Homeಮುಖಪುಟನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧದ ಹಮ್ಮಿಕೊಂಡಿದ್ದ ಬಿಜೆಪಿ ಯುವ ಮೋರ್ಚಾ ರ್‍ಯಾಲಿ ತನ್ನ ಪ್ರಭಾವ ಬಿರುವಲ್ಲಿ ಸೋತಿದೆ ಎಂದು ಟೆಲಿಗ್ರಾಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ.

ಬಿಜೆಪಿ ಕಾರ್ಯಕರ್ತರ ಹತ್ಯೆ ಆರೋಪದ ಜೊತೆಗೆ ಪಾರದರ್ಶಕ ನೇಮಕಾತಿ ಪ್ರಕ್ರಿಯೆ, ಉದ್ಯೋಗಗಳು ಮತ್ತು ವಿವಿಧ ಪರೀಕ್ಷೆಗಳಿಗೆ ಹೆಚ್ಚಿನ ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತಹ ಯುವ ಕೇಂದ್ರಿತ ಬೇಡಿಕೆಗಳ ಮೇಲೆ ಆಯೋಜಿಸಲಾಗಿದ್ದ ರ್ಯಾಲಿಯನ್ನು ನಾಲ್ಕು ಬಿಜಪಿ ಮುಖಂಡರ ನೇತೃತ್ವದಲ್ಲಿ ನಾಲ್ಕು ಕಡೆಗಳಲ್ಲಿ ಆಯೋಜಿಸಲಾಗಿತ್ತು.

ರಾಜ್ಯ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ಬಳಿ, ಬಂಗಾಳದ ಕೈಲಾಶ್ ವಿಜಯವರ್ಗಿಯಾ ನೇತೃತ್ವದಲ್ಲಿ ಹೇಸ್ಟಿಂಗ್ಸ್‌ನಲ್ಲಿರುವ ಪಕ್ಷದ ಕಚೇರಿ, ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಹೌರಾ ಮೈದಾನ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ನೇತೃತ್ವದಲ್ಲಿ ಸಂತಾಗಾಚಿಗಳಲ್ಲಿ ರ್‍ಯಾಲಿ ಆಯೋಜಿಸಲಾಗಿತ್ತು.

ನಿನ್ನೆ ನಡೆದ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಭಾರತೀಯ ಜನತಾ ಯುವ ಮೊರ್ಚಾ ರ್‍ಯಾಲಿಗೆ (ನಬನ್ನಾ ಚಲೋ) ತೀವ್ರ ಪ್ರಚಾರ ನೀಡಲಾಗಿತ್ತು. ಆದರೆ ರ್ಯಾಲಿಯಲ್ಲಿ ಬಹಳ ಕಡಿಮೆ ಇದ್ದುದ್ದಲ್ಲದೇ, ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ಸಫಲವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ: ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಪ.ಬಂಗಾಳ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯ ಮೂಲವೊಂದರ ಪ್ರಕಾರ ’ಮಧ್ಯಾಹ್ನದ ಹೊತ್ತಿಗೆ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಂದಲೂ ನಬನ್ನಾ ಚಲೋದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೀವ್ರಗೊಳಿಸಲು ಸಾಧ್ಯವಿಲ್ಲ ಎಂದು ನಮಗೆ ಸ್ಪಷ್ಟವಾಯಿತು” ಎಂದು ಕಾರ್ಯಕರ್ತರೊಬ್ಬರು ತಿಳಿಸಿದ್ದರು ಎನ್ನಲಾಗಿದೆ.

ಹಲವು ಜಿಲ್ಲೆಗಳಿಂದ ಬರುವ ಕಾರ್ಯಕರ್ತರನ್ನು ಟಿಎಂಸಿ ಕಾರ್ಯಕರ್ತರು ತಡೆದರೂ 46,000 ಕ್ಕಿಂತ ಹೆಚ್ಚಿನ ಜನ ರ್‍ಯಾಲಿಯಲ್ಲಿ ಭಾಗಿಯಾಗಿದ್ದಾರೆ ಎಂದು ಬಂಗಾಳ ಬಿಜೆಪಿ ಯುವ ವಿಭಾಗದ ರಾಜ್ಯ ಘಟಕದ ಮುಖ್ಯಸ್ಥ ಸೌಮಿತ್ರಾ ಖಾನ್ ಹೇಳಿಕೊಂಡಿದ್ದಾರೆ. ಆದರೆ ಪಕ್ಷದ ಇತರರು ಜನರನ್ನು ಸೇರಿಸುವುದು ಒಂದು ದೊಡ್ಡ ಸಮಸ್ಯೆಯೆಂದು ಒಪ್ಪಿಕೊಂಡಿದ್ದಾರೆ.

PC: Doordarshan

”ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ” ಎಂದು ರಾಜ್ಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ನಬನ್ನಾ ಚಲೋ ರ್‍ಯಾಲಿ ವಿಫಲವಾಗಲು ಮೂಲ ಕಾರಣ ಅದು ಯೋಜಿತ ಕಾರ್ಯಕ್ರಮವಾಗಿರಲಿಲ್ಲ. ಜೊತೆಗೆ ನಬನ್ನಾವನ್ನು ನಿನ್ನೆ ಮುಚ್ಚಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿತ್ತು.

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ನೂರಾರು ಬಿಜೆಪಿ ಕಾರ್ಯಕರ್ತರು-ಪೊಲೀಸರ ನಡುವೆ ಸಂಘರ್ಷ ಉಂಟಾಗಿ ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾದ್ದರು.

ಈ ಘಟನೆಯನ್ನು ತೇಜಸ್ವಿ ಸೂರ್ಯ ಖಂಡಿಸಿದ್ದರು. ’ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದರು. ಇದು ಬ್ಲಾಕ್ ಡೇ, ಪೊಲೀಸ್ ಠಾಣೆಗಳು ಮಮತಾ ಅವರ ಬಂಗಾಳದಲ್ಲಿ ಟಿಎಂಸಿ ಪಕ್ಷದ ಕಚೇರಿಗಳಾಗಿವೆ ಎಂದು  ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತಮ್ಮ ಸರಣಿ ಟ್ವೀಟ್‌ಗಳಲ್ಲಿ “ಪಶ್ಚಿಮ ಬಂಗಾಳದಲ್ಲಿ ತನ್ನ ದಬ್ಬಾಳಿಕೆ ಮತ್ತು ರಕ್ತಸಿಕ್ತ ದುಷ್ಕೃತ್ಯದ ವಿರುದ್ಧ ಪ್ರತಿಭಟನೆ ನಡೆಸದಂತೆ ತಡೆಯುವ ಪ್ರಯತ್ನದಲ್ಲಿ ಮಮತಾ ಬ್ಯಾನರ್ಜಿಯ ಕಾರ್ಯಕರ್ತರು ಮತ್ತು ಅವರ ನೇತೃತ್ವದ ಸರ್ಕಾರದ ’ಯಂತ್ರೋಪಕರಣಗಳು’ ಬಿಜೆಪಿ ಕಾರ್ಯಕರ್ತರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಬಿಚ್ಚಿಟ್ಟಿವೆ’ ಎಂದು ಆರೋಪಿಸಿದ್ದಾರೆ. ಅಧಿಕಾರದ ಇಂತಹ ದುರುಪಯೋಗವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫಿರ್ಹಾದ್ ಹಕೀಮ್ “ಬಿಜೆಪಿ ರಾಜಕೀಯ ಪಕ್ಷವಲ್ಲ. ಅದು ಭಯೋತ್ಪಾದನೆಯ ಪಕ್ಷ…. ಇದು ಉತ್ತರ ಪ್ರದೇಶದಿಂದ ತನ್ನ ಮಾದರಿಯನ್ನು ಬಂಗಾಳಕ್ಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಒಟ್ಟಾರೆ, ನೂತನವಾಗಿ ಬಿಜೆಪಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿಗಳಾಗಿ ನೇಮಕವಾದವರು ಮೊದಲ ರ್‍ಯಾಲಿಯಲ್ಲೇ ತಮ್ಮ ಪ್ರಭಾವ ಬೀರಲು ವಿಫಲರಾಗಿರುವುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ ಎಂದು ಅಲ್ಲಿಯ ರಾಜ್ಯ ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ


ಇದನ್ನೂ ಓದಿ: ಭಯೋತ್ಪಾದಕರೆಂದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ 9 ಜನರನ್ನು ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...