Homeಮುಖಪುಟಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

- Advertisement -
- Advertisement -

ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಪಡೆಯುವ ಚುನಾವಣಾ ಬಾಂಡ್ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಬೃಹತ್ ಕಾರ್ಪೋರೇಟ್ ಕಂಪನಿಗಳಿಂದ ಬಿಜೆಪಿ ಪಡೆದಿರುವ ವಿವಿಧ ಚುನಾವಣಾ ಬಾಂಡ್ ವಿಷಯವನ್ನು ಗೌಪ್ಯವಾಗಿಟ್ಟಿರುವ ವಿಷಯ ಪ್ರಸ್ತಾಪಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಚುನಾವಣಾ ಬಾಂಡ್ ಪಡೆಯುವಲ್ಲಿ ದೊಡ್ಡ ಹಗರಣ ನಡೆದಿದೆ. ಬಿಜೆಪಿ ಚುನಾವಣಾ ಬಾಂಡ್ ಗಳ ಮೂಲಕ ಹಣ ಪಡೆದು ಭ್ರಷ್ಟಾಚಾರವನ್ನು ಅಧಿಕೃತಗೊಳಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

‘ದಿ ವೈರ್’ ಮತ್ತು ‘ನ್ಯಾಷನಲ್ ಹೆರಾಲ್ಡ್’ ಆನ್ ಲೈನ್ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟಗೊಂಡಿದೆ. 2014-15ನೇ ಸಾಲಿನಲ್ಲಿ ಬಿಜೆಪಿ ಹಣಕಾಸು ನಿರ್ವಹಣೆ ವೇಳೆ ಯಾವ ಯಾವ ಕಂಪನಿಗಳಿಂದ ಚುನಾವಣಾ ಬಾಂಡ್ ಗಳನ್ನು ಸ್ವೀಕರಿಸಿದೆ ಮತ್ತು ಚುನಾವಣಾ ಆಯೋಗಕ್ಕೆ ನೀಡಿದ್ದ ಮಾಹಿತಿ ಏನಿತ್ತು ಎಂಬುದನ್ನು ಬಹಿರಂಗಪಡಿಸಿವೆ.

ಭಯೋತ್ಪಾದನೆಗೆ ಹಣ ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ  ಕಂಪನಿಯಿಂದಲೂ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ 10 ಕೋಟಿ ರೂಪಾಯಿ ದೇಣಿಗೆ ಪಡೆದುಕೊಂಡಿದೆ. ಇದೀಗ ಪ್ರಮುಖ ವಿವಾದದಕ್ಕೆ ಕಾರಣವಾಗಿದೆ. ಒಂದು ಕಂಪನಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಕ್ಷಕ್ಕೆ ದೇಣಿಗೆ ನೀಡಿರುವುದು ಇದೇ ಮೊದಲು. ಬಿಜೆಪಿಗೆ 10 ಕೋಟಿ ರೂಪಾಯಿ ದೇಣಿಗೆ ನೀಡಿರುವ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಭಯೋತ್ಪಾದಕರೊಂದಿಗೆ ಕಂಪನಿ ನಂಟು ಹೊಂದಿರುವ ಸಂಗತಿಯನ್ನು ಇಡಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 743 ಕೋಟಿ ಪಾರ್ಟಿ ಫಂಡ್‌ ಪಡೆದ ಬಿಜೆಪಿ: ಇತರ ಪಕ್ಷಗಳಿಗಿಂತ ಮೂರು ಪಟ್ಟು ಹೆಚ್ಚು!

ಆರ್.ಕೆ.ಡಬ್ಲ್ಯೂಡೆವಲಪರ್ ಲಿಮಿಟೆಡ್, ಕಂಪನಿ 2014-15ರಲ್ಲಿ ಬಿಜೆಪಿಗೆ 10 ಕೋಟಿ ರೂ. ನೀಡಿದೆ. ಇದೇ ಆರ್.ಕೆ.ಡಬ್ಲ್ಯು ಕಂಪನಿ ಈಗ ಭಯೋತ್ಪಾದಕರೊಂದಿಗೆ ನಂಟು ಹೊಂದಿದೆ ಎಂದು ತನಿಖೆ ನಡೆಸುತ್ತಿರುವ ಇಡಿ ಬೆಚ್ಚಿ ಬೀಳಿಸುವ ಮಾಹಿತಿಯನ್ನು ಹೊರಹಾಕಿದೆ. ಆರ್.ಕೆ.ಡಬ್ಲ್ಯು ಕಂಪನಿ ಭಯೋತ್ಪಾದಕರ ನಿಧಿಗೆ ಹಣ ವರ್ಗಾಯಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ.

2018ರಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಗುರುತಿಸಲಾಗದ ರಾಜಕೀಯ ಪಕ್ಷಕ್ಕೆ ಅಥವಾ ಪಕ್ಷಗಳಿಗೆ ಅವಧಿ ಮುಗಿದ ಚುನಾವಣಾ ಬಾಂಡ್ ಗಳನ್ನು ಪಡೆಯಲು ಹಣಕಾಸು ಇಲಾಖೆ ಬಾಗಿಲು ತೆರೆದಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಆರ್.ಕೆ.ಡಬ್ಲ್ಯುಡೆವಲಪರ್ ಲಿ. ಕಂಪನಿಯು 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಇಕ್ಬಾಲ್ ಮೆನನ್ ಅಲಿಯಾಸ್ ಇಕ್ಬಾಲ್ ಮಿರ್ಚಿಯೊಂದಿಗೆ ವಹಿವಾಟು ನಡೆಸಿದೆ. ಅಲ್ಲದೇ ಇಕ್ಬಾಲ್ ಮಿರ್ಚಿಯ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮುಂದುವರೆಸಿದೆ.

ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪ ಹೊತ್ತಿರುವ ಇಕ್ಬಾಲ್ ಮಿರ್ಚಿಯಿಂದ ಎನ್.ಸಿ.ಪಿ ನಾಯಕ ಪ್ರಫುಲ್ ಪಟೇಲ್ ಪತ್ನಿ ಆಸ್ತಿ ಖರೀದಿಸಿರುವ ಕುರಿತು ಗೃಹ ಸಚಿವ ಅಮಿತ್ ಶಾ ಆರೋಪ ಮಾಡಿದ ಒಂದು ವಾರದಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಆರ್.ಕೆ.ಡಬ್ಲ್ಯೂ ಕಂಪನಿ ಅತಿ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬಿಜೆಪಿ ಕಂಪನಿಯಿಂದ ಹಲವು ಬಾರಿ ಚುನಾವಣಾ ಬಾಂಡ್ ಗಳನ್ನು ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಭಯೋತ್ಪಾದಕರೊಂದಿಗೆ ಹಣಕಾಸು ವಹಿವಾಟು ನಡೆಸಿರುವ ಆರೋಪ ಹೊತ್ತಿರುವ ಕಂಪನಿ ವಿರುದ್ಧ ತನಿಖೆ ನಡೆಯುತ್ತಿರುವಾಗಲೇ, ಅದೇ ಕಂಪನಿಯಿಂದ ಬಿಜೆಪಿ ಚುನಾವಣಾ ಬಾಂಡ್ ಪಡೆದಿದ್ದು, ದೊಡ್ಡ ಹಗರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಆರ್.ಕೆ.ಡಬ್ಲ್ಯೂ ಡೆವೆಲಪರ್ ಲಿ. ಕಂಪನಿಯ ಮಾಜಿ ನಿರ್ದೇಶಕ ರಂಜಿತ್ ಬಿಂದ್ರಾ ಭೂಗತ ಜಗತ್ತಿನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಹಿನ್ನೆಲೆ ಬಂಧಿಸಲಾಗಿದೆ. ಇದೇ ವೇಳೆ ಆರ್.ಕೆ.ಡಬ್ಲ್ಯೂ ಕಂಪನಿ ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಮಾರಾಟ ಮಾಡಿದ್ದು, ಇದಕ್ಕಾಗಿ ಬಿಂದ್ರಾ 30 ಕೋಟಿ ರೂಪಾಯಿ ಕಮಿಷನ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಖರೀದಿಸಿದೆ ಎಂದು ಇಡಿ ಆರೋಪಿಸಿದೆ. ಬಿಜೆಪಿ ಚುನಾವಣಾ ಆಯೋಗದಲ್ಲಿ ಘೋಷಿಸಿಕೊಂಡಿರುವಂತೆ ಸ್ಕಿಲ್ ರಿಯಲ್ ಟರ್ ಪ್ರೈ. ಲಿಮಿಟೆಡ್ ನಿಂದ 2 ಕೋಟಿ ರೂಪಾಯಿ ಪಡೆದಿರುವುದಾಗಿ ಹೇಳಿದೆ. ಇದು ಸನ್ ಬ್ಲಿಂಕ್ ಕಂಪನಿಯ ಸೋದರ ಕಂಪನಿಯಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇಂಟರೆಸ್ಟಿಂಗ್ ವಿಷಯ ಅಂದರೆ ಇಕ್ಬಾಲ್ ಮಿರ್ಚಿ ವಿಷಯ ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಸ್ತಾಪವಾಗಿತ್ತು. ಮಿರ್ಚಿ ಮತ್ತು ಸನ್ ಬ್ಲಿಂಕ್ ಮಿಲೇನಿಯಂ ಡೆವಲಪರ್ಸ್ ನಡುವೆ ಆಸ್ತಿ ವಹಿವಾಟು ನಡೆದಿದೆ ಎಂದು ಆರೋಪಿಸಿರುವ ಹಿನ್ನೆಲೆ ಇಡಿ ತನಿಖೆಯನ್ನು ತೀವ್ರಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...