Homeಮುಖಪುಟಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ. ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ- ಹೆಚ್ ಡಿ ಕುಮಾರಸ್ವಾಮಿ

- Advertisement -
- Advertisement -

ಇತಿಹಾಸದಲ್ಲಿ ಇಲ್ಲದ ಪಾತ್ರಗಳನ್ನು ಸೃಷ್ಟಿಸಿ ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಚಿವ ಮತ್ತು ಚಿತ್ರ ನಿರ್ಮಾಪಕರಾದ ಮುನಿರತ್ನರವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ಉರೀಗೌಡ ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿಯವರು ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, “ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ. ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ” ಎಂದಿದ್ದಾರೆ.

ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.
ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ ಎಂದಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ತಿಳಿಸಿದ್ದಾರೆ.

ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು. ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ಕಿಡಿಕಾರಿದ್ದಾರೆ.

ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ ಬಿಜೆಪಿ . ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬಿಜೆಪಿ ಬೀರುತ್ತಿರುವ ವಕ್ರದೃಷ್ಟಿ… ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲಿ ಭಾರತದ ಮಾನ ತೆಗೆದ ನಿಜವಾದ ಅಪರಾಧಿ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...