Homeಮುಖಪುಟಎಲೆಕ್ಟೋರಲ್ ಟ್ರಸ್ಟ್‌ಗಳ ಮೂಲಕ ₹259 ಕೋಟಿ ದೇಣಿಗೆ ಪಡೆದ ಬಿಜೆಪಿ: ಎಡಿಆರ್ ವರದಿ

ಎಲೆಕ್ಟೋರಲ್ ಟ್ರಸ್ಟ್‌ಗಳ ಮೂಲಕ ₹259 ಕೋಟಿ ದೇಣಿಗೆ ಪಡೆದ ಬಿಜೆಪಿ: ಎಡಿಆರ್ ವರದಿ

- Advertisement -
- Advertisement -

2022-2023ರಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಎಲೆಕ್ಟೋರಲ್ (ಚುನಾವಣಾ) ಟ್ರಸ್ಟ್ ಮೂಲಕ ₹259.08 ಕೋಟಿ ದೇಣಿಗೆಯಾಗಿ ಸ್ವೀಕರಿಸಿದೆ. ಇದು ಟ್ರಸ್ಟ್‌ ಮೂಲಕ ನೀಡಿದ ದೇಣಿಗೆಗಳಲ್ಲಿ ಶೇ.70.69 ರಷ್ಟಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ(ಎಡಿಆರ್) ವಿಶ್ಲೇಷಣೆ ತಿಳಿಸಿದೆ. ಬಿಜೆಪಿ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಎರಡನೇ ಅತಿ ಹೆಚ್ಚು ದೇಣಿಗೆ ಸ್ವೀಕರಿಸಿದ್ದು, ₹90 ಕೋಟಿ ಹಣ ಸಂದಾಯವಾಗಿದೆ. ಇದು ಚುನಾವಣಾ ಟ್ರಸ್ಟ್ ದೇಣಿಗೆಯ ಶೇ.24.56ರಷ್ಟು ಎಂದು ಎಡಿಆರ್ ವರದಿ ತಿಳಿಸಿದೆ.

ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಪಡೆದ ಕೊಡುಗೆಗಳನ್ನು ರಾಜಕೀಯ ಪಕ್ಷಗಳಿಗೆ ವಿತರಿಸುವ ಉದ್ದೇಶದಿಂದ ‘ಎಲೆಕ್ಟೋರಲ್ ಟ್ರಸ್ಟ್’ಗಳನ್ನು ಸ್ಥಾಪಿಸಲಾಗಿದೆ. ಅವರು ಹಣಕಾಸಿನ ವರ್ಷದಲ್ಲಿ ಸ್ವೀಕರಿಸಿದ ಶೇ.95ರಷ್ಟು ಕೊಡುಗೆಗಳನ್ನು ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಅಡಿಯಲ್ಲಿ ನೋಂದಾಯಿಸಲಾದ ರಾಜಕೀಯ ಪಕ್ಷಗಳಿಗೆ ದಾನ ಮಾಡಬೇಕು. ಚುನಾವಣಾ ಟ್ರಸ್ಟ್‌ಗಳು ಅವರಿಗೆ ಕೊಡುಗೆ ನೀಡುವ ಕಂಪನಿಗಳು ಮತ್ತು ವ್ಯಕ್ತಿಗಳನ್ನು ಪಟ್ಟಿಮಾಡುತ್ತವೆ.

ಚುನಾವಣಾ ಬಾಂಡ್‌ಗಳ ಖರೀದಿದಾರರು ಅನಾಮಧೇಯರಾಗಿರುತ್ತಾರೆ. ಆದರೆ, ಚುನಾವಣಾ ಟ್ರಸ್ಟ್‌ಗಳು ಹೆಚ್ಚು ಪಾರದರ್ಶಕವಾಗಿರುತ್ತವೆ. ಏಕೆಂದರೆ, ಅವುಗಳು ಕೊಡುಗೆದಾರರಿಗೆ ವರದಿ ಮಾಡುವುದನ್ನು ಕಡ್ಡಾಯಗೊಳಿಸುತ್ತವೆ. ವಿಶ್ಲೇಷಣೆಯ ಪ್ರಕಾರ ವೈಎಸ್ಆರ್ ಕಾಂಗ್ರೆಸ್ ₹16 ಕೋಟಿ, ಆಮ್ ಆದ್ಮಿ ಪಕ್ಷ ₹90 ಲಕ್ಷ ಮತ್ತು ಕಾಂಗ್ರೆಸ್ ₹50 ಲಕ್ಷ ಚುನಾವಣಾ ಟ್ರಸ್ಟ್ ಮೂಲಕ ದೇಣಿಗೆ ಪಡೆದಿವೆ.

ತಮ್ಮ ಕೊಡುಗೆ ವರದಿಗಳನ್ನು ಸಲ್ಲಿಸಿದ ಹದಿಮೂರು ಚುನಾವಣಾ ಟ್ರಸ್ಟ್‌ಗಳಲ್ಲಿ ಕೇವಲ ಐದು ಮಾತ್ರ. ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್, ಸಮಾಜ್ ಎಲೆಕ್ಟೋರಲ್ ಟ್ರಸ್ಟ್ ಅಸೋಸಿಯೇಷನ್, ಪರಿಬಾರ್ಟನ್ ಎಲೆಕ್ಟೋರಲ್ ಟ್ರಸ್ಟ್, ಟ್ರಯಂಫ್ ಎಲೆಕ್ಟೋರಲ್ ಟ್ರಸ್ಟ್ ಮತ್ತು ಐಂಜಿಗಾರ್ಟಿಗ್ ಎಲೆಕ್ಟೋರಲ್ ಟ್ರಸ್ಟ್, ಕಾರ್ಪೊರೇಟ್ ಕಂಪನಿಗಳು ಮತ್ತು ವ್ಯಕ್ತಿಗಳಿಂದ ಕೊಡುಗೆಗಳನ್ನು ಘೋಷಿಸಿವೆ. ಈ ಐದು ಚುನಾವಣಾ ಟ್ರಸ್ಟ್‌ಗಳ ಕೊಡುಗೆಗಳು ₹366.495 ಕೋಟಿ ಮೌಲ್ಯದ್ದಾಗಿದೆ.

ಟ್ರಸ್ಟ್ ತಾನು ಸಂಗ್ರಹಿಸಿದ ಹಣದ 99.09%, ₹363.15 ಕೋಟಿಗಳನ್ನು ನಾಲ್ಕು ರಾಜಕೀಯ ಪಕ್ಷಗಳಿಗೆ ವಿತರಿಸಿದೆ. ಬಿಜೆಪಿ (₹256.25 ಕೋಟಿ), ಬಿಆರ್‌ಎಸ್‌ (₹90 ಕೋಟಿ), ವೈಎಸ್ಆರ್‌ಸಿಪಿ (₹16 ಕೋಟಿ) ಮತ್ತು ಎಎಪಿ (₹90 ಲಕ್ಷ). ಸಮಾಜ ಎಲೆಕ್ಟೋರಲ್ ಟ್ರಸ್ಟ್ ಅಸೋಸಿಯೇಷನ್‌ನಿಂದ ಕಾಂಗ್ರೆಸ್ ತನ್ನ ಏಕೈಕ ದೇಣಿಗೆ ₹50 ಲಕ್ಷವನ್ನು ಪಡೆದುಕೊಂಡಿದೆ. ಬಹು ಚುನಾವಣಾ ಟ್ರಸ್ಟ್‌ಗಳಿಂದ ದೇಣಿಗೆ ಪಡೆದ ಏಕೈಕ ಪಕ್ಷ ಬಿಜೆಪಿಯಾಗಿದೆ.

ಇದನ್ನೂ ಓದಿ; ಸರ್ಕಾರಿ ಮನೆ ತೆರವು ನೋಟಿಸ್ ಪ್ರಶ್ನಿಸಿದ್ದ ಮಹುವಾ ಮೊಯಿತ್ರಾ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...