Homeಮುಖಪುಟಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ. ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ- ಹೆಚ್ ಡಿ ಕುಮಾರಸ್ವಾಮಿ

- Advertisement -
- Advertisement -

ಇತಿಹಾಸದಲ್ಲಿ ಇಲ್ಲದ ಪಾತ್ರಗಳನ್ನು ಸೃಷ್ಟಿಸಿ ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಚಿವ ಮತ್ತು ಚಿತ್ರ ನಿರ್ಮಾಪಕರಾದ ಮುನಿರತ್ನರವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ಉರೀಗೌಡ ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿಯವರು ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, “ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ. ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ” ಎಂದಿದ್ದಾರೆ.

ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.
ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ ಎಂದಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ತಿಳಿಸಿದ್ದಾರೆ.

ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು. ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ಕಿಡಿಕಾರಿದ್ದಾರೆ.

ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ ಬಿಜೆಪಿ . ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬಿಜೆಪಿ ಬೀರುತ್ತಿರುವ ವಕ್ರದೃಷ್ಟಿ… ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲಿ ಭಾರತದ ಮಾನ ತೆಗೆದ ನಿಜವಾದ ಅಪರಾಧಿ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...