Homeಮುಖಪುಟನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧದ ಹಮ್ಮಿಕೊಂಡಿದ್ದ ಬಿಜೆಪಿ ಯುವ ಮೋರ್ಚಾ ರ್‍ಯಾಲಿ ತನ್ನ ಪ್ರಭಾವ ಬಿರುವಲ್ಲಿ ಸೋತಿದೆ ಎಂದು ಟೆಲಿಗ್ರಾಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ.

ಬಿಜೆಪಿ ಕಾರ್ಯಕರ್ತರ ಹತ್ಯೆ ಆರೋಪದ ಜೊತೆಗೆ ಪಾರದರ್ಶಕ ನೇಮಕಾತಿ ಪ್ರಕ್ರಿಯೆ, ಉದ್ಯೋಗಗಳು ಮತ್ತು ವಿವಿಧ ಪರೀಕ್ಷೆಗಳಿಗೆ ಹೆಚ್ಚಿನ ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತಹ ಯುವ ಕೇಂದ್ರಿತ ಬೇಡಿಕೆಗಳ ಮೇಲೆ ಆಯೋಜಿಸಲಾಗಿದ್ದ ರ್ಯಾಲಿಯನ್ನು ನಾಲ್ಕು ಬಿಜಪಿ ಮುಖಂಡರ ನೇತೃತ್ವದಲ್ಲಿ ನಾಲ್ಕು ಕಡೆಗಳಲ್ಲಿ ಆಯೋಜಿಸಲಾಗಿತ್ತು.

ರಾಜ್ಯ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ಬಳಿ, ಬಂಗಾಳದ ಕೈಲಾಶ್ ವಿಜಯವರ್ಗಿಯಾ ನೇತೃತ್ವದಲ್ಲಿ ಹೇಸ್ಟಿಂಗ್ಸ್‌ನಲ್ಲಿರುವ ಪಕ್ಷದ ಕಚೇರಿ, ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಹೌರಾ ಮೈದಾನ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ನೇತೃತ್ವದಲ್ಲಿ ಸಂತಾಗಾಚಿಗಳಲ್ಲಿ ರ್‍ಯಾಲಿ ಆಯೋಜಿಸಲಾಗಿತ್ತು.

ನಿನ್ನೆ ನಡೆದ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಭಾರತೀಯ ಜನತಾ ಯುವ ಮೊರ್ಚಾ ರ್‍ಯಾಲಿಗೆ (ನಬನ್ನಾ ಚಲೋ) ತೀವ್ರ ಪ್ರಚಾರ ನೀಡಲಾಗಿತ್ತು. ಆದರೆ ರ್ಯಾಲಿಯಲ್ಲಿ ಬಹಳ ಕಡಿಮೆ ಇದ್ದುದ್ದಲ್ಲದೇ, ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ಸಫಲವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ: ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಪ.ಬಂಗಾಳ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯ ಮೂಲವೊಂದರ ಪ್ರಕಾರ ’ಮಧ್ಯಾಹ್ನದ ಹೊತ್ತಿಗೆ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಂದಲೂ ನಬನ್ನಾ ಚಲೋದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೀವ್ರಗೊಳಿಸಲು ಸಾಧ್ಯವಿಲ್ಲ ಎಂದು ನಮಗೆ ಸ್ಪಷ್ಟವಾಯಿತು” ಎಂದು ಕಾರ್ಯಕರ್ತರೊಬ್ಬರು ತಿಳಿಸಿದ್ದರು ಎನ್ನಲಾಗಿದೆ.

ಹಲವು ಜಿಲ್ಲೆಗಳಿಂದ ಬರುವ ಕಾರ್ಯಕರ್ತರನ್ನು ಟಿಎಂಸಿ ಕಾರ್ಯಕರ್ತರು ತಡೆದರೂ 46,000 ಕ್ಕಿಂತ ಹೆಚ್ಚಿನ ಜನ ರ್‍ಯಾಲಿಯಲ್ಲಿ ಭಾಗಿಯಾಗಿದ್ದಾರೆ ಎಂದು ಬಂಗಾಳ ಬಿಜೆಪಿ ಯುವ ವಿಭಾಗದ ರಾಜ್ಯ ಘಟಕದ ಮುಖ್ಯಸ್ಥ ಸೌಮಿತ್ರಾ ಖಾನ್ ಹೇಳಿಕೊಂಡಿದ್ದಾರೆ. ಆದರೆ ಪಕ್ಷದ ಇತರರು ಜನರನ್ನು ಸೇರಿಸುವುದು ಒಂದು ದೊಡ್ಡ ಸಮಸ್ಯೆಯೆಂದು ಒಪ್ಪಿಕೊಂಡಿದ್ದಾರೆ.

PC: Doordarshan

”ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ” ಎಂದು ರಾಜ್ಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ನಬನ್ನಾ ಚಲೋ ರ್‍ಯಾಲಿ ವಿಫಲವಾಗಲು ಮೂಲ ಕಾರಣ ಅದು ಯೋಜಿತ ಕಾರ್ಯಕ್ರಮವಾಗಿರಲಿಲ್ಲ. ಜೊತೆಗೆ ನಬನ್ನಾವನ್ನು ನಿನ್ನೆ ಮುಚ್ಚಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿತ್ತು.

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ನೂರಾರು ಬಿಜೆಪಿ ಕಾರ್ಯಕರ್ತರು-ಪೊಲೀಸರ ನಡುವೆ ಸಂಘರ್ಷ ಉಂಟಾಗಿ ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾದ್ದರು.

ಈ ಘಟನೆಯನ್ನು ತೇಜಸ್ವಿ ಸೂರ್ಯ ಖಂಡಿಸಿದ್ದರು. ’ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದರು. ಇದು ಬ್ಲಾಕ್ ಡೇ, ಪೊಲೀಸ್ ಠಾಣೆಗಳು ಮಮತಾ ಅವರ ಬಂಗಾಳದಲ್ಲಿ ಟಿಎಂಸಿ ಪಕ್ಷದ ಕಚೇರಿಗಳಾಗಿವೆ ಎಂದು  ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತಮ್ಮ ಸರಣಿ ಟ್ವೀಟ್‌ಗಳಲ್ಲಿ “ಪಶ್ಚಿಮ ಬಂಗಾಳದಲ್ಲಿ ತನ್ನ ದಬ್ಬಾಳಿಕೆ ಮತ್ತು ರಕ್ತಸಿಕ್ತ ದುಷ್ಕೃತ್ಯದ ವಿರುದ್ಧ ಪ್ರತಿಭಟನೆ ನಡೆಸದಂತೆ ತಡೆಯುವ ಪ್ರಯತ್ನದಲ್ಲಿ ಮಮತಾ ಬ್ಯಾನರ್ಜಿಯ ಕಾರ್ಯಕರ್ತರು ಮತ್ತು ಅವರ ನೇತೃತ್ವದ ಸರ್ಕಾರದ ’ಯಂತ್ರೋಪಕರಣಗಳು’ ಬಿಜೆಪಿ ಕಾರ್ಯಕರ್ತರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಬಿಚ್ಚಿಟ್ಟಿವೆ’ ಎಂದು ಆರೋಪಿಸಿದ್ದಾರೆ. ಅಧಿಕಾರದ ಇಂತಹ ದುರುಪಯೋಗವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫಿರ್ಹಾದ್ ಹಕೀಮ್ “ಬಿಜೆಪಿ ರಾಜಕೀಯ ಪಕ್ಷವಲ್ಲ. ಅದು ಭಯೋತ್ಪಾದನೆಯ ಪಕ್ಷ…. ಇದು ಉತ್ತರ ಪ್ರದೇಶದಿಂದ ತನ್ನ ಮಾದರಿಯನ್ನು ಬಂಗಾಳಕ್ಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಒಟ್ಟಾರೆ, ನೂತನವಾಗಿ ಬಿಜೆಪಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿಗಳಾಗಿ ನೇಮಕವಾದವರು ಮೊದಲ ರ್‍ಯಾಲಿಯಲ್ಲೇ ತಮ್ಮ ಪ್ರಭಾವ ಬೀರಲು ವಿಫಲರಾಗಿರುವುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ ಎಂದು ಅಲ್ಲಿಯ ರಾಜ್ಯ ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ


ಇದನ್ನೂ ಓದಿ: ಭಯೋತ್ಪಾದಕರೆಂದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ 9 ಜನರನ್ನು ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...