Homeಮುಖಪುಟ2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

2019ರ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಮೇಲೆ ಗಮನಹರಿಸಿ 2024ರಲ್ಲಿ ಅವುಗಳನ್ನು ಹೇಗೆ ಗೆಲ್ಲುವುದು ಎಂದು ಬಿಜೆಪಿ ಯೋಚಿಸುತ್ತಿರುವುದರ ಭಾಗವಾಗಿಯೇ ಜೆ.ಪಿ.ನಡ್ಡಾ ಈ ಪ್ರವಾಸವನ್ನು ಕೈಗೊಂಡಿದ್ದಾರೆ

- Advertisement -
- Advertisement -

ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ 2024ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಿದ್ದು, ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ದೇಶದಾದ್ಯಂತ 100 ದಿನಗಳ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಬಿಹಾರ ವಿಜಯದ ನಂತರ ವಿಶ್ರಾಂತಿ ಪಡೆಯದ ಜೆ.ಪಿ.ನಡ್ಡಾ ಶೀಘ್ರದಲ್ಲೇ 100 ದಿನಗಳ “ರಾಷ್ಟ್ರೀಯ ವಿಸ್ತ್ರಿತ್ ಪ್ರವಾಸ”ವನ್ನು ಕೈಗೊಳ್ಳಲಿದ್ದಾರೆ. 2024ರ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಪ್ರತಿ ರಾಜ್ಯಗಳಲ್ಲೂ ಪ್ರವಾಸ ಕೈಗೊಳ್ಳುವ ದಿನಗಳನ್ನು ವಿಂಗಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

2019ರ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಮೇಲೆ ಗಮನಹರಿಸಿ 2024ರಲ್ಲಿ ಅವುಗಳನ್ನು ಹೇಗೆ ಗೆಲ್ಲುವುದು ಎಂದು ಬಿಜೆಪಿ ಯೋಚಿಸುತ್ತಿರುವುದರ ಭಾಗವಾಗಿಯೇ ಜೆ.ಪಿ.ನಡ್ಡಾ ಈ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಹಾರ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರರಾದ ಜೆ.ಪಿ.ನಡ್ಡಾ, “ಪಕ್ಷದ ಸಾರ್ವಜನಿಕ ಪ್ರತಿನಿಧಿಗಳನ್ನು ಭೇಟಿ ಮಾಡುವುದು, ಹೊಸ ಸಂಭಾವ್ಯ ಒಕ್ಕೂಟಗಳ ಬಗ್ಗೆ ಚರ್ಚಿಸುವುದು, ರಾಜ್ಯ ಸರ್ಕಾರಗಳ ಚಿತ್ರಣವನ್ನು ಸುಧಾರಿಸುವುದು, ವಿವಿಧ ಪ್ರಭಾವಿ ಗುಂಪುಗಳೊಂದಿಗೆ ಸಂವಹನ ನಡೆಸುವುದು, ಕೇಡರ್‌ನಲ್ಲಿ ಪಕ್ಷದ ಸಿದ್ಧಾಂತದ ಬಗ್ಗೆ ಸ್ಪಷ್ಟತೆ ನೀಡುವುದು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರು ಮತ್ತು ರಾಜ್ಯಗಳಲ್ಲಿನ ಸಮ್ಮಿಶ್ರ ಪಾಲುದಾರರೊಂದಿಗೆ ಸಂವಾದವನ್ನು ಪ್ರಾರಂಭಿಸುವುದು” ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

“ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಮತ್ತು ಅದರ ಗುರಿಗಳಲ್ಲಿ ತಂಡಗಳನ್ನು ಒಳಗೊಳ್ಳುವುದು, ಪಕ್ಷಕ್ಕೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ವಿವರವಾದ ವರದಿಯನ್ನು ನೀಡುವುದು ಮತ್ತು ವಿವಿಧ ಚಟುವಟಿಕೆಗಳಲ್ಲಿ ಏಕರೂಪತೆಯನ್ನು ತರುವುದು ಹಾಗೂ ದೇಶವನ್ನು ಸರ್ವೋಚ್ಚ ಮಾಡುವ ಉದ್ದೇಶದಿಂದ ಪಕ್ಷದ ಹೆಜ್ಜೆಗುರುತುಗಳನ್ನು ವಿಸ್ತರಿಸುವುದು ಈ ಪ್ರವಾಸದ ಉದ್ದೇಶ” ಎಂದು ಉನ್ನತ ಮೂಲದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಪ್ರವಾಸ ಕೈಗೊಳ್ಳಲಿರುವ ರಾಜ್ಯಗಳನ್ನು ಎ, ಬಿ, ಸಿ ಮತ್ತು ಡಿ ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ವರ್ಗ ‘ಎ’ ಎಂದರೆ ಬಿಜೆಪಿ ಸರ್ಕಾರ ಆಡಳಿತದಲ್ಲಿರುವ ಅಥವಾ ಸಮ್ಮಿಶ್ರ ಸರ್ಕಾರ ಇರುವ ರಾಜ್ಯಗಳನ್ನು ಒಳಗೊಂಡಿರುತ್ತದೆ. ಉದಾ: ನಾಗಾಲ್ಯಾಂಡ್, ಬಿಹಾರ, ಕರ್ನಾಟಕ, ತ್ರಿಪುರ ಮುಂತಾದ ಪ್ರಮುಖ ರಾಜ್ಯಗಳು.

ಇದನ್ನೂ ಓದಿ: ಹಸಿರು ಪಟಾಕಿ ಬಗ್ಗೆ ಗೊತ್ತಿಲ್ಲ ಎಂದ ಆರೋಗ್ಯ ಸಚಿವ ಸುಧಾಕರ್‌ !

‘ಸಿ’ ವರ್ಗವು ಲಕ್ಷದ್ವೀಪ, ಮೇಘಾಲಯ ಮತ್ತು ಮಿಜೋರಾಂನಂತಹ ಸಣ್ಣ ರಾಜ್ಯಗಳಿಗೆ ಸಂಬಂಧಿಸಿದ್ದು, ‘ಡಿ’ ವರ್ಗದಲ್ಲಿ ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡಿನಂತಹ ಚುನಾವಣಾ ರಾಜ್ಯಗಳಿರುತ್ತವೆ.

ಉತ್ತರ ಪ್ರದೇಶವನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ 2-3 ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.


ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...