Homeಮುಖಪುಟಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

- Advertisement -
- Advertisement -

ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಪಡೆಯುವ ಚುನಾವಣಾ ಬಾಂಡ್ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಬೃಹತ್ ಕಾರ್ಪೋರೇಟ್ ಕಂಪನಿಗಳಿಂದ ಬಿಜೆಪಿ ಪಡೆದಿರುವ ವಿವಿಧ ಚುನಾವಣಾ ಬಾಂಡ್ ವಿಷಯವನ್ನು ಗೌಪ್ಯವಾಗಿಟ್ಟಿರುವ ವಿಷಯ ಪ್ರಸ್ತಾಪಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಚುನಾವಣಾ ಬಾಂಡ್ ಪಡೆಯುವಲ್ಲಿ ದೊಡ್ಡ ಹಗರಣ ನಡೆದಿದೆ. ಬಿಜೆಪಿ ಚುನಾವಣಾ ಬಾಂಡ್ ಗಳ ಮೂಲಕ ಹಣ ಪಡೆದು ಭ್ರಷ್ಟಾಚಾರವನ್ನು ಅಧಿಕೃತಗೊಳಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

‘ದಿ ವೈರ್’ ಮತ್ತು ‘ನ್ಯಾಷನಲ್ ಹೆರಾಲ್ಡ್’ ಆನ್ ಲೈನ್ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟಗೊಂಡಿದೆ. 2014-15ನೇ ಸಾಲಿನಲ್ಲಿ ಬಿಜೆಪಿ ಹಣಕಾಸು ನಿರ್ವಹಣೆ ವೇಳೆ ಯಾವ ಯಾವ ಕಂಪನಿಗಳಿಂದ ಚುನಾವಣಾ ಬಾಂಡ್ ಗಳನ್ನು ಸ್ವೀಕರಿಸಿದೆ ಮತ್ತು ಚುನಾವಣಾ ಆಯೋಗಕ್ಕೆ ನೀಡಿದ್ದ ಮಾಹಿತಿ ಏನಿತ್ತು ಎಂಬುದನ್ನು ಬಹಿರಂಗಪಡಿಸಿವೆ.

ಭಯೋತ್ಪಾದನೆಗೆ ಹಣ ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ  ಕಂಪನಿಯಿಂದಲೂ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ 10 ಕೋಟಿ ರೂಪಾಯಿ ದೇಣಿಗೆ ಪಡೆದುಕೊಂಡಿದೆ. ಇದೀಗ ಪ್ರಮುಖ ವಿವಾದದಕ್ಕೆ ಕಾರಣವಾಗಿದೆ. ಒಂದು ಕಂಪನಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಕ್ಷಕ್ಕೆ ದೇಣಿಗೆ ನೀಡಿರುವುದು ಇದೇ ಮೊದಲು. ಬಿಜೆಪಿಗೆ 10 ಕೋಟಿ ರೂಪಾಯಿ ದೇಣಿಗೆ ನೀಡಿರುವ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಭಯೋತ್ಪಾದಕರೊಂದಿಗೆ ಕಂಪನಿ ನಂಟು ಹೊಂದಿರುವ ಸಂಗತಿಯನ್ನು ಇಡಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 743 ಕೋಟಿ ಪಾರ್ಟಿ ಫಂಡ್‌ ಪಡೆದ ಬಿಜೆಪಿ: ಇತರ ಪಕ್ಷಗಳಿಗಿಂತ ಮೂರು ಪಟ್ಟು ಹೆಚ್ಚು!

ಆರ್.ಕೆ.ಡಬ್ಲ್ಯೂಡೆವಲಪರ್ ಲಿಮಿಟೆಡ್, ಕಂಪನಿ 2014-15ರಲ್ಲಿ ಬಿಜೆಪಿಗೆ 10 ಕೋಟಿ ರೂ. ನೀಡಿದೆ. ಇದೇ ಆರ್.ಕೆ.ಡಬ್ಲ್ಯು ಕಂಪನಿ ಈಗ ಭಯೋತ್ಪಾದಕರೊಂದಿಗೆ ನಂಟು ಹೊಂದಿದೆ ಎಂದು ತನಿಖೆ ನಡೆಸುತ್ತಿರುವ ಇಡಿ ಬೆಚ್ಚಿ ಬೀಳಿಸುವ ಮಾಹಿತಿಯನ್ನು ಹೊರಹಾಕಿದೆ. ಆರ್.ಕೆ.ಡಬ್ಲ್ಯು ಕಂಪನಿ ಭಯೋತ್ಪಾದಕರ ನಿಧಿಗೆ ಹಣ ವರ್ಗಾಯಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ.

2018ರಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಗುರುತಿಸಲಾಗದ ರಾಜಕೀಯ ಪಕ್ಷಕ್ಕೆ ಅಥವಾ ಪಕ್ಷಗಳಿಗೆ ಅವಧಿ ಮುಗಿದ ಚುನಾವಣಾ ಬಾಂಡ್ ಗಳನ್ನು ಪಡೆಯಲು ಹಣಕಾಸು ಇಲಾಖೆ ಬಾಗಿಲು ತೆರೆದಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಆರ್.ಕೆ.ಡಬ್ಲ್ಯುಡೆವಲಪರ್ ಲಿ. ಕಂಪನಿಯು 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಇಕ್ಬಾಲ್ ಮೆನನ್ ಅಲಿಯಾಸ್ ಇಕ್ಬಾಲ್ ಮಿರ್ಚಿಯೊಂದಿಗೆ ವಹಿವಾಟು ನಡೆಸಿದೆ. ಅಲ್ಲದೇ ಇಕ್ಬಾಲ್ ಮಿರ್ಚಿಯ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮುಂದುವರೆಸಿದೆ.

ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪ ಹೊತ್ತಿರುವ ಇಕ್ಬಾಲ್ ಮಿರ್ಚಿಯಿಂದ ಎನ್.ಸಿ.ಪಿ ನಾಯಕ ಪ್ರಫುಲ್ ಪಟೇಲ್ ಪತ್ನಿ ಆಸ್ತಿ ಖರೀದಿಸಿರುವ ಕುರಿತು ಗೃಹ ಸಚಿವ ಅಮಿತ್ ಶಾ ಆರೋಪ ಮಾಡಿದ ಒಂದು ವಾರದಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಆರ್.ಕೆ.ಡಬ್ಲ್ಯೂ ಕಂಪನಿ ಅತಿ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬಿಜೆಪಿ ಕಂಪನಿಯಿಂದ ಹಲವು ಬಾರಿ ಚುನಾವಣಾ ಬಾಂಡ್ ಗಳನ್ನು ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಭಯೋತ್ಪಾದಕರೊಂದಿಗೆ ಹಣಕಾಸು ವಹಿವಾಟು ನಡೆಸಿರುವ ಆರೋಪ ಹೊತ್ತಿರುವ ಕಂಪನಿ ವಿರುದ್ಧ ತನಿಖೆ ನಡೆಯುತ್ತಿರುವಾಗಲೇ, ಅದೇ ಕಂಪನಿಯಿಂದ ಬಿಜೆಪಿ ಚುನಾವಣಾ ಬಾಂಡ್ ಪಡೆದಿದ್ದು, ದೊಡ್ಡ ಹಗರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಆರ್.ಕೆ.ಡಬ್ಲ್ಯೂ ಡೆವೆಲಪರ್ ಲಿ. ಕಂಪನಿಯ ಮಾಜಿ ನಿರ್ದೇಶಕ ರಂಜಿತ್ ಬಿಂದ್ರಾ ಭೂಗತ ಜಗತ್ತಿನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಹಿನ್ನೆಲೆ ಬಂಧಿಸಲಾಗಿದೆ. ಇದೇ ವೇಳೆ ಆರ್.ಕೆ.ಡಬ್ಲ್ಯೂ ಕಂಪನಿ ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಮಾರಾಟ ಮಾಡಿದ್ದು, ಇದಕ್ಕಾಗಿ ಬಿಂದ್ರಾ 30 ಕೋಟಿ ರೂಪಾಯಿ ಕಮಿಷನ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಖರೀದಿಸಿದೆ ಎಂದು ಇಡಿ ಆರೋಪಿಸಿದೆ. ಬಿಜೆಪಿ ಚುನಾವಣಾ ಆಯೋಗದಲ್ಲಿ ಘೋಷಿಸಿಕೊಂಡಿರುವಂತೆ ಸ್ಕಿಲ್ ರಿಯಲ್ ಟರ್ ಪ್ರೈ. ಲಿಮಿಟೆಡ್ ನಿಂದ 2 ಕೋಟಿ ರೂಪಾಯಿ ಪಡೆದಿರುವುದಾಗಿ ಹೇಳಿದೆ. ಇದು ಸನ್ ಬ್ಲಿಂಕ್ ಕಂಪನಿಯ ಸೋದರ ಕಂಪನಿಯಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇಂಟರೆಸ್ಟಿಂಗ್ ವಿಷಯ ಅಂದರೆ ಇಕ್ಬಾಲ್ ಮಿರ್ಚಿ ವಿಷಯ ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಸ್ತಾಪವಾಗಿತ್ತು. ಮಿರ್ಚಿ ಮತ್ತು ಸನ್ ಬ್ಲಿಂಕ್ ಮಿಲೇನಿಯಂ ಡೆವಲಪರ್ಸ್ ನಡುವೆ ಆಸ್ತಿ ವಹಿವಾಟು ನಡೆದಿದೆ ಎಂದು ಆರೋಪಿಸಿರುವ ಹಿನ್ನೆಲೆ ಇಡಿ ತನಿಖೆಯನ್ನು ತೀವ್ರಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...