದ್ದೇ ಹಲವು ಘಟನೆಗಳನ್ನು ನೆನಪಿಸಿರುವ ಬಿಜೆಪಿ ತನ್ನ ಟ್ವಿಟರ್‌ ಪೇಜ್‌ನಲ್ಲಿ “ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು?” ಎಂದು ಕೇಳಿದೆ.

ಟ್ವಿಟರ್‌ನಲ್ಲಿ ರೌಡಿ ಡಿಕೆಶಿ ಎಂಬ ಹ್ಯಾಶ್‌ ಟ್ಯಾಗ್‌ ಹಾಕಿರುವ ಬಿಜೆಪಿ, “ಶಿವಕುಮಾರ್‌‌ ತಮ್ಮ ವರ್ತನೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು. ನೀವು ಕೊತ್ವಾಲನ ಶಿಷ್ಯ ಆಗಿರಬಹುದು, ಜೈಲಿಗೂ ಹೋಗಿ ಬಂದಿರಬಹುದು ಆದರೆ ಆ ರಾಕ್ಷಸಿ ಗುಣಗಳನ್ನು ಅಮಾಯಕರ ಮೇಲೆ ತೋರ್ಪಡಿಸಬೇಡಿ. ರಾಜ್ಯಾಧ್ಯಕ್ಷರ ನಡೆ ಇತರರಿಗೆ ಮಾದರಿಯಾಗಿರಲಿ, ಇದು ಬಸವಣ್ಣನ ನಾಡು ಎಂಬುದು ನೆನಪಿರಲಿ” ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ಕೇಂದ್ರ ಚರ್ಚೆ ನಡೆಸಲು ಬಯಸಿದರೆ, ರೈತರಿಗೆ ಷರತ್ತು ವಿಧಿಸುವಂತಿಲ್ಲ- ರಾಕೇಶ್ ಟಿಕಾಯತ್

ಇದಕ್ಕೆ ಕಾಂಗ್ರೆಸ್ ಟ್ವಿಟರ್‌ನಲ್ಲೆ ಪ್ರತಿಕ್ರಿಯಿಸಿದ್ದು, “ಸಾರ್ವಜನಿಕ ಬದುಕಿನಲ್ಲಿರುವವರಿಗೆ ಸಾರ್ವಜನಿಕ ಸ್ಥಳದಲ್ಲಿ ಕಿರಿಕಿರಿ ಉಂಟಾಗುವುದು ಸಹಜ. ತಮ್ಮದೇ ಡ್ರೈವರ್ ಮೇಲೆ ಮಾದ್ಯಮದವರೆದುರು ಹಲ್ಲೆ ನಡೆಸಿದ ಯಡಿಯೂರಪ್ಪ ಅವರು ಭೂಗತ ಪಾತಕಿ ದಾವೂದ್ ಇಬ್ರಾಹಿಂನಿಂದ ಟ್ರೈನಿಂಗ್ ತೆಗೆದುಕೊಂಡಿದ್ದರೇ? ಇದಕ್ಕೆ ಬಿಜೆಪಿ ಉತ್ತರಿಸಬೇಕು! ಬಿಜೆಪಿ ಹುಟ್ಟಿಕೊಂಡಿದ್ದೇ ಹಲ್ಲೆ, ಕೊಲೆ, ಗಲಭೆಗಳಿಂದ” ಎಂದು ಹೇಳಿದೆ.

ಇದನ್ನೂ ಓದಿ: ಭಾರತ ಪ್ರಜಾಪ್ರಬುತ್ವದ ನೆಲೆ ಬೆಲೆ: ಬಿ ಶ್ರೀಪಾದ ಭಟ್

ವಿಡಿಯೋ ನೋಡಿ: ಆಕ್ಸಿಡೆಂಟ್‌ ನನ್ನನ್ನು ವಿಶೇಷ ಚೇತನನ್ನನ್ನಾಗಿ ಮಾಡಿತು, ಆದರೆ ಲಾಕ್‌ಡೌನ್‌ ನಮ್ಮ ಜೀವನವನ್ನೇ ಕಿತ್ತುಕೊಂಡಿತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...