Homeಮುಖಪುಟನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧದ ಹಮ್ಮಿಕೊಂಡಿದ್ದ ಬಿಜೆಪಿ ಯುವ ಮೋರ್ಚಾ ರ್‍ಯಾಲಿ ತನ್ನ ಪ್ರಭಾವ ಬಿರುವಲ್ಲಿ ಸೋತಿದೆ ಎಂದು ಟೆಲಿಗ್ರಾಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ.

ಬಿಜೆಪಿ ಕಾರ್ಯಕರ್ತರ ಹತ್ಯೆ ಆರೋಪದ ಜೊತೆಗೆ ಪಾರದರ್ಶಕ ನೇಮಕಾತಿ ಪ್ರಕ್ರಿಯೆ, ಉದ್ಯೋಗಗಳು ಮತ್ತು ವಿವಿಧ ಪರೀಕ್ಷೆಗಳಿಗೆ ಹೆಚ್ಚಿನ ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತಹ ಯುವ ಕೇಂದ್ರಿತ ಬೇಡಿಕೆಗಳ ಮೇಲೆ ಆಯೋಜಿಸಲಾಗಿದ್ದ ರ್ಯಾಲಿಯನ್ನು ನಾಲ್ಕು ಬಿಜಪಿ ಮುಖಂಡರ ನೇತೃತ್ವದಲ್ಲಿ ನಾಲ್ಕು ಕಡೆಗಳಲ್ಲಿ ಆಯೋಜಿಸಲಾಗಿತ್ತು.

ರಾಜ್ಯ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ಬಳಿ, ಬಂಗಾಳದ ಕೈಲಾಶ್ ವಿಜಯವರ್ಗಿಯಾ ನೇತೃತ್ವದಲ್ಲಿ ಹೇಸ್ಟಿಂಗ್ಸ್‌ನಲ್ಲಿರುವ ಪಕ್ಷದ ಕಚೇರಿ, ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಹೌರಾ ಮೈದಾನ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ನೇತೃತ್ವದಲ್ಲಿ ಸಂತಾಗಾಚಿಗಳಲ್ಲಿ ರ್‍ಯಾಲಿ ಆಯೋಜಿಸಲಾಗಿತ್ತು.

ನಿನ್ನೆ ನಡೆದ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಭಾರತೀಯ ಜನತಾ ಯುವ ಮೊರ್ಚಾ ರ್‍ಯಾಲಿಗೆ (ನಬನ್ನಾ ಚಲೋ) ತೀವ್ರ ಪ್ರಚಾರ ನೀಡಲಾಗಿತ್ತು. ಆದರೆ ರ್ಯಾಲಿಯಲ್ಲಿ ಬಹಳ ಕಡಿಮೆ ಇದ್ದುದ್ದಲ್ಲದೇ, ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ಸಫಲವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ: ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಪ.ಬಂಗಾಳ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯ ಮೂಲವೊಂದರ ಪ್ರಕಾರ ’ಮಧ್ಯಾಹ್ನದ ಹೊತ್ತಿಗೆ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಂದಲೂ ನಬನ್ನಾ ಚಲೋದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೀವ್ರಗೊಳಿಸಲು ಸಾಧ್ಯವಿಲ್ಲ ಎಂದು ನಮಗೆ ಸ್ಪಷ್ಟವಾಯಿತು” ಎಂದು ಕಾರ್ಯಕರ್ತರೊಬ್ಬರು ತಿಳಿಸಿದ್ದರು ಎನ್ನಲಾಗಿದೆ.

ಹಲವು ಜಿಲ್ಲೆಗಳಿಂದ ಬರುವ ಕಾರ್ಯಕರ್ತರನ್ನು ಟಿಎಂಸಿ ಕಾರ್ಯಕರ್ತರು ತಡೆದರೂ 46,000 ಕ್ಕಿಂತ ಹೆಚ್ಚಿನ ಜನ ರ್‍ಯಾಲಿಯಲ್ಲಿ ಭಾಗಿಯಾಗಿದ್ದಾರೆ ಎಂದು ಬಂಗಾಳ ಬಿಜೆಪಿ ಯುವ ವಿಭಾಗದ ರಾಜ್ಯ ಘಟಕದ ಮುಖ್ಯಸ್ಥ ಸೌಮಿತ್ರಾ ಖಾನ್ ಹೇಳಿಕೊಂಡಿದ್ದಾರೆ. ಆದರೆ ಪಕ್ಷದ ಇತರರು ಜನರನ್ನು ಸೇರಿಸುವುದು ಒಂದು ದೊಡ್ಡ ಸಮಸ್ಯೆಯೆಂದು ಒಪ್ಪಿಕೊಂಡಿದ್ದಾರೆ.

PC: Doordarshan

”ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ” ಎಂದು ರಾಜ್ಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ನಬನ್ನಾ ಚಲೋ ರ್‍ಯಾಲಿ ವಿಫಲವಾಗಲು ಮೂಲ ಕಾರಣ ಅದು ಯೋಜಿತ ಕಾರ್ಯಕ್ರಮವಾಗಿರಲಿಲ್ಲ. ಜೊತೆಗೆ ನಬನ್ನಾವನ್ನು ನಿನ್ನೆ ಮುಚ್ಚಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿತ್ತು.

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ನೂರಾರು ಬಿಜೆಪಿ ಕಾರ್ಯಕರ್ತರು-ಪೊಲೀಸರ ನಡುವೆ ಸಂಘರ್ಷ ಉಂಟಾಗಿ ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾದ್ದರು.

ಈ ಘಟನೆಯನ್ನು ತೇಜಸ್ವಿ ಸೂರ್ಯ ಖಂಡಿಸಿದ್ದರು. ’ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದರು. ಇದು ಬ್ಲಾಕ್ ಡೇ, ಪೊಲೀಸ್ ಠಾಣೆಗಳು ಮಮತಾ ಅವರ ಬಂಗಾಳದಲ್ಲಿ ಟಿಎಂಸಿ ಪಕ್ಷದ ಕಚೇರಿಗಳಾಗಿವೆ ಎಂದು  ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತಮ್ಮ ಸರಣಿ ಟ್ವೀಟ್‌ಗಳಲ್ಲಿ “ಪಶ್ಚಿಮ ಬಂಗಾಳದಲ್ಲಿ ತನ್ನ ದಬ್ಬಾಳಿಕೆ ಮತ್ತು ರಕ್ತಸಿಕ್ತ ದುಷ್ಕೃತ್ಯದ ವಿರುದ್ಧ ಪ್ರತಿಭಟನೆ ನಡೆಸದಂತೆ ತಡೆಯುವ ಪ್ರಯತ್ನದಲ್ಲಿ ಮಮತಾ ಬ್ಯಾನರ್ಜಿಯ ಕಾರ್ಯಕರ್ತರು ಮತ್ತು ಅವರ ನೇತೃತ್ವದ ಸರ್ಕಾರದ ’ಯಂತ್ರೋಪಕರಣಗಳು’ ಬಿಜೆಪಿ ಕಾರ್ಯಕರ್ತರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಬಿಚ್ಚಿಟ್ಟಿವೆ’ ಎಂದು ಆರೋಪಿಸಿದ್ದಾರೆ. ಅಧಿಕಾರದ ಇಂತಹ ದುರುಪಯೋಗವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫಿರ್ಹಾದ್ ಹಕೀಮ್ “ಬಿಜೆಪಿ ರಾಜಕೀಯ ಪಕ್ಷವಲ್ಲ. ಅದು ಭಯೋತ್ಪಾದನೆಯ ಪಕ್ಷ…. ಇದು ಉತ್ತರ ಪ್ರದೇಶದಿಂದ ತನ್ನ ಮಾದರಿಯನ್ನು ಬಂಗಾಳಕ್ಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಒಟ್ಟಾರೆ, ನೂತನವಾಗಿ ಬಿಜೆಪಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿಗಳಾಗಿ ನೇಮಕವಾದವರು ಮೊದಲ ರ್‍ಯಾಲಿಯಲ್ಲೇ ತಮ್ಮ ಪ್ರಭಾವ ಬೀರಲು ವಿಫಲರಾಗಿರುವುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ ಎಂದು ಅಲ್ಲಿಯ ರಾಜ್ಯ ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ


ಇದನ್ನೂ ಓದಿ: ಭಯೋತ್ಪಾದಕರೆಂದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ 9 ಜನರನ್ನು ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...