Homeಮುಖಪುಟಎಲೆಕ್ಟೋರಲ್ ಟ್ರಸ್ಟ್‌ಗಳ ಮೂಲಕ ₹259 ಕೋಟಿ ದೇಣಿಗೆ ಪಡೆದ ಬಿಜೆಪಿ: ಎಡಿಆರ್ ವರದಿ

ಎಲೆಕ್ಟೋರಲ್ ಟ್ರಸ್ಟ್‌ಗಳ ಮೂಲಕ ₹259 ಕೋಟಿ ದೇಣಿಗೆ ಪಡೆದ ಬಿಜೆಪಿ: ಎಡಿಆರ್ ವರದಿ

- Advertisement -
- Advertisement -

2022-2023ರಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಎಲೆಕ್ಟೋರಲ್ (ಚುನಾವಣಾ) ಟ್ರಸ್ಟ್ ಮೂಲಕ ₹259.08 ಕೋಟಿ ದೇಣಿಗೆಯಾಗಿ ಸ್ವೀಕರಿಸಿದೆ. ಇದು ಟ್ರಸ್ಟ್‌ ಮೂಲಕ ನೀಡಿದ ದೇಣಿಗೆಗಳಲ್ಲಿ ಶೇ.70.69 ರಷ್ಟಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ(ಎಡಿಆರ್) ವಿಶ್ಲೇಷಣೆ ತಿಳಿಸಿದೆ. ಬಿಜೆಪಿ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಎರಡನೇ ಅತಿ ಹೆಚ್ಚು ದೇಣಿಗೆ ಸ್ವೀಕರಿಸಿದ್ದು, ₹90 ಕೋಟಿ ಹಣ ಸಂದಾಯವಾಗಿದೆ. ಇದು ಚುನಾವಣಾ ಟ್ರಸ್ಟ್ ದೇಣಿಗೆಯ ಶೇ.24.56ರಷ್ಟು ಎಂದು ಎಡಿಆರ್ ವರದಿ ತಿಳಿಸಿದೆ.

ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಪಡೆದ ಕೊಡುಗೆಗಳನ್ನು ರಾಜಕೀಯ ಪಕ್ಷಗಳಿಗೆ ವಿತರಿಸುವ ಉದ್ದೇಶದಿಂದ ‘ಎಲೆಕ್ಟೋರಲ್ ಟ್ರಸ್ಟ್’ಗಳನ್ನು ಸ್ಥಾಪಿಸಲಾಗಿದೆ. ಅವರು ಹಣಕಾಸಿನ ವರ್ಷದಲ್ಲಿ ಸ್ವೀಕರಿಸಿದ ಶೇ.95ರಷ್ಟು ಕೊಡುಗೆಗಳನ್ನು ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಅಡಿಯಲ್ಲಿ ನೋಂದಾಯಿಸಲಾದ ರಾಜಕೀಯ ಪಕ್ಷಗಳಿಗೆ ದಾನ ಮಾಡಬೇಕು. ಚುನಾವಣಾ ಟ್ರಸ್ಟ್‌ಗಳು ಅವರಿಗೆ ಕೊಡುಗೆ ನೀಡುವ ಕಂಪನಿಗಳು ಮತ್ತು ವ್ಯಕ್ತಿಗಳನ್ನು ಪಟ್ಟಿಮಾಡುತ್ತವೆ.

ಚುನಾವಣಾ ಬಾಂಡ್‌ಗಳ ಖರೀದಿದಾರರು ಅನಾಮಧೇಯರಾಗಿರುತ್ತಾರೆ. ಆದರೆ, ಚುನಾವಣಾ ಟ್ರಸ್ಟ್‌ಗಳು ಹೆಚ್ಚು ಪಾರದರ್ಶಕವಾಗಿರುತ್ತವೆ. ಏಕೆಂದರೆ, ಅವುಗಳು ಕೊಡುಗೆದಾರರಿಗೆ ವರದಿ ಮಾಡುವುದನ್ನು ಕಡ್ಡಾಯಗೊಳಿಸುತ್ತವೆ. ವಿಶ್ಲೇಷಣೆಯ ಪ್ರಕಾರ ವೈಎಸ್ಆರ್ ಕಾಂಗ್ರೆಸ್ ₹16 ಕೋಟಿ, ಆಮ್ ಆದ್ಮಿ ಪಕ್ಷ ₹90 ಲಕ್ಷ ಮತ್ತು ಕಾಂಗ್ರೆಸ್ ₹50 ಲಕ್ಷ ಚುನಾವಣಾ ಟ್ರಸ್ಟ್ ಮೂಲಕ ದೇಣಿಗೆ ಪಡೆದಿವೆ.

ತಮ್ಮ ಕೊಡುಗೆ ವರದಿಗಳನ್ನು ಸಲ್ಲಿಸಿದ ಹದಿಮೂರು ಚುನಾವಣಾ ಟ್ರಸ್ಟ್‌ಗಳಲ್ಲಿ ಕೇವಲ ಐದು ಮಾತ್ರ. ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್, ಸಮಾಜ್ ಎಲೆಕ್ಟೋರಲ್ ಟ್ರಸ್ಟ್ ಅಸೋಸಿಯೇಷನ್, ಪರಿಬಾರ್ಟನ್ ಎಲೆಕ್ಟೋರಲ್ ಟ್ರಸ್ಟ್, ಟ್ರಯಂಫ್ ಎಲೆಕ್ಟೋರಲ್ ಟ್ರಸ್ಟ್ ಮತ್ತು ಐಂಜಿಗಾರ್ಟಿಗ್ ಎಲೆಕ್ಟೋರಲ್ ಟ್ರಸ್ಟ್, ಕಾರ್ಪೊರೇಟ್ ಕಂಪನಿಗಳು ಮತ್ತು ವ್ಯಕ್ತಿಗಳಿಂದ ಕೊಡುಗೆಗಳನ್ನು ಘೋಷಿಸಿವೆ. ಈ ಐದು ಚುನಾವಣಾ ಟ್ರಸ್ಟ್‌ಗಳ ಕೊಡುಗೆಗಳು ₹366.495 ಕೋಟಿ ಮೌಲ್ಯದ್ದಾಗಿದೆ.

ಟ್ರಸ್ಟ್ ತಾನು ಸಂಗ್ರಹಿಸಿದ ಹಣದ 99.09%, ₹363.15 ಕೋಟಿಗಳನ್ನು ನಾಲ್ಕು ರಾಜಕೀಯ ಪಕ್ಷಗಳಿಗೆ ವಿತರಿಸಿದೆ. ಬಿಜೆಪಿ (₹256.25 ಕೋಟಿ), ಬಿಆರ್‌ಎಸ್‌ (₹90 ಕೋಟಿ), ವೈಎಸ್ಆರ್‌ಸಿಪಿ (₹16 ಕೋಟಿ) ಮತ್ತು ಎಎಪಿ (₹90 ಲಕ್ಷ). ಸಮಾಜ ಎಲೆಕ್ಟೋರಲ್ ಟ್ರಸ್ಟ್ ಅಸೋಸಿಯೇಷನ್‌ನಿಂದ ಕಾಂಗ್ರೆಸ್ ತನ್ನ ಏಕೈಕ ದೇಣಿಗೆ ₹50 ಲಕ್ಷವನ್ನು ಪಡೆದುಕೊಂಡಿದೆ. ಬಹು ಚುನಾವಣಾ ಟ್ರಸ್ಟ್‌ಗಳಿಂದ ದೇಣಿಗೆ ಪಡೆದ ಏಕೈಕ ಪಕ್ಷ ಬಿಜೆಪಿಯಾಗಿದೆ.

ಇದನ್ನೂ ಓದಿ; ಸರ್ಕಾರಿ ಮನೆ ತೆರವು ನೋಟಿಸ್ ಪ್ರಶ್ನಿಸಿದ್ದ ಮಹುವಾ ಮೊಯಿತ್ರಾ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...