Homeಕರ್ನಾಟಕ‘ರೌಡಿ ಡಿಕೆಶಿ’ ಎಂದ ಬಿಜೆಪಿ; ಬಿಜೆಪಿ ಹುಟ್ಟಿದ್ದೆ ಕೊಲೆ, ಗಲಭೆಗಳಿಂದ ಎಂದು ಕಾಂಗ್ರೆಸ್ ತಿರುಗೇಟು!

‘ರೌಡಿ ಡಿಕೆಶಿ’ ಎಂದ ಬಿಜೆಪಿ; ಬಿಜೆಪಿ ಹುಟ್ಟಿದ್ದೆ ಕೊಲೆ, ಗಲಭೆಗಳಿಂದ ಎಂದು ಕಾಂಗ್ರೆಸ್ ತಿರುಗೇಟು!

- Advertisement -
- Advertisement -

ಹೆಗಲಿಗೆ ಕೈಯಿಟ್ಟಿದ್ದಾರೆಂದು ಆರೋಪಿಸಿ ಪಕ್ಷದ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ರಾಜ್ಯ ಬಿಜೆಪಿ ‘ರೌಡಿ ಡಿಕೆಶಿ’ ಎಂದು ಕರೆದಿದೆ. “ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌‌ಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ” ಎಂದು ಬಿಜೆಪಿ ಶನಿವಾರ ಹೇಳಿದೆ.

ಮಂಡ್ಯದ ಎಂ.ಕೆ. ದೊಡ್ಡಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ತನ್ನ ಹೆಗಲ ಮೇಲೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಿಟ್ಟಿದ್ದಾರೆ ಎಂದು ಹೇಳಿ ಶಿವಕುಮಾರ್‌‌ ಅವರ ಕಪಾಳಕ್ಕೆ ಬಾರಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ನಡೆಸುವುದು ಡಿಕೆಶಿ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಡಿಕೆಶಿಯವರೇ, ನೀವು ರಾಜಕಾರಣಿಯೋ ಅಥವಾ ರೌಡಿಯೋ!?” ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

“ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿಕೆಶಿ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು ? ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ?” ಎಂದು ಬಿಜೆಪಿ ಕೇಳಿದೆ. ಜೊತೆಗೆ ಈ ಹಿಂದಿನ ಇಂತಹದ್ದೇ ಹಲವು ಘಟನೆಗಳನ್ನು ನೆನಪಿಸಿರುವ ಬಿಜೆಪಿ ತನ್ನ ಟ್ವಿಟರ್‌ ಪೇಜ್‌ನಲ್ಲಿ “ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು?” ಎಂದು ಕೇಳಿದೆ.

ಟ್ವಿಟರ್‌ನಲ್ಲಿ ರೌಡಿ ಡಿಕೆಶಿ ಎಂಬ ಹ್ಯಾಶ್‌ ಟ್ಯಾಗ್‌ ಹಾಕಿರುವ ಬಿಜೆಪಿ, “ಶಿವಕುಮಾರ್‌‌ ತಮ್ಮ ವರ್ತನೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು. ನೀವು ಕೊತ್ವಾಲನ ಶಿಷ್ಯ ಆಗಿರಬಹುದು, ಜೈಲಿಗೂ ಹೋಗಿ ಬಂದಿರಬಹುದು ಆದರೆ ಆ ರಾಕ್ಷಸಿ ಗುಣಗಳನ್ನು ಅಮಾಯಕರ ಮೇಲೆ ತೋರ್ಪಡಿಸಬೇಡಿ. ರಾಜ್ಯಾಧ್ಯಕ್ಷರ ನಡೆ ಇತರರಿಗೆ ಮಾದರಿಯಾಗಿರಲಿ, ಇದು ಬಸವಣ್ಣನ ನಾಡು ಎಂಬುದು ನೆನಪಿರಲಿ” ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ಕೇಂದ್ರ ಚರ್ಚೆ ನಡೆಸಲು ಬಯಸಿದರೆ, ರೈತರಿಗೆ ಷರತ್ತು ವಿಧಿಸುವಂತಿಲ್ಲ- ರಾಕೇಶ್ ಟಿಕಾಯತ್

ಇದಕ್ಕೆ ಕಾಂಗ್ರೆಸ್ ಟ್ವಿಟರ್‌ನಲ್ಲೆ ಪ್ರತಿಕ್ರಿಯಿಸಿದ್ದು, “ಸಾರ್ವಜನಿಕ ಬದುಕಿನಲ್ಲಿರುವವರಿಗೆ ಸಾರ್ವಜನಿಕ ಸ್ಥಳದಲ್ಲಿ ಕಿರಿಕಿರಿ ಉಂಟಾಗುವುದು ಸಹಜ. ತಮ್ಮದೇ ಡ್ರೈವರ್ ಮೇಲೆ ಮಾದ್ಯಮದವರೆದುರು ಹಲ್ಲೆ ನಡೆಸಿದ ಯಡಿಯೂರಪ್ಪ ಅವರು ಭೂಗತ ಪಾತಕಿ ದಾವೂದ್ ಇಬ್ರಾಹಿಂನಿಂದ ಟ್ರೈನಿಂಗ್ ತೆಗೆದುಕೊಂಡಿದ್ದರೇ? ಇದಕ್ಕೆ ಬಿಜೆಪಿ ಉತ್ತರಿಸಬೇಕು! ಬಿಜೆಪಿ ಹುಟ್ಟಿಕೊಂಡಿದ್ದೇ ಹಲ್ಲೆ, ಕೊಲೆ, ಗಲಭೆಗಳಿಂದ” ಎಂದು ಹೇಳಿದೆ.

ಇದನ್ನೂ ಓದಿ: ಭಾರತ ಪ್ರಜಾಪ್ರಬುತ್ವದ ನೆಲೆ ಬೆಲೆ: ಬಿ ಶ್ರೀಪಾದ ಭಟ್

ವಿಡಿಯೋ ನೋಡಿ: ಆಕ್ಸಿಡೆಂಟ್‌ ನನ್ನನ್ನು ವಿಶೇಷ ಚೇತನನ್ನನ್ನಾಗಿ ಮಾಡಿತು, ಆದರೆ ಲಾಕ್‌ಡೌನ್‌ ನಮ್ಮ ಜೀವನವನ್ನೇ ಕಿತ್ತುಕೊಂಡಿತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...