Homeಮುಖಪುಟಎಲೆಕ್ಟೋರಲ್ ಟ್ರಸ್ಟ್‌ಗಳ ಮೂಲಕ ₹259 ಕೋಟಿ ದೇಣಿಗೆ ಪಡೆದ ಬಿಜೆಪಿ: ಎಡಿಆರ್ ವರದಿ

ಎಲೆಕ್ಟೋರಲ್ ಟ್ರಸ್ಟ್‌ಗಳ ಮೂಲಕ ₹259 ಕೋಟಿ ದೇಣಿಗೆ ಪಡೆದ ಬಿಜೆಪಿ: ಎಡಿಆರ್ ವರದಿ

- Advertisement -
- Advertisement -

2022-2023ರಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಎಲೆಕ್ಟೋರಲ್ (ಚುನಾವಣಾ) ಟ್ರಸ್ಟ್ ಮೂಲಕ ₹259.08 ಕೋಟಿ ದೇಣಿಗೆಯಾಗಿ ಸ್ವೀಕರಿಸಿದೆ. ಇದು ಟ್ರಸ್ಟ್‌ ಮೂಲಕ ನೀಡಿದ ದೇಣಿಗೆಗಳಲ್ಲಿ ಶೇ.70.69 ರಷ್ಟಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ(ಎಡಿಆರ್) ವಿಶ್ಲೇಷಣೆ ತಿಳಿಸಿದೆ. ಬಿಜೆಪಿ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಎರಡನೇ ಅತಿ ಹೆಚ್ಚು ದೇಣಿಗೆ ಸ್ವೀಕರಿಸಿದ್ದು, ₹90 ಕೋಟಿ ಹಣ ಸಂದಾಯವಾಗಿದೆ. ಇದು ಚುನಾವಣಾ ಟ್ರಸ್ಟ್ ದೇಣಿಗೆಯ ಶೇ.24.56ರಷ್ಟು ಎಂದು ಎಡಿಆರ್ ವರದಿ ತಿಳಿಸಿದೆ.

ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಪಡೆದ ಕೊಡುಗೆಗಳನ್ನು ರಾಜಕೀಯ ಪಕ್ಷಗಳಿಗೆ ವಿತರಿಸುವ ಉದ್ದೇಶದಿಂದ ‘ಎಲೆಕ್ಟೋರಲ್ ಟ್ರಸ್ಟ್’ಗಳನ್ನು ಸ್ಥಾಪಿಸಲಾಗಿದೆ. ಅವರು ಹಣಕಾಸಿನ ವರ್ಷದಲ್ಲಿ ಸ್ವೀಕರಿಸಿದ ಶೇ.95ರಷ್ಟು ಕೊಡುಗೆಗಳನ್ನು ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಅಡಿಯಲ್ಲಿ ನೋಂದಾಯಿಸಲಾದ ರಾಜಕೀಯ ಪಕ್ಷಗಳಿಗೆ ದಾನ ಮಾಡಬೇಕು. ಚುನಾವಣಾ ಟ್ರಸ್ಟ್‌ಗಳು ಅವರಿಗೆ ಕೊಡುಗೆ ನೀಡುವ ಕಂಪನಿಗಳು ಮತ್ತು ವ್ಯಕ್ತಿಗಳನ್ನು ಪಟ್ಟಿಮಾಡುತ್ತವೆ.

ಚುನಾವಣಾ ಬಾಂಡ್‌ಗಳ ಖರೀದಿದಾರರು ಅನಾಮಧೇಯರಾಗಿರುತ್ತಾರೆ. ಆದರೆ, ಚುನಾವಣಾ ಟ್ರಸ್ಟ್‌ಗಳು ಹೆಚ್ಚು ಪಾರದರ್ಶಕವಾಗಿರುತ್ತವೆ. ಏಕೆಂದರೆ, ಅವುಗಳು ಕೊಡುಗೆದಾರರಿಗೆ ವರದಿ ಮಾಡುವುದನ್ನು ಕಡ್ಡಾಯಗೊಳಿಸುತ್ತವೆ. ವಿಶ್ಲೇಷಣೆಯ ಪ್ರಕಾರ ವೈಎಸ್ಆರ್ ಕಾಂಗ್ರೆಸ್ ₹16 ಕೋಟಿ, ಆಮ್ ಆದ್ಮಿ ಪಕ್ಷ ₹90 ಲಕ್ಷ ಮತ್ತು ಕಾಂಗ್ರೆಸ್ ₹50 ಲಕ್ಷ ಚುನಾವಣಾ ಟ್ರಸ್ಟ್ ಮೂಲಕ ದೇಣಿಗೆ ಪಡೆದಿವೆ.

ತಮ್ಮ ಕೊಡುಗೆ ವರದಿಗಳನ್ನು ಸಲ್ಲಿಸಿದ ಹದಿಮೂರು ಚುನಾವಣಾ ಟ್ರಸ್ಟ್‌ಗಳಲ್ಲಿ ಕೇವಲ ಐದು ಮಾತ್ರ. ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್, ಸಮಾಜ್ ಎಲೆಕ್ಟೋರಲ್ ಟ್ರಸ್ಟ್ ಅಸೋಸಿಯೇಷನ್, ಪರಿಬಾರ್ಟನ್ ಎಲೆಕ್ಟೋರಲ್ ಟ್ರಸ್ಟ್, ಟ್ರಯಂಫ್ ಎಲೆಕ್ಟೋರಲ್ ಟ್ರಸ್ಟ್ ಮತ್ತು ಐಂಜಿಗಾರ್ಟಿಗ್ ಎಲೆಕ್ಟೋರಲ್ ಟ್ರಸ್ಟ್, ಕಾರ್ಪೊರೇಟ್ ಕಂಪನಿಗಳು ಮತ್ತು ವ್ಯಕ್ತಿಗಳಿಂದ ಕೊಡುಗೆಗಳನ್ನು ಘೋಷಿಸಿವೆ. ಈ ಐದು ಚುನಾವಣಾ ಟ್ರಸ್ಟ್‌ಗಳ ಕೊಡುಗೆಗಳು ₹366.495 ಕೋಟಿ ಮೌಲ್ಯದ್ದಾಗಿದೆ.

ಟ್ರಸ್ಟ್ ತಾನು ಸಂಗ್ರಹಿಸಿದ ಹಣದ 99.09%, ₹363.15 ಕೋಟಿಗಳನ್ನು ನಾಲ್ಕು ರಾಜಕೀಯ ಪಕ್ಷಗಳಿಗೆ ವಿತರಿಸಿದೆ. ಬಿಜೆಪಿ (₹256.25 ಕೋಟಿ), ಬಿಆರ್‌ಎಸ್‌ (₹90 ಕೋಟಿ), ವೈಎಸ್ಆರ್‌ಸಿಪಿ (₹16 ಕೋಟಿ) ಮತ್ತು ಎಎಪಿ (₹90 ಲಕ್ಷ). ಸಮಾಜ ಎಲೆಕ್ಟೋರಲ್ ಟ್ರಸ್ಟ್ ಅಸೋಸಿಯೇಷನ್‌ನಿಂದ ಕಾಂಗ್ರೆಸ್ ತನ್ನ ಏಕೈಕ ದೇಣಿಗೆ ₹50 ಲಕ್ಷವನ್ನು ಪಡೆದುಕೊಂಡಿದೆ. ಬಹು ಚುನಾವಣಾ ಟ್ರಸ್ಟ್‌ಗಳಿಂದ ದೇಣಿಗೆ ಪಡೆದ ಏಕೈಕ ಪಕ್ಷ ಬಿಜೆಪಿಯಾಗಿದೆ.

ಇದನ್ನೂ ಓದಿ; ಸರ್ಕಾರಿ ಮನೆ ತೆರವು ನೋಟಿಸ್ ಪ್ರಶ್ನಿಸಿದ್ದ ಮಹುವಾ ಮೊಯಿತ್ರಾ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...