Homeಮುಖಪುಟ2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

2019ರ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಮೇಲೆ ಗಮನಹರಿಸಿ 2024ರಲ್ಲಿ ಅವುಗಳನ್ನು ಹೇಗೆ ಗೆಲ್ಲುವುದು ಎಂದು ಬಿಜೆಪಿ ಯೋಚಿಸುತ್ತಿರುವುದರ ಭಾಗವಾಗಿಯೇ ಜೆ.ಪಿ.ನಡ್ಡಾ ಈ ಪ್ರವಾಸವನ್ನು ಕೈಗೊಂಡಿದ್ದಾರೆ

- Advertisement -
- Advertisement -

ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ 2024ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಿದ್ದು, ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ದೇಶದಾದ್ಯಂತ 100 ದಿನಗಳ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಬಿಹಾರ ವಿಜಯದ ನಂತರ ವಿಶ್ರಾಂತಿ ಪಡೆಯದ ಜೆ.ಪಿ.ನಡ್ಡಾ ಶೀಘ್ರದಲ್ಲೇ 100 ದಿನಗಳ “ರಾಷ್ಟ್ರೀಯ ವಿಸ್ತ್ರಿತ್ ಪ್ರವಾಸ”ವನ್ನು ಕೈಗೊಳ್ಳಲಿದ್ದಾರೆ. 2024ರ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಪ್ರತಿ ರಾಜ್ಯಗಳಲ್ಲೂ ಪ್ರವಾಸ ಕೈಗೊಳ್ಳುವ ದಿನಗಳನ್ನು ವಿಂಗಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

2019ರ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಮೇಲೆ ಗಮನಹರಿಸಿ 2024ರಲ್ಲಿ ಅವುಗಳನ್ನು ಹೇಗೆ ಗೆಲ್ಲುವುದು ಎಂದು ಬಿಜೆಪಿ ಯೋಚಿಸುತ್ತಿರುವುದರ ಭಾಗವಾಗಿಯೇ ಜೆ.ಪಿ.ನಡ್ಡಾ ಈ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಹಾರ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರರಾದ ಜೆ.ಪಿ.ನಡ್ಡಾ, “ಪಕ್ಷದ ಸಾರ್ವಜನಿಕ ಪ್ರತಿನಿಧಿಗಳನ್ನು ಭೇಟಿ ಮಾಡುವುದು, ಹೊಸ ಸಂಭಾವ್ಯ ಒಕ್ಕೂಟಗಳ ಬಗ್ಗೆ ಚರ್ಚಿಸುವುದು, ರಾಜ್ಯ ಸರ್ಕಾರಗಳ ಚಿತ್ರಣವನ್ನು ಸುಧಾರಿಸುವುದು, ವಿವಿಧ ಪ್ರಭಾವಿ ಗುಂಪುಗಳೊಂದಿಗೆ ಸಂವಹನ ನಡೆಸುವುದು, ಕೇಡರ್‌ನಲ್ಲಿ ಪಕ್ಷದ ಸಿದ್ಧಾಂತದ ಬಗ್ಗೆ ಸ್ಪಷ್ಟತೆ ನೀಡುವುದು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರು ಮತ್ತು ರಾಜ್ಯಗಳಲ್ಲಿನ ಸಮ್ಮಿಶ್ರ ಪಾಲುದಾರರೊಂದಿಗೆ ಸಂವಾದವನ್ನು ಪ್ರಾರಂಭಿಸುವುದು” ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

“ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಮತ್ತು ಅದರ ಗುರಿಗಳಲ್ಲಿ ತಂಡಗಳನ್ನು ಒಳಗೊಳ್ಳುವುದು, ಪಕ್ಷಕ್ಕೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ವಿವರವಾದ ವರದಿಯನ್ನು ನೀಡುವುದು ಮತ್ತು ವಿವಿಧ ಚಟುವಟಿಕೆಗಳಲ್ಲಿ ಏಕರೂಪತೆಯನ್ನು ತರುವುದು ಹಾಗೂ ದೇಶವನ್ನು ಸರ್ವೋಚ್ಚ ಮಾಡುವ ಉದ್ದೇಶದಿಂದ ಪಕ್ಷದ ಹೆಜ್ಜೆಗುರುತುಗಳನ್ನು ವಿಸ್ತರಿಸುವುದು ಈ ಪ್ರವಾಸದ ಉದ್ದೇಶ” ಎಂದು ಉನ್ನತ ಮೂಲದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಪ್ರವಾಸ ಕೈಗೊಳ್ಳಲಿರುವ ರಾಜ್ಯಗಳನ್ನು ಎ, ಬಿ, ಸಿ ಮತ್ತು ಡಿ ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ವರ್ಗ ‘ಎ’ ಎಂದರೆ ಬಿಜೆಪಿ ಸರ್ಕಾರ ಆಡಳಿತದಲ್ಲಿರುವ ಅಥವಾ ಸಮ್ಮಿಶ್ರ ಸರ್ಕಾರ ಇರುವ ರಾಜ್ಯಗಳನ್ನು ಒಳಗೊಂಡಿರುತ್ತದೆ. ಉದಾ: ನಾಗಾಲ್ಯಾಂಡ್, ಬಿಹಾರ, ಕರ್ನಾಟಕ, ತ್ರಿಪುರ ಮುಂತಾದ ಪ್ರಮುಖ ರಾಜ್ಯಗಳು.

ಇದನ್ನೂ ಓದಿ: ಹಸಿರು ಪಟಾಕಿ ಬಗ್ಗೆ ಗೊತ್ತಿಲ್ಲ ಎಂದ ಆರೋಗ್ಯ ಸಚಿವ ಸುಧಾಕರ್‌ !

‘ಸಿ’ ವರ್ಗವು ಲಕ್ಷದ್ವೀಪ, ಮೇಘಾಲಯ ಮತ್ತು ಮಿಜೋರಾಂನಂತಹ ಸಣ್ಣ ರಾಜ್ಯಗಳಿಗೆ ಸಂಬಂಧಿಸಿದ್ದು, ‘ಡಿ’ ವರ್ಗದಲ್ಲಿ ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡಿನಂತಹ ಚುನಾವಣಾ ರಾಜ್ಯಗಳಿರುತ್ತವೆ.

ಉತ್ತರ ಪ್ರದೇಶವನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ 2-3 ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.


ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...