Homeಮುಖಪುಟಅಧಿಕಾರದಲ್ಲಿ ಉಳಿಯುವುದಕ್ಕೆ ಬಿಜೆಪಿ ಯಾವುದೇ ಅನೈತಿಕತೆಯ ಮಟ್ಟಕ್ಕೆ ಇಳಿಯಲು ಸಿದ್ಧ: ಮಲ್ಲಿಕಾರ್ಜುನ್ ಖರ್ಗೆ

ಅಧಿಕಾರದಲ್ಲಿ ಉಳಿಯುವುದಕ್ಕೆ ಬಿಜೆಪಿ ಯಾವುದೇ ಅನೈತಿಕತೆಯ ಮಟ್ಟಕ್ಕೆ ಇಳಿಯಲು ಸಿದ್ಧ: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ಆಡಳಿತಾರೂಢ ಬಿಜೆಪಿ ಅಧಿಕಾರದಲ್ಲಿ ಉಳಿಯಲು ಯಾವುದೇ ಅನೈತಿಕತೆಯ ಮಟ್ಟಕ್ಕೆ ಇಳಿಯಲು ಸಿದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದರು.

ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಿದ ಅವರು, “ದೇಶಾದ್ಯಂತ ಚುನಾವಣೆಗಳಲ್ಲಿ ಹಲವಾರು ‘ಅಕ್ರಮಗಳು’ ಹೊರಹೊಮ್ಮುತ್ತಿವೆ. ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಹೆಸರಿನಲ್ಲಿ ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ಜೀವಂತ ಮತದಾರರನ್ನು ಸತ್ತವರು ಎಂದು ಘೋಷಿಸಲಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಅತ್ಯಂತ ಆಶ್ಚರ್ಯಕರ, ವಿಷಯವೆಂದರೆ 65 ಲಕ್ಷ ಜನರ ಮತಗಳನ್ನು ಕಡಿತಗೊಳಿಸಲು ಬಿಜೆಪಿಗೆ ಯಾವುದೇ ಆಕ್ಷೇಪವಿಲ್ಲ. ಎಸ್‌ಐಆರ್‌ ಪ್ರಕ್ರಿಯೆಯಿಂದ ಯಾರು ಪ್ರಯೋಜನ ಪಡೆದರು ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಹೇಳಿದರು.

“ಇದು ಚುನಾವಣೆಗಳನ್ನು ಗೆಲ್ಲುವ ಹೋರಾಟವಲ್ಲ. ಆದರೆ, ಭಾರತದ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು” ಎಂದು ಖರ್ಗೆ ಅವರು ಎಸ್‌ಐಆರ್‌ ಪ್ರಕ್ರಿಯೆಯ ಕಾಂಗ್ರೆಸ್‌ನ ವಿರೋಧವನ್ನು ಉಲ್ಲೇಖಿಸಿ ಹೇಳಿದರು.

“ಈಗ ಆಡಳಿತ ಪಕ್ಷವು ಅಧಿಕಾರದಲ್ಲಿ ಉಳಿಯಲು ಯಾವುದೇ ಅನೈತಿಕತೆಗೆ ಹೋಗಲು ಸಿದ್ಧವಾಗಿದೆ. ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ಬೆಳಕಿಗೆ ಬರುತ್ತಿವೆ” ಎಂದು ಅವರು ಆರೋಪಿಸಿದರು.

“ವಿಶೇಷ ತೀವ್ರ ಪರಿಷ್ಕರಣೆಯ ಹೆಸರಿನಲ್ಲಿ, ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ. ಜೀವಂತವಾಗಿರುವವರನ್ನು ಸತ್ತವರು ಎಂದು ಘೋಷಿಸಲಾಗಿದೆ. ಯಾರ ಮತಗಳನ್ನು ಕಡಿತಗೊಳಿಸಲಾಗುತ್ತಿದೆ ಮತ್ತು ಯಾವ ಆಧಾರದ ಮೇಲೆ ಕಡಿತಗೊಳಿಸಲಾಗುತ್ತಿದೆ ಎಂದು ಹೇಳಲು ಚುನಾವಣಾ ಆಯೋಗ ಸಿದ್ಧವಾಗಿಲ್ಲದಿರುವುದರಿಂದ ಅದರ ನಿಷ್ಪಕ್ಷಪಾತತೆಯನ್ನು ಅರ್ಥಮಾಡಿಕೊಳ್ಳಬಹುದು” ಎಂದು ಅವರು ಹೇಳಿದರು.

ಇಡಿ ಮತ್ತು ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ಮುಂತಾದ ಕೇಂದ್ರ ತನಿಖಾ ಸಂಸ್ಥೆಗಳನ್ನು “ವಿರೋಧಿಗಳ ವಿರುದ್ಧ ರಾಜಕೀಯ ಉದ್ದೇಶಗಳಿಗಾಗಿ ಬಹಿರಂಗವಾಗಿ ಬಳಸಲಾಗಿದೆ, ದೇಶದ ಸುಪ್ರೀಂ ಕೋರ್ಟ್ ಅವರಿಗೆ ಕನ್ನಡಿ ತೋರಿಸಬೇಕಾಗಿದೆ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

‘ಅಲಿಪ್ತ ನೀತಿ’ಯಿಂದಾಗಿ ಭಾರತ ಗಳಿಸಿದ ವಿಶೇಷ ಸ್ಥಾನವನ್ನು ಕಳೆದುಕೊಂಡಿದೆ. ಸ್ವಾತಂತ್ರ್ಯದ ವೀರರು ಈ ದೇಶಕ್ಕಾಗಿ ಕಂಡ ಕನಸು ಇಂದು ನಮ್ಮಿಂದ ದೂರವಾಗುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.

ಗಾಂಧಿ ಜೊತೆ ಸಾವರ್ಕರ್ ಚಿತ್ರ ಪ್ರಕಟಿಸಿದ ಕೇಂದ್ರ ಸರ್ಕಾರ; ಕೇಂದ್ರ ಸರ್ಕಾರವನ್ನು ಟೀಕಿಸಿದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...