Homeಮುಖಪುಟಅಧಿಕಾರದಲ್ಲಿ ಉಳಿಯುವುದಕ್ಕೆ ಬಿಜೆಪಿ ಯಾವುದೇ ಅನೈತಿಕತೆಯ ಮಟ್ಟಕ್ಕೆ ಇಳಿಯಲು ಸಿದ್ಧ: ಮಲ್ಲಿಕಾರ್ಜುನ್ ಖರ್ಗೆ

ಅಧಿಕಾರದಲ್ಲಿ ಉಳಿಯುವುದಕ್ಕೆ ಬಿಜೆಪಿ ಯಾವುದೇ ಅನೈತಿಕತೆಯ ಮಟ್ಟಕ್ಕೆ ಇಳಿಯಲು ಸಿದ್ಧ: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ಆಡಳಿತಾರೂಢ ಬಿಜೆಪಿ ಅಧಿಕಾರದಲ್ಲಿ ಉಳಿಯಲು ಯಾವುದೇ ಅನೈತಿಕತೆಯ ಮಟ್ಟಕ್ಕೆ ಇಳಿಯಲು ಸಿದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದರು.

ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಿದ ಅವರು, “ದೇಶಾದ್ಯಂತ ಚುನಾವಣೆಗಳಲ್ಲಿ ಹಲವಾರು ‘ಅಕ್ರಮಗಳು’ ಹೊರಹೊಮ್ಮುತ್ತಿವೆ. ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಹೆಸರಿನಲ್ಲಿ ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ಜೀವಂತ ಮತದಾರರನ್ನು ಸತ್ತವರು ಎಂದು ಘೋಷಿಸಲಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಅತ್ಯಂತ ಆಶ್ಚರ್ಯಕರ, ವಿಷಯವೆಂದರೆ 65 ಲಕ್ಷ ಜನರ ಮತಗಳನ್ನು ಕಡಿತಗೊಳಿಸಲು ಬಿಜೆಪಿಗೆ ಯಾವುದೇ ಆಕ್ಷೇಪವಿಲ್ಲ. ಎಸ್‌ಐಆರ್‌ ಪ್ರಕ್ರಿಯೆಯಿಂದ ಯಾರು ಪ್ರಯೋಜನ ಪಡೆದರು ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಹೇಳಿದರು.

“ಇದು ಚುನಾವಣೆಗಳನ್ನು ಗೆಲ್ಲುವ ಹೋರಾಟವಲ್ಲ. ಆದರೆ, ಭಾರತದ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು” ಎಂದು ಖರ್ಗೆ ಅವರು ಎಸ್‌ಐಆರ್‌ ಪ್ರಕ್ರಿಯೆಯ ಕಾಂಗ್ರೆಸ್‌ನ ವಿರೋಧವನ್ನು ಉಲ್ಲೇಖಿಸಿ ಹೇಳಿದರು.

“ಈಗ ಆಡಳಿತ ಪಕ್ಷವು ಅಧಿಕಾರದಲ್ಲಿ ಉಳಿಯಲು ಯಾವುದೇ ಅನೈತಿಕತೆಗೆ ಹೋಗಲು ಸಿದ್ಧವಾಗಿದೆ. ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ಬೆಳಕಿಗೆ ಬರುತ್ತಿವೆ” ಎಂದು ಅವರು ಆರೋಪಿಸಿದರು.

“ವಿಶೇಷ ತೀವ್ರ ಪರಿಷ್ಕರಣೆಯ ಹೆಸರಿನಲ್ಲಿ, ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ. ಜೀವಂತವಾಗಿರುವವರನ್ನು ಸತ್ತವರು ಎಂದು ಘೋಷಿಸಲಾಗಿದೆ. ಯಾರ ಮತಗಳನ್ನು ಕಡಿತಗೊಳಿಸಲಾಗುತ್ತಿದೆ ಮತ್ತು ಯಾವ ಆಧಾರದ ಮೇಲೆ ಕಡಿತಗೊಳಿಸಲಾಗುತ್ತಿದೆ ಎಂದು ಹೇಳಲು ಚುನಾವಣಾ ಆಯೋಗ ಸಿದ್ಧವಾಗಿಲ್ಲದಿರುವುದರಿಂದ ಅದರ ನಿಷ್ಪಕ್ಷಪಾತತೆಯನ್ನು ಅರ್ಥಮಾಡಿಕೊಳ್ಳಬಹುದು” ಎಂದು ಅವರು ಹೇಳಿದರು.

ಇಡಿ ಮತ್ತು ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ಮುಂತಾದ ಕೇಂದ್ರ ತನಿಖಾ ಸಂಸ್ಥೆಗಳನ್ನು “ವಿರೋಧಿಗಳ ವಿರುದ್ಧ ರಾಜಕೀಯ ಉದ್ದೇಶಗಳಿಗಾಗಿ ಬಹಿರಂಗವಾಗಿ ಬಳಸಲಾಗಿದೆ, ದೇಶದ ಸುಪ್ರೀಂ ಕೋರ್ಟ್ ಅವರಿಗೆ ಕನ್ನಡಿ ತೋರಿಸಬೇಕಾಗಿದೆ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

‘ಅಲಿಪ್ತ ನೀತಿ’ಯಿಂದಾಗಿ ಭಾರತ ಗಳಿಸಿದ ವಿಶೇಷ ಸ್ಥಾನವನ್ನು ಕಳೆದುಕೊಂಡಿದೆ. ಸ್ವಾತಂತ್ರ್ಯದ ವೀರರು ಈ ದೇಶಕ್ಕಾಗಿ ಕಂಡ ಕನಸು ಇಂದು ನಮ್ಮಿಂದ ದೂರವಾಗುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.

ಗಾಂಧಿ ಜೊತೆ ಸಾವರ್ಕರ್ ಚಿತ್ರ ಪ್ರಕಟಿಸಿದ ಕೇಂದ್ರ ಸರ್ಕಾರ; ಕೇಂದ್ರ ಸರ್ಕಾರವನ್ನು ಟೀಕಿಸಿದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...