Homeಮುಖಪುಟಹರ್ಯಾಣದಲ್ಲಿ ಮತ್ತೊಂದು ಅವಧಿಗೆ ಅಧಿಕಾರಕ್ಕೇರಲು ಸಿದ್ಧವಾದ ಬಿಜೆಪಿ: ಜೆಜೆಪಿ ಜತೆ ಸಮ್ಮಿಶ್ರ ಸರ್ಕಾರ

ಹರ್ಯಾಣದಲ್ಲಿ ಮತ್ತೊಂದು ಅವಧಿಗೆ ಅಧಿಕಾರಕ್ಕೇರಲು ಸಿದ್ಧವಾದ ಬಿಜೆಪಿ: ಜೆಜೆಪಿ ಜತೆ ಸಮ್ಮಿಶ್ರ ಸರ್ಕಾರ

- Advertisement -
- Advertisement -

ಹರ್ಯಾಣದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜಕೀಯ ಚಟುವಟಿಕೆ ಗರಿಗೆದರಿವೆ. ಯಾವ ಪಕ್ಷಕ್ಕೂ ಮತದಾರರು ಬಹುಮತ ನೀಡಿಲ್ಲ. ಹೀಗಾಗಿ ಹರ್ಯಾಣದಲ್ಲಿ ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬ ಕುತೂಹಲ ಮನೆ ಮಾಡಿತ್ತು. ಅದೆಲ್ಲಕ್ಕೂ ಈಗ ಉತ್ತರ ಸಿಕ್ಕಿದೆ. ಮತ್ತೊಂದು ಅವಧಿಗೆ ಸರ್ಕಾರ ನಡೆಸಲು ಬಿಜೆಪಿಯ ಮನೋಹರ್ ಲಾಲ್ ಖಟ್ಟರ್ ರೆಡಿಯಾಗಿದ್ದಾರೆ. ಸಿಎಂ ಆಯ್ಕೆ ಮತ್ತು ಜೆಜೆಪಿ ಜತೆಗಿನ ಸಮ್ಮಿಶ್ರ ಸರ್ಕಾರ ರಚನೆ ವಿಚಾರವಾಗಿ ಬಿಜೆಪಿ ಮಹತ್ವದ ಸಭೆ ನಡೆಯುತ್ತಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಈಗಾಗಲೇ ಹರ್ಯಾಣದ ಜನನಾಯಕ್ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಹರ್ಯಾಣದ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರನ್ನು ಚಂಡೀಗಢದಲ್ಲಿ ಭೇಟಿಯಾಗಿರುವ ಮನೋಹರ್ ಲಾಲ್ ಖಟ್ಟರ್ ಸರ್ಕಾರ ರಚಿಸುವುದಾಗಿ ಮನವಿ ಮಾಡಿದ್ದಾರೆ. ಚುನಾವಣಾ ಫಲಿತಾಂಶ ಬಂದ ತಕ್ಷಣ ಮನೋಹರ್ ಲಾಲ್ ಖಟ್ಟರ್, ಹೈಕಮಾಂಡ್ ಬುಲಾವಿಗೆ ಓಗೊಟ್ಟು, ದೆಹಲಿಗೆ ಹೋಗಿದ್ದರು. ಸಾಕಷ್ಟು ಮಾತುಕತೆ, ರಾಜಕೀಯ ತಂತ್ರಗಳನ್ನು ಹೆಣೆದು, ಪ್ರಾದೇಶಿಕ ಪಕ್ಷ ಜೆಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ.

ಹರ್ಯಾಣದ 90 ಸ್ಥಾನಗಳಲ್ಲಿ, ಬಿಜೆಪಿ 40 ಸ್ಥಾನಗಳನ್ನು ಬಾಚಿಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸರ್ಕಾರ ರಚಿಸಲು ಜೆಜೆಪಿ ಜತೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿತ್ತು. ಇದನ್ನರಿತ ಬಿಜೆಪಿ, ಜೆಜೆಪಿ ಮುಖ್ಯಸ್ಥ ದುಷ್ಯಂತ್ ಚೌತಾಲಾ ಅವರ ಜತೆ ಚರ್ಚಿಸಿ, ಮನವೊಲಿಸುವಲ್ಲಿ ಯಶಸ್ವಿಯಾಗಿದೆ. ಈಗ ಎರಡನೇ ಅವಧಿಗೆ ಹರ್ಯಾಣದಲ್ಲಿ ಬಿಜೆಪಿ ಆಡಳಿತ ನಡೆಸಲಿದೆ.

ಹರ್ಯಾಣದಲ್ಲಿ ಸರ್ಕಾರ ರಚನೆಗೆ ಬೇಕಿರುವ ಮ್ಯಾಜಿಕ್ ನಂಬರ್ 46. ಬಿಜೆಪಿ 40 ಸ್ಥಾನ ಪಡೆದಿದ್ದು, ಜೆಜೆಪಿ 10 ಸ್ಥಾನ ಪಡೆದ ಹಿನ್ನೆಲೆ ಸಮ್ಮಿಶ್ರ ಸರ್ಕಾರ ರಚಿಸಲು ಒಪ್ಪಿಕೊಂಡಿವೆ. ಚುನಾವಣೆ ಫಲಿತಾಂಶದ ನಂತರ ದೆಹಲಿಯ ಜನಪಥ್ ನಿವಾಸದಲ್ಲಿ ಜೆಜೆಪಿಯ ದುಷ್ಯಂತ್ ಚೌತಾಲಾ ಪತ್ರಿಕಾಗೋಷ್ಠಿ ನಡೆಸಿ, ಪಕ್ಷದ ಕೆಲ ಷರತ್ತುಗಳನ್ನು ಮುಂದಿಟ್ಟಿದ್ದರು. ಪಕ್ಷದ ಅಜೆಂಡಾವನ್ನು ಒಪ್ಪಿಕೊಳ್ಳುವ ಮತ್ತು ಪ್ಲಕೇಟ್ ಜಾಟ್ ಸಮುದಾಯಕ್ಕೆ ಶೇ. 75ರಷ್ಟು ಮೀಸಲಾತಿ ನೀಡುವುದು, ಹಿರಿಯ ನಾಗರಿಕರಿಗೆ ಪಿಂಚಣಿ, ಉದ್ಯೋಗ ನೀಡಲು ಒಪ್ಪಿಕೊಳ್ಳುವ ಯಾವುದೇ ಪಕ್ಷದ ಜತೆಗೆ ಸೇರಿ ಸರ್ಕಾರ ರಚಿಸುವುದಾಗಿ ಹೇಳಿದ್ದರು.

ಈಗ ಹರ್ಯಾಣದಲ್ಲಿ ಸಿಎಂ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೊಂದು ಅವಧಿಗೆ ಮನೋಹರ್ ಲಾಲ್ ಖಟ್ಟರ್ ಸಿಎಂ ಆಗುವ ಸಾಧ್ಯತೆಗಳು ಹೆಚ್ಚಿವೆ. ಇಲ್ಲವೇ ಜೆಜೆಪಿ ಪಕ್ಷದ ದುಷ್ಯಂತ್ ಚೌತಾಲಾ ಸಿಎಂ ಹುದ್ದೆಗೆ ಬೇಡಿಕೆಯಿಟ್ಟು, ಅವರೇ ಸಿಎಂ ಆಗುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...