Homeಮುಖಪುಟನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧದ ಹಮ್ಮಿಕೊಂಡಿದ್ದ ಬಿಜೆಪಿ ಯುವ ಮೋರ್ಚಾ ರ್‍ಯಾಲಿ ತನ್ನ ಪ್ರಭಾವ ಬಿರುವಲ್ಲಿ ಸೋತಿದೆ ಎಂದು ಟೆಲಿಗ್ರಾಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ.

ಬಿಜೆಪಿ ಕಾರ್ಯಕರ್ತರ ಹತ್ಯೆ ಆರೋಪದ ಜೊತೆಗೆ ಪಾರದರ್ಶಕ ನೇಮಕಾತಿ ಪ್ರಕ್ರಿಯೆ, ಉದ್ಯೋಗಗಳು ಮತ್ತು ವಿವಿಧ ಪರೀಕ್ಷೆಗಳಿಗೆ ಹೆಚ್ಚಿನ ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತಹ ಯುವ ಕೇಂದ್ರಿತ ಬೇಡಿಕೆಗಳ ಮೇಲೆ ಆಯೋಜಿಸಲಾಗಿದ್ದ ರ್ಯಾಲಿಯನ್ನು ನಾಲ್ಕು ಬಿಜಪಿ ಮುಖಂಡರ ನೇತೃತ್ವದಲ್ಲಿ ನಾಲ್ಕು ಕಡೆಗಳಲ್ಲಿ ಆಯೋಜಿಸಲಾಗಿತ್ತು.

ರಾಜ್ಯ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ಬಳಿ, ಬಂಗಾಳದ ಕೈಲಾಶ್ ವಿಜಯವರ್ಗಿಯಾ ನೇತೃತ್ವದಲ್ಲಿ ಹೇಸ್ಟಿಂಗ್ಸ್‌ನಲ್ಲಿರುವ ಪಕ್ಷದ ಕಚೇರಿ, ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಹೌರಾ ಮೈದಾನ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ನೇತೃತ್ವದಲ್ಲಿ ಸಂತಾಗಾಚಿಗಳಲ್ಲಿ ರ್‍ಯಾಲಿ ಆಯೋಜಿಸಲಾಗಿತ್ತು.

ನಿನ್ನೆ ನಡೆದ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಭಾರತೀಯ ಜನತಾ ಯುವ ಮೊರ್ಚಾ ರ್‍ಯಾಲಿಗೆ (ನಬನ್ನಾ ಚಲೋ) ತೀವ್ರ ಪ್ರಚಾರ ನೀಡಲಾಗಿತ್ತು. ಆದರೆ ರ್ಯಾಲಿಯಲ್ಲಿ ಬಹಳ ಕಡಿಮೆ ಇದ್ದುದ್ದಲ್ಲದೇ, ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ಸಫಲವಾಗಿಲ್ಲ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ: ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್, ಅಶ್ರುವಾಯು ಪ್ರಯೋಗ

ಪ.ಬಂಗಾಳ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯ ಮೂಲವೊಂದರ ಪ್ರಕಾರ ’ಮಧ್ಯಾಹ್ನದ ಹೊತ್ತಿಗೆ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಂದಲೂ ನಬನ್ನಾ ಚಲೋದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೀವ್ರಗೊಳಿಸಲು ಸಾಧ್ಯವಿಲ್ಲ ಎಂದು ನಮಗೆ ಸ್ಪಷ್ಟವಾಯಿತು” ಎಂದು ಕಾರ್ಯಕರ್ತರೊಬ್ಬರು ತಿಳಿಸಿದ್ದರು ಎನ್ನಲಾಗಿದೆ.

ಹಲವು ಜಿಲ್ಲೆಗಳಿಂದ ಬರುವ ಕಾರ್ಯಕರ್ತರನ್ನು ಟಿಎಂಸಿ ಕಾರ್ಯಕರ್ತರು ತಡೆದರೂ 46,000 ಕ್ಕಿಂತ ಹೆಚ್ಚಿನ ಜನ ರ್‍ಯಾಲಿಯಲ್ಲಿ ಭಾಗಿಯಾಗಿದ್ದಾರೆ ಎಂದು ಬಂಗಾಳ ಬಿಜೆಪಿ ಯುವ ವಿಭಾಗದ ರಾಜ್ಯ ಘಟಕದ ಮುಖ್ಯಸ್ಥ ಸೌಮಿತ್ರಾ ಖಾನ್ ಹೇಳಿಕೊಂಡಿದ್ದಾರೆ. ಆದರೆ ಪಕ್ಷದ ಇತರರು ಜನರನ್ನು ಸೇರಿಸುವುದು ಒಂದು ದೊಡ್ಡ ಸಮಸ್ಯೆಯೆಂದು ಒಪ್ಪಿಕೊಂಡಿದ್ದಾರೆ.

PC: Doordarshan

”ರ್‍ಯಾಲಿಯಲ್ಲಿ ಕಾರ್ಯಕರ್ತರನ್ನು ಸೇರಿಸುವ ಮೂಲ ಗುರಿ 2 ಲಕ್ಷಕ್ಕೆ ಇಟ್ಟುಕೊಳ್ಳಲಾಗಿತ್ತು. ಇದನ್ನು ಒಂದೆರಡು ದಿನಗಳ ಹಿಂದೆ ಅಧಿಕೃತವಾಗಿ 50,000ಕ್ಕೆ ಇಳಿಸಲಾಯಿತು. ಆದರೆ ವಾಸ್ತವದಲ್ಲಿ 15,000 ಜನ ಕೂಡ ಸೇರಲಿಲ್ಲ” ಎಂದು ರಾಜ್ಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ನಬನ್ನಾ ಚಲೋ ರ್‍ಯಾಲಿ ವಿಫಲವಾಗಲು ಮೂಲ ಕಾರಣ ಅದು ಯೋಜಿತ ಕಾರ್ಯಕ್ರಮವಾಗಿರಲಿಲ್ಲ. ಜೊತೆಗೆ ನಬನ್ನಾವನ್ನು ನಿನ್ನೆ ಮುಚ್ಚಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್‌ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯೂ ಇರುವ ಸಚಿವಾಲಯವನ್ನು ಎರಡು ದಿನಗಳ ಅವಧಿಗೆ ಮುಚ್ಚಲಾಗಿತ್ತು.

ಪಶ್ಚಿಮ ಬಂಗಾಳ ಸಚಿವಾಲಯ ‘ನಬನ್ನಾ’ದ ಹೊರಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ವಿಭಾಗವು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ನೂರಾರು ಬಿಜೆಪಿ ಕಾರ್ಯಕರ್ತರು-ಪೊಲೀಸರ ನಡುವೆ ಸಂಘರ್ಷ ಉಂಟಾಗಿ ಪೊಲೀಸರು ಲಾಠೀ ಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾದ್ದರು.

ಈ ಘಟನೆಯನ್ನು ತೇಜಸ್ವಿ ಸೂರ್ಯ ಖಂಡಿಸಿದ್ದರು. ’ಟಿಸಿಎಂ ಗೂಂಡಾಗಳು ನಮ್ಮ ಮೇಲೆ ಕಂಟ್ರಿ ಬಾಂಬ್‌ಗಳನ್ನು ಎಸೆದಿದ್ದಾರೆ. ಫ್ಯಾಸಿಸಂ ಅಂದರೆ ಇದೆ’ ಎಂದು ಟ್ವೀಟ್ ಮಾಡಿದ್ದರು. ಇದು ಬ್ಲಾಕ್ ಡೇ, ಪೊಲೀಸ್ ಠಾಣೆಗಳು ಮಮತಾ ಅವರ ಬಂಗಾಳದಲ್ಲಿ ಟಿಎಂಸಿ ಪಕ್ಷದ ಕಚೇರಿಗಳಾಗಿವೆ ಎಂದು  ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತಮ್ಮ ಸರಣಿ ಟ್ವೀಟ್‌ಗಳಲ್ಲಿ “ಪಶ್ಚಿಮ ಬಂಗಾಳದಲ್ಲಿ ತನ್ನ ದಬ್ಬಾಳಿಕೆ ಮತ್ತು ರಕ್ತಸಿಕ್ತ ದುಷ್ಕೃತ್ಯದ ವಿರುದ್ಧ ಪ್ರತಿಭಟನೆ ನಡೆಸದಂತೆ ತಡೆಯುವ ಪ್ರಯತ್ನದಲ್ಲಿ ಮಮತಾ ಬ್ಯಾನರ್ಜಿಯ ಕಾರ್ಯಕರ್ತರು ಮತ್ತು ಅವರ ನೇತೃತ್ವದ ಸರ್ಕಾರದ ’ಯಂತ್ರೋಪಕರಣಗಳು’ ಬಿಜೆಪಿ ಕಾರ್ಯಕರ್ತರ ಮೇಲೆ ವಿವೇಚನಾರಹಿತ ಶಕ್ತಿಯನ್ನು ಬಿಚ್ಚಿಟ್ಟಿವೆ’ ಎಂದು ಆರೋಪಿಸಿದ್ದಾರೆ. ಅಧಿಕಾರದ ಇಂತಹ ದುರುಪಯೋಗವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫಿರ್ಹಾದ್ ಹಕೀಮ್ “ಬಿಜೆಪಿ ರಾಜಕೀಯ ಪಕ್ಷವಲ್ಲ. ಅದು ಭಯೋತ್ಪಾದನೆಯ ಪಕ್ಷ…. ಇದು ಉತ್ತರ ಪ್ರದೇಶದಿಂದ ತನ್ನ ಮಾದರಿಯನ್ನು ಬಂಗಾಳಕ್ಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಒಟ್ಟಾರೆ, ನೂತನವಾಗಿ ಬಿಜೆಪಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿಗಳಾಗಿ ನೇಮಕವಾದವರು ಮೊದಲ ರ್‍ಯಾಲಿಯಲ್ಲೇ ತಮ್ಮ ಪ್ರಭಾವ ಬೀರಲು ವಿಫಲರಾಗಿರುವುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ ಎಂದು ಅಲ್ಲಿಯ ರಾಜ್ಯ ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ


ಇದನ್ನೂ ಓದಿ: ಭಯೋತ್ಪಾದಕರೆಂದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ 9 ಜನರನ್ನು ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...