Homeಮುಖಪುಟಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

- Advertisement -
- Advertisement -

ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಪಡೆಯುವ ಚುನಾವಣಾ ಬಾಂಡ್ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಬೃಹತ್ ಕಾರ್ಪೋರೇಟ್ ಕಂಪನಿಗಳಿಂದ ಬಿಜೆಪಿ ಪಡೆದಿರುವ ವಿವಿಧ ಚುನಾವಣಾ ಬಾಂಡ್ ವಿಷಯವನ್ನು ಗೌಪ್ಯವಾಗಿಟ್ಟಿರುವ ವಿಷಯ ಪ್ರಸ್ತಾಪಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಚುನಾವಣಾ ಬಾಂಡ್ ಪಡೆಯುವಲ್ಲಿ ದೊಡ್ಡ ಹಗರಣ ನಡೆದಿದೆ. ಬಿಜೆಪಿ ಚುನಾವಣಾ ಬಾಂಡ್ ಗಳ ಮೂಲಕ ಹಣ ಪಡೆದು ಭ್ರಷ್ಟಾಚಾರವನ್ನು ಅಧಿಕೃತಗೊಳಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

‘ದಿ ವೈರ್’ ಮತ್ತು ‘ನ್ಯಾಷನಲ್ ಹೆರಾಲ್ಡ್’ ಆನ್ ಲೈನ್ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟಗೊಂಡಿದೆ. 2014-15ನೇ ಸಾಲಿನಲ್ಲಿ ಬಿಜೆಪಿ ಹಣಕಾಸು ನಿರ್ವಹಣೆ ವೇಳೆ ಯಾವ ಯಾವ ಕಂಪನಿಗಳಿಂದ ಚುನಾವಣಾ ಬಾಂಡ್ ಗಳನ್ನು ಸ್ವೀಕರಿಸಿದೆ ಮತ್ತು ಚುನಾವಣಾ ಆಯೋಗಕ್ಕೆ ನೀಡಿದ್ದ ಮಾಹಿತಿ ಏನಿತ್ತು ಎಂಬುದನ್ನು ಬಹಿರಂಗಪಡಿಸಿವೆ.

ಭಯೋತ್ಪಾದನೆಗೆ ಹಣ ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ  ಕಂಪನಿಯಿಂದಲೂ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ 10 ಕೋಟಿ ರೂಪಾಯಿ ದೇಣಿಗೆ ಪಡೆದುಕೊಂಡಿದೆ. ಇದೀಗ ಪ್ರಮುಖ ವಿವಾದದಕ್ಕೆ ಕಾರಣವಾಗಿದೆ. ಒಂದು ಕಂಪನಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಕ್ಷಕ್ಕೆ ದೇಣಿಗೆ ನೀಡಿರುವುದು ಇದೇ ಮೊದಲು. ಬಿಜೆಪಿಗೆ 10 ಕೋಟಿ ರೂಪಾಯಿ ದೇಣಿಗೆ ನೀಡಿರುವ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಭಯೋತ್ಪಾದಕರೊಂದಿಗೆ ಕಂಪನಿ ನಂಟು ಹೊಂದಿರುವ ಸಂಗತಿಯನ್ನು ಇಡಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 743 ಕೋಟಿ ಪಾರ್ಟಿ ಫಂಡ್‌ ಪಡೆದ ಬಿಜೆಪಿ: ಇತರ ಪಕ್ಷಗಳಿಗಿಂತ ಮೂರು ಪಟ್ಟು ಹೆಚ್ಚು!

ಆರ್.ಕೆ.ಡಬ್ಲ್ಯೂಡೆವಲಪರ್ ಲಿಮಿಟೆಡ್, ಕಂಪನಿ 2014-15ರಲ್ಲಿ ಬಿಜೆಪಿಗೆ 10 ಕೋಟಿ ರೂ. ನೀಡಿದೆ. ಇದೇ ಆರ್.ಕೆ.ಡಬ್ಲ್ಯು ಕಂಪನಿ ಈಗ ಭಯೋತ್ಪಾದಕರೊಂದಿಗೆ ನಂಟು ಹೊಂದಿದೆ ಎಂದು ತನಿಖೆ ನಡೆಸುತ್ತಿರುವ ಇಡಿ ಬೆಚ್ಚಿ ಬೀಳಿಸುವ ಮಾಹಿತಿಯನ್ನು ಹೊರಹಾಕಿದೆ. ಆರ್.ಕೆ.ಡಬ್ಲ್ಯು ಕಂಪನಿ ಭಯೋತ್ಪಾದಕರ ನಿಧಿಗೆ ಹಣ ವರ್ಗಾಯಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ.

2018ರಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಗುರುತಿಸಲಾಗದ ರಾಜಕೀಯ ಪಕ್ಷಕ್ಕೆ ಅಥವಾ ಪಕ್ಷಗಳಿಗೆ ಅವಧಿ ಮುಗಿದ ಚುನಾವಣಾ ಬಾಂಡ್ ಗಳನ್ನು ಪಡೆಯಲು ಹಣಕಾಸು ಇಲಾಖೆ ಬಾಗಿಲು ತೆರೆದಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಆರ್.ಕೆ.ಡಬ್ಲ್ಯುಡೆವಲಪರ್ ಲಿ. ಕಂಪನಿಯು 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಇಕ್ಬಾಲ್ ಮೆನನ್ ಅಲಿಯಾಸ್ ಇಕ್ಬಾಲ್ ಮಿರ್ಚಿಯೊಂದಿಗೆ ವಹಿವಾಟು ನಡೆಸಿದೆ. ಅಲ್ಲದೇ ಇಕ್ಬಾಲ್ ಮಿರ್ಚಿಯ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮುಂದುವರೆಸಿದೆ.

ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪ ಹೊತ್ತಿರುವ ಇಕ್ಬಾಲ್ ಮಿರ್ಚಿಯಿಂದ ಎನ್.ಸಿ.ಪಿ ನಾಯಕ ಪ್ರಫುಲ್ ಪಟೇಲ್ ಪತ್ನಿ ಆಸ್ತಿ ಖರೀದಿಸಿರುವ ಕುರಿತು ಗೃಹ ಸಚಿವ ಅಮಿತ್ ಶಾ ಆರೋಪ ಮಾಡಿದ ಒಂದು ವಾರದಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಆರ್.ಕೆ.ಡಬ್ಲ್ಯೂ ಕಂಪನಿ ಅತಿ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬಿಜೆಪಿ ಕಂಪನಿಯಿಂದ ಹಲವು ಬಾರಿ ಚುನಾವಣಾ ಬಾಂಡ್ ಗಳನ್ನು ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಭಯೋತ್ಪಾದಕರೊಂದಿಗೆ ಹಣಕಾಸು ವಹಿವಾಟು ನಡೆಸಿರುವ ಆರೋಪ ಹೊತ್ತಿರುವ ಕಂಪನಿ ವಿರುದ್ಧ ತನಿಖೆ ನಡೆಯುತ್ತಿರುವಾಗಲೇ, ಅದೇ ಕಂಪನಿಯಿಂದ ಬಿಜೆಪಿ ಚುನಾವಣಾ ಬಾಂಡ್ ಪಡೆದಿದ್ದು, ದೊಡ್ಡ ಹಗರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಆರ್.ಕೆ.ಡಬ್ಲ್ಯೂ ಡೆವೆಲಪರ್ ಲಿ. ಕಂಪನಿಯ ಮಾಜಿ ನಿರ್ದೇಶಕ ರಂಜಿತ್ ಬಿಂದ್ರಾ ಭೂಗತ ಜಗತ್ತಿನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಹಿನ್ನೆಲೆ ಬಂಧಿಸಲಾಗಿದೆ. ಇದೇ ವೇಳೆ ಆರ್.ಕೆ.ಡಬ್ಲ್ಯೂ ಕಂಪನಿ ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಮಾರಾಟ ಮಾಡಿದ್ದು, ಇದಕ್ಕಾಗಿ ಬಿಂದ್ರಾ 30 ಕೋಟಿ ರೂಪಾಯಿ ಕಮಿಷನ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಖರೀದಿಸಿದೆ ಎಂದು ಇಡಿ ಆರೋಪಿಸಿದೆ. ಬಿಜೆಪಿ ಚುನಾವಣಾ ಆಯೋಗದಲ್ಲಿ ಘೋಷಿಸಿಕೊಂಡಿರುವಂತೆ ಸ್ಕಿಲ್ ರಿಯಲ್ ಟರ್ ಪ್ರೈ. ಲಿಮಿಟೆಡ್ ನಿಂದ 2 ಕೋಟಿ ರೂಪಾಯಿ ಪಡೆದಿರುವುದಾಗಿ ಹೇಳಿದೆ. ಇದು ಸನ್ ಬ್ಲಿಂಕ್ ಕಂಪನಿಯ ಸೋದರ ಕಂಪನಿಯಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇಂಟರೆಸ್ಟಿಂಗ್ ವಿಷಯ ಅಂದರೆ ಇಕ್ಬಾಲ್ ಮಿರ್ಚಿ ವಿಷಯ ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಸ್ತಾಪವಾಗಿತ್ತು. ಮಿರ್ಚಿ ಮತ್ತು ಸನ್ ಬ್ಲಿಂಕ್ ಮಿಲೇನಿಯಂ ಡೆವಲಪರ್ಸ್ ನಡುವೆ ಆಸ್ತಿ ವಹಿವಾಟು ನಡೆದಿದೆ ಎಂದು ಆರೋಪಿಸಿರುವ ಹಿನ್ನೆಲೆ ಇಡಿ ತನಿಖೆಯನ್ನು ತೀವ್ರಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...