Homeಮುಖಪುಟಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ. ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ- ಹೆಚ್ ಡಿ ಕುಮಾರಸ್ವಾಮಿ

- Advertisement -
- Advertisement -

ಇತಿಹಾಸದಲ್ಲಿ ಇಲ್ಲದ ಪಾತ್ರಗಳನ್ನು ಸೃಷ್ಟಿಸಿ ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಚಿವ ಮತ್ತು ಚಿತ್ರ ನಿರ್ಮಾಪಕರಾದ ಮುನಿರತ್ನರವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ಉರೀಗೌಡ ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿಯವರು ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, “ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ. ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ” ಎಂದಿದ್ದಾರೆ.

ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.
ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ ಎಂದಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ತಿಳಿಸಿದ್ದಾರೆ.

ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು. ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ಕಿಡಿಕಾರಿದ್ದಾರೆ.

ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ ಬಿಜೆಪಿ . ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬಿಜೆಪಿ ಬೀರುತ್ತಿರುವ ವಕ್ರದೃಷ್ಟಿ… ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲಿ ಭಾರತದ ಮಾನ ತೆಗೆದ ನಿಜವಾದ ಅಪರಾಧಿ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...