Homeಕರ್ನಾಟಕ‘ರೌಡಿ ಡಿಕೆಶಿ’ ಎಂದ ಬಿಜೆಪಿ; ಬಿಜೆಪಿ ಹುಟ್ಟಿದ್ದೆ ಕೊಲೆ, ಗಲಭೆಗಳಿಂದ ಎಂದು ಕಾಂಗ್ರೆಸ್ ತಿರುಗೇಟು!

‘ರೌಡಿ ಡಿಕೆಶಿ’ ಎಂದ ಬಿಜೆಪಿ; ಬಿಜೆಪಿ ಹುಟ್ಟಿದ್ದೆ ಕೊಲೆ, ಗಲಭೆಗಳಿಂದ ಎಂದು ಕಾಂಗ್ರೆಸ್ ತಿರುಗೇಟು!

- Advertisement -
- Advertisement -

ಹೆಗಲಿಗೆ ಕೈಯಿಟ್ಟಿದ್ದಾರೆಂದು ಆರೋಪಿಸಿ ಪಕ್ಷದ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ರಾಜ್ಯ ಬಿಜೆಪಿ ‘ರೌಡಿ ಡಿಕೆಶಿ’ ಎಂದು ಕರೆದಿದೆ. “ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌‌ಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ” ಎಂದು ಬಿಜೆಪಿ ಶನಿವಾರ ಹೇಳಿದೆ.

ಮಂಡ್ಯದ ಎಂ.ಕೆ. ದೊಡ್ಡಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ತನ್ನ ಹೆಗಲ ಮೇಲೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಿಟ್ಟಿದ್ದಾರೆ ಎಂದು ಹೇಳಿ ಶಿವಕುಮಾರ್‌‌ ಅವರ ಕಪಾಳಕ್ಕೆ ಬಾರಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ನಡೆಸುವುದು ಡಿಕೆಶಿ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಡಿಕೆಶಿಯವರೇ, ನೀವು ರಾಜಕಾರಣಿಯೋ ಅಥವಾ ರೌಡಿಯೋ!?” ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

“ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿಕೆಶಿ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು ? ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ?” ಎಂದು ಬಿಜೆಪಿ ಕೇಳಿದೆ. ಜೊತೆಗೆ ಈ ಹಿಂದಿನ ಇಂತಹದ್ದೇ ಹಲವು ಘಟನೆಗಳನ್ನು ನೆನಪಿಸಿರುವ ಬಿಜೆಪಿ ತನ್ನ ಟ್ವಿಟರ್‌ ಪೇಜ್‌ನಲ್ಲಿ “ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು?” ಎಂದು ಕೇಳಿದೆ.

ಟ್ವಿಟರ್‌ನಲ್ಲಿ ರೌಡಿ ಡಿಕೆಶಿ ಎಂಬ ಹ್ಯಾಶ್‌ ಟ್ಯಾಗ್‌ ಹಾಕಿರುವ ಬಿಜೆಪಿ, “ಶಿವಕುಮಾರ್‌‌ ತಮ್ಮ ವರ್ತನೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು. ನೀವು ಕೊತ್ವಾಲನ ಶಿಷ್ಯ ಆಗಿರಬಹುದು, ಜೈಲಿಗೂ ಹೋಗಿ ಬಂದಿರಬಹುದು ಆದರೆ ಆ ರಾಕ್ಷಸಿ ಗುಣಗಳನ್ನು ಅಮಾಯಕರ ಮೇಲೆ ತೋರ್ಪಡಿಸಬೇಡಿ. ರಾಜ್ಯಾಧ್ಯಕ್ಷರ ನಡೆ ಇತರರಿಗೆ ಮಾದರಿಯಾಗಿರಲಿ, ಇದು ಬಸವಣ್ಣನ ನಾಡು ಎಂಬುದು ನೆನಪಿರಲಿ” ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ಕೇಂದ್ರ ಚರ್ಚೆ ನಡೆಸಲು ಬಯಸಿದರೆ, ರೈತರಿಗೆ ಷರತ್ತು ವಿಧಿಸುವಂತಿಲ್ಲ- ರಾಕೇಶ್ ಟಿಕಾಯತ್

ಇದಕ್ಕೆ ಕಾಂಗ್ರೆಸ್ ಟ್ವಿಟರ್‌ನಲ್ಲೆ ಪ್ರತಿಕ್ರಿಯಿಸಿದ್ದು, “ಸಾರ್ವಜನಿಕ ಬದುಕಿನಲ್ಲಿರುವವರಿಗೆ ಸಾರ್ವಜನಿಕ ಸ್ಥಳದಲ್ಲಿ ಕಿರಿಕಿರಿ ಉಂಟಾಗುವುದು ಸಹಜ. ತಮ್ಮದೇ ಡ್ರೈವರ್ ಮೇಲೆ ಮಾದ್ಯಮದವರೆದುರು ಹಲ್ಲೆ ನಡೆಸಿದ ಯಡಿಯೂರಪ್ಪ ಅವರು ಭೂಗತ ಪಾತಕಿ ದಾವೂದ್ ಇಬ್ರಾಹಿಂನಿಂದ ಟ್ರೈನಿಂಗ್ ತೆಗೆದುಕೊಂಡಿದ್ದರೇ? ಇದಕ್ಕೆ ಬಿಜೆಪಿ ಉತ್ತರಿಸಬೇಕು! ಬಿಜೆಪಿ ಹುಟ್ಟಿಕೊಂಡಿದ್ದೇ ಹಲ್ಲೆ, ಕೊಲೆ, ಗಲಭೆಗಳಿಂದ” ಎಂದು ಹೇಳಿದೆ.

ಇದನ್ನೂ ಓದಿ: ಭಾರತ ಪ್ರಜಾಪ್ರಬುತ್ವದ ನೆಲೆ ಬೆಲೆ: ಬಿ ಶ್ರೀಪಾದ ಭಟ್

ವಿಡಿಯೋ ನೋಡಿ: ಆಕ್ಸಿಡೆಂಟ್‌ ನನ್ನನ್ನು ವಿಶೇಷ ಚೇತನನ್ನನ್ನಾಗಿ ಮಾಡಿತು, ಆದರೆ ಲಾಕ್‌ಡೌನ್‌ ನಮ್ಮ ಜೀವನವನ್ನೇ ಕಿತ್ತುಕೊಂಡಿತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...