Homeಮುಖಪುಟ2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

2019ರ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಮೇಲೆ ಗಮನಹರಿಸಿ 2024ರಲ್ಲಿ ಅವುಗಳನ್ನು ಹೇಗೆ ಗೆಲ್ಲುವುದು ಎಂದು ಬಿಜೆಪಿ ಯೋಚಿಸುತ್ತಿರುವುದರ ಭಾಗವಾಗಿಯೇ ಜೆ.ಪಿ.ನಡ್ಡಾ ಈ ಪ್ರವಾಸವನ್ನು ಕೈಗೊಂಡಿದ್ದಾರೆ

- Advertisement -
- Advertisement -

ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ 2024ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಿದ್ದು, ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ದೇಶದಾದ್ಯಂತ 100 ದಿನಗಳ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಬಿಹಾರ ವಿಜಯದ ನಂತರ ವಿಶ್ರಾಂತಿ ಪಡೆಯದ ಜೆ.ಪಿ.ನಡ್ಡಾ ಶೀಘ್ರದಲ್ಲೇ 100 ದಿನಗಳ “ರಾಷ್ಟ್ರೀಯ ವಿಸ್ತ್ರಿತ್ ಪ್ರವಾಸ”ವನ್ನು ಕೈಗೊಳ್ಳಲಿದ್ದಾರೆ. 2024ರ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಪ್ರತಿ ರಾಜ್ಯಗಳಲ್ಲೂ ಪ್ರವಾಸ ಕೈಗೊಳ್ಳುವ ದಿನಗಳನ್ನು ವಿಂಗಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

2019ರ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಮೇಲೆ ಗಮನಹರಿಸಿ 2024ರಲ್ಲಿ ಅವುಗಳನ್ನು ಹೇಗೆ ಗೆಲ್ಲುವುದು ಎಂದು ಬಿಜೆಪಿ ಯೋಚಿಸುತ್ತಿರುವುದರ ಭಾಗವಾಗಿಯೇ ಜೆ.ಪಿ.ನಡ್ಡಾ ಈ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಹಾರ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರರಾದ ಜೆ.ಪಿ.ನಡ್ಡಾ, “ಪಕ್ಷದ ಸಾರ್ವಜನಿಕ ಪ್ರತಿನಿಧಿಗಳನ್ನು ಭೇಟಿ ಮಾಡುವುದು, ಹೊಸ ಸಂಭಾವ್ಯ ಒಕ್ಕೂಟಗಳ ಬಗ್ಗೆ ಚರ್ಚಿಸುವುದು, ರಾಜ್ಯ ಸರ್ಕಾರಗಳ ಚಿತ್ರಣವನ್ನು ಸುಧಾರಿಸುವುದು, ವಿವಿಧ ಪ್ರಭಾವಿ ಗುಂಪುಗಳೊಂದಿಗೆ ಸಂವಹನ ನಡೆಸುವುದು, ಕೇಡರ್‌ನಲ್ಲಿ ಪಕ್ಷದ ಸಿದ್ಧಾಂತದ ಬಗ್ಗೆ ಸ್ಪಷ್ಟತೆ ನೀಡುವುದು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರು ಮತ್ತು ರಾಜ್ಯಗಳಲ್ಲಿನ ಸಮ್ಮಿಶ್ರ ಪಾಲುದಾರರೊಂದಿಗೆ ಸಂವಾದವನ್ನು ಪ್ರಾರಂಭಿಸುವುದು” ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

“ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಮತ್ತು ಅದರ ಗುರಿಗಳಲ್ಲಿ ತಂಡಗಳನ್ನು ಒಳಗೊಳ್ಳುವುದು, ಪಕ್ಷಕ್ಕೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ವಿವರವಾದ ವರದಿಯನ್ನು ನೀಡುವುದು ಮತ್ತು ವಿವಿಧ ಚಟುವಟಿಕೆಗಳಲ್ಲಿ ಏಕರೂಪತೆಯನ್ನು ತರುವುದು ಹಾಗೂ ದೇಶವನ್ನು ಸರ್ವೋಚ್ಚ ಮಾಡುವ ಉದ್ದೇಶದಿಂದ ಪಕ್ಷದ ಹೆಜ್ಜೆಗುರುತುಗಳನ್ನು ವಿಸ್ತರಿಸುವುದು ಈ ಪ್ರವಾಸದ ಉದ್ದೇಶ” ಎಂದು ಉನ್ನತ ಮೂಲದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಪ್ರವಾಸ ಕೈಗೊಳ್ಳಲಿರುವ ರಾಜ್ಯಗಳನ್ನು ಎ, ಬಿ, ಸಿ ಮತ್ತು ಡಿ ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ವರ್ಗ ‘ಎ’ ಎಂದರೆ ಬಿಜೆಪಿ ಸರ್ಕಾರ ಆಡಳಿತದಲ್ಲಿರುವ ಅಥವಾ ಸಮ್ಮಿಶ್ರ ಸರ್ಕಾರ ಇರುವ ರಾಜ್ಯಗಳನ್ನು ಒಳಗೊಂಡಿರುತ್ತದೆ. ಉದಾ: ನಾಗಾಲ್ಯಾಂಡ್, ಬಿಹಾರ, ಕರ್ನಾಟಕ, ತ್ರಿಪುರ ಮುಂತಾದ ಪ್ರಮುಖ ರಾಜ್ಯಗಳು.

ಇದನ್ನೂ ಓದಿ: ಹಸಿರು ಪಟಾಕಿ ಬಗ್ಗೆ ಗೊತ್ತಿಲ್ಲ ಎಂದ ಆರೋಗ್ಯ ಸಚಿವ ಸುಧಾಕರ್‌ !

‘ಸಿ’ ವರ್ಗವು ಲಕ್ಷದ್ವೀಪ, ಮೇಘಾಲಯ ಮತ್ತು ಮಿಜೋರಾಂನಂತಹ ಸಣ್ಣ ರಾಜ್ಯಗಳಿಗೆ ಸಂಬಂಧಿಸಿದ್ದು, ‘ಡಿ’ ವರ್ಗದಲ್ಲಿ ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡಿನಂತಹ ಚುನಾವಣಾ ರಾಜ್ಯಗಳಿರುತ್ತವೆ.

ಉತ್ತರ ಪ್ರದೇಶವನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ 2-3 ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.


ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...