Homeಮುಖಪುಟ2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

2019ರ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಮೇಲೆ ಗಮನಹರಿಸಿ 2024ರಲ್ಲಿ ಅವುಗಳನ್ನು ಹೇಗೆ ಗೆಲ್ಲುವುದು ಎಂದು ಬಿಜೆಪಿ ಯೋಚಿಸುತ್ತಿರುವುದರ ಭಾಗವಾಗಿಯೇ ಜೆ.ಪಿ.ನಡ್ಡಾ ಈ ಪ್ರವಾಸವನ್ನು ಕೈಗೊಂಡಿದ್ದಾರೆ

- Advertisement -
- Advertisement -

ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ 2024ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಿದ್ದು, ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ದೇಶದಾದ್ಯಂತ 100 ದಿನಗಳ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಬಿಹಾರ ವಿಜಯದ ನಂತರ ವಿಶ್ರಾಂತಿ ಪಡೆಯದ ಜೆ.ಪಿ.ನಡ್ಡಾ ಶೀಘ್ರದಲ್ಲೇ 100 ದಿನಗಳ “ರಾಷ್ಟ್ರೀಯ ವಿಸ್ತ್ರಿತ್ ಪ್ರವಾಸ”ವನ್ನು ಕೈಗೊಳ್ಳಲಿದ್ದಾರೆ. 2024ರ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಪ್ರತಿ ರಾಜ್ಯಗಳಲ್ಲೂ ಪ್ರವಾಸ ಕೈಗೊಳ್ಳುವ ದಿನಗಳನ್ನು ವಿಂಗಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

2019ರ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಮೇಲೆ ಗಮನಹರಿಸಿ 2024ರಲ್ಲಿ ಅವುಗಳನ್ನು ಹೇಗೆ ಗೆಲ್ಲುವುದು ಎಂದು ಬಿಜೆಪಿ ಯೋಚಿಸುತ್ತಿರುವುದರ ಭಾಗವಾಗಿಯೇ ಜೆ.ಪಿ.ನಡ್ಡಾ ಈ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಹಾರ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರರಾದ ಜೆ.ಪಿ.ನಡ್ಡಾ, “ಪಕ್ಷದ ಸಾರ್ವಜನಿಕ ಪ್ರತಿನಿಧಿಗಳನ್ನು ಭೇಟಿ ಮಾಡುವುದು, ಹೊಸ ಸಂಭಾವ್ಯ ಒಕ್ಕೂಟಗಳ ಬಗ್ಗೆ ಚರ್ಚಿಸುವುದು, ರಾಜ್ಯ ಸರ್ಕಾರಗಳ ಚಿತ್ರಣವನ್ನು ಸುಧಾರಿಸುವುದು, ವಿವಿಧ ಪ್ರಭಾವಿ ಗುಂಪುಗಳೊಂದಿಗೆ ಸಂವಹನ ನಡೆಸುವುದು, ಕೇಡರ್‌ನಲ್ಲಿ ಪಕ್ಷದ ಸಿದ್ಧಾಂತದ ಬಗ್ಗೆ ಸ್ಪಷ್ಟತೆ ನೀಡುವುದು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರು ಮತ್ತು ರಾಜ್ಯಗಳಲ್ಲಿನ ಸಮ್ಮಿಶ್ರ ಪಾಲುದಾರರೊಂದಿಗೆ ಸಂವಾದವನ್ನು ಪ್ರಾರಂಭಿಸುವುದು” ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

“ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಮತ್ತು ಅದರ ಗುರಿಗಳಲ್ಲಿ ತಂಡಗಳನ್ನು ಒಳಗೊಳ್ಳುವುದು, ಪಕ್ಷಕ್ಕೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ವಿವರವಾದ ವರದಿಯನ್ನು ನೀಡುವುದು ಮತ್ತು ವಿವಿಧ ಚಟುವಟಿಕೆಗಳಲ್ಲಿ ಏಕರೂಪತೆಯನ್ನು ತರುವುದು ಹಾಗೂ ದೇಶವನ್ನು ಸರ್ವೋಚ್ಚ ಮಾಡುವ ಉದ್ದೇಶದಿಂದ ಪಕ್ಷದ ಹೆಜ್ಜೆಗುರುತುಗಳನ್ನು ವಿಸ್ತರಿಸುವುದು ಈ ಪ್ರವಾಸದ ಉದ್ದೇಶ” ಎಂದು ಉನ್ನತ ಮೂಲದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಪ್ರವಾಸ ಕೈಗೊಳ್ಳಲಿರುವ ರಾಜ್ಯಗಳನ್ನು ಎ, ಬಿ, ಸಿ ಮತ್ತು ಡಿ ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ವರ್ಗ ‘ಎ’ ಎಂದರೆ ಬಿಜೆಪಿ ಸರ್ಕಾರ ಆಡಳಿತದಲ್ಲಿರುವ ಅಥವಾ ಸಮ್ಮಿಶ್ರ ಸರ್ಕಾರ ಇರುವ ರಾಜ್ಯಗಳನ್ನು ಒಳಗೊಂಡಿರುತ್ತದೆ. ಉದಾ: ನಾಗಾಲ್ಯಾಂಡ್, ಬಿಹಾರ, ಕರ್ನಾಟಕ, ತ್ರಿಪುರ ಮುಂತಾದ ಪ್ರಮುಖ ರಾಜ್ಯಗಳು.

ಇದನ್ನೂ ಓದಿ: ಹಸಿರು ಪಟಾಕಿ ಬಗ್ಗೆ ಗೊತ್ತಿಲ್ಲ ಎಂದ ಆರೋಗ್ಯ ಸಚಿವ ಸುಧಾಕರ್‌ !

‘ಸಿ’ ವರ್ಗವು ಲಕ್ಷದ್ವೀಪ, ಮೇಘಾಲಯ ಮತ್ತು ಮಿಜೋರಾಂನಂತಹ ಸಣ್ಣ ರಾಜ್ಯಗಳಿಗೆ ಸಂಬಂಧಿಸಿದ್ದು, ‘ಡಿ’ ವರ್ಗದಲ್ಲಿ ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡಿನಂತಹ ಚುನಾವಣಾ ರಾಜ್ಯಗಳಿರುತ್ತವೆ.

ಉತ್ತರ ಪ್ರದೇಶವನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ 2-3 ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.


ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...