Homeಮುಖಪುಟಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

- Advertisement -
- Advertisement -

ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಪಡೆಯುವ ಚುನಾವಣಾ ಬಾಂಡ್ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಬೃಹತ್ ಕಾರ್ಪೋರೇಟ್ ಕಂಪನಿಗಳಿಂದ ಬಿಜೆಪಿ ಪಡೆದಿರುವ ವಿವಿಧ ಚುನಾವಣಾ ಬಾಂಡ್ ವಿಷಯವನ್ನು ಗೌಪ್ಯವಾಗಿಟ್ಟಿರುವ ವಿಷಯ ಪ್ರಸ್ತಾಪಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಚುನಾವಣಾ ಬಾಂಡ್ ಪಡೆಯುವಲ್ಲಿ ದೊಡ್ಡ ಹಗರಣ ನಡೆದಿದೆ. ಬಿಜೆಪಿ ಚುನಾವಣಾ ಬಾಂಡ್ ಗಳ ಮೂಲಕ ಹಣ ಪಡೆದು ಭ್ರಷ್ಟಾಚಾರವನ್ನು ಅಧಿಕೃತಗೊಳಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

‘ದಿ ವೈರ್’ ಮತ್ತು ‘ನ್ಯಾಷನಲ್ ಹೆರಾಲ್ಡ್’ ಆನ್ ಲೈನ್ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟಗೊಂಡಿದೆ. 2014-15ನೇ ಸಾಲಿನಲ್ಲಿ ಬಿಜೆಪಿ ಹಣಕಾಸು ನಿರ್ವಹಣೆ ವೇಳೆ ಯಾವ ಯಾವ ಕಂಪನಿಗಳಿಂದ ಚುನಾವಣಾ ಬಾಂಡ್ ಗಳನ್ನು ಸ್ವೀಕರಿಸಿದೆ ಮತ್ತು ಚುನಾವಣಾ ಆಯೋಗಕ್ಕೆ ನೀಡಿದ್ದ ಮಾಹಿತಿ ಏನಿತ್ತು ಎಂಬುದನ್ನು ಬಹಿರಂಗಪಡಿಸಿವೆ.

ಭಯೋತ್ಪಾದನೆಗೆ ಹಣ ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ  ಕಂಪನಿಯಿಂದಲೂ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ 10 ಕೋಟಿ ರೂಪಾಯಿ ದೇಣಿಗೆ ಪಡೆದುಕೊಂಡಿದೆ. ಇದೀಗ ಪ್ರಮುಖ ವಿವಾದದಕ್ಕೆ ಕಾರಣವಾಗಿದೆ. ಒಂದು ಕಂಪನಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಕ್ಷಕ್ಕೆ ದೇಣಿಗೆ ನೀಡಿರುವುದು ಇದೇ ಮೊದಲು. ಬಿಜೆಪಿಗೆ 10 ಕೋಟಿ ರೂಪಾಯಿ ದೇಣಿಗೆ ನೀಡಿರುವ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಭಯೋತ್ಪಾದಕರೊಂದಿಗೆ ಕಂಪನಿ ನಂಟು ಹೊಂದಿರುವ ಸಂಗತಿಯನ್ನು ಇಡಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 743 ಕೋಟಿ ಪಾರ್ಟಿ ಫಂಡ್‌ ಪಡೆದ ಬಿಜೆಪಿ: ಇತರ ಪಕ್ಷಗಳಿಗಿಂತ ಮೂರು ಪಟ್ಟು ಹೆಚ್ಚು!

ಆರ್.ಕೆ.ಡಬ್ಲ್ಯೂಡೆವಲಪರ್ ಲಿಮಿಟೆಡ್, ಕಂಪನಿ 2014-15ರಲ್ಲಿ ಬಿಜೆಪಿಗೆ 10 ಕೋಟಿ ರೂ. ನೀಡಿದೆ. ಇದೇ ಆರ್.ಕೆ.ಡಬ್ಲ್ಯು ಕಂಪನಿ ಈಗ ಭಯೋತ್ಪಾದಕರೊಂದಿಗೆ ನಂಟು ಹೊಂದಿದೆ ಎಂದು ತನಿಖೆ ನಡೆಸುತ್ತಿರುವ ಇಡಿ ಬೆಚ್ಚಿ ಬೀಳಿಸುವ ಮಾಹಿತಿಯನ್ನು ಹೊರಹಾಕಿದೆ. ಆರ್.ಕೆ.ಡಬ್ಲ್ಯು ಕಂಪನಿ ಭಯೋತ್ಪಾದಕರ ನಿಧಿಗೆ ಹಣ ವರ್ಗಾಯಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ.

2018ರಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಗುರುತಿಸಲಾಗದ ರಾಜಕೀಯ ಪಕ್ಷಕ್ಕೆ ಅಥವಾ ಪಕ್ಷಗಳಿಗೆ ಅವಧಿ ಮುಗಿದ ಚುನಾವಣಾ ಬಾಂಡ್ ಗಳನ್ನು ಪಡೆಯಲು ಹಣಕಾಸು ಇಲಾಖೆ ಬಾಗಿಲು ತೆರೆದಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಆರ್.ಕೆ.ಡಬ್ಲ್ಯುಡೆವಲಪರ್ ಲಿ. ಕಂಪನಿಯು 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಇಕ್ಬಾಲ್ ಮೆನನ್ ಅಲಿಯಾಸ್ ಇಕ್ಬಾಲ್ ಮಿರ್ಚಿಯೊಂದಿಗೆ ವಹಿವಾಟು ನಡೆಸಿದೆ. ಅಲ್ಲದೇ ಇಕ್ಬಾಲ್ ಮಿರ್ಚಿಯ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮುಂದುವರೆಸಿದೆ.

ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪ ಹೊತ್ತಿರುವ ಇಕ್ಬಾಲ್ ಮಿರ್ಚಿಯಿಂದ ಎನ್.ಸಿ.ಪಿ ನಾಯಕ ಪ್ರಫುಲ್ ಪಟೇಲ್ ಪತ್ನಿ ಆಸ್ತಿ ಖರೀದಿಸಿರುವ ಕುರಿತು ಗೃಹ ಸಚಿವ ಅಮಿತ್ ಶಾ ಆರೋಪ ಮಾಡಿದ ಒಂದು ವಾರದಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಆರ್.ಕೆ.ಡಬ್ಲ್ಯೂ ಕಂಪನಿ ಅತಿ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬಿಜೆಪಿ ಕಂಪನಿಯಿಂದ ಹಲವು ಬಾರಿ ಚುನಾವಣಾ ಬಾಂಡ್ ಗಳನ್ನು ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಭಯೋತ್ಪಾದಕರೊಂದಿಗೆ ಹಣಕಾಸು ವಹಿವಾಟು ನಡೆಸಿರುವ ಆರೋಪ ಹೊತ್ತಿರುವ ಕಂಪನಿ ವಿರುದ್ಧ ತನಿಖೆ ನಡೆಯುತ್ತಿರುವಾಗಲೇ, ಅದೇ ಕಂಪನಿಯಿಂದ ಬಿಜೆಪಿ ಚುನಾವಣಾ ಬಾಂಡ್ ಪಡೆದಿದ್ದು, ದೊಡ್ಡ ಹಗರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಆರ್.ಕೆ.ಡಬ್ಲ್ಯೂ ಡೆವೆಲಪರ್ ಲಿ. ಕಂಪನಿಯ ಮಾಜಿ ನಿರ್ದೇಶಕ ರಂಜಿತ್ ಬಿಂದ್ರಾ ಭೂಗತ ಜಗತ್ತಿನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಹಿನ್ನೆಲೆ ಬಂಧಿಸಲಾಗಿದೆ. ಇದೇ ವೇಳೆ ಆರ್.ಕೆ.ಡಬ್ಲ್ಯೂ ಕಂಪನಿ ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಮಾರಾಟ ಮಾಡಿದ್ದು, ಇದಕ್ಕಾಗಿ ಬಿಂದ್ರಾ 30 ಕೋಟಿ ರೂಪಾಯಿ ಕಮಿಷನ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಖರೀದಿಸಿದೆ ಎಂದು ಇಡಿ ಆರೋಪಿಸಿದೆ. ಬಿಜೆಪಿ ಚುನಾವಣಾ ಆಯೋಗದಲ್ಲಿ ಘೋಷಿಸಿಕೊಂಡಿರುವಂತೆ ಸ್ಕಿಲ್ ರಿಯಲ್ ಟರ್ ಪ್ರೈ. ಲಿಮಿಟೆಡ್ ನಿಂದ 2 ಕೋಟಿ ರೂಪಾಯಿ ಪಡೆದಿರುವುದಾಗಿ ಹೇಳಿದೆ. ಇದು ಸನ್ ಬ್ಲಿಂಕ್ ಕಂಪನಿಯ ಸೋದರ ಕಂಪನಿಯಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇಂಟರೆಸ್ಟಿಂಗ್ ವಿಷಯ ಅಂದರೆ ಇಕ್ಬಾಲ್ ಮಿರ್ಚಿ ವಿಷಯ ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಸ್ತಾಪವಾಗಿತ್ತು. ಮಿರ್ಚಿ ಮತ್ತು ಸನ್ ಬ್ಲಿಂಕ್ ಮಿಲೇನಿಯಂ ಡೆವಲಪರ್ಸ್ ನಡುವೆ ಆಸ್ತಿ ವಹಿವಾಟು ನಡೆದಿದೆ ಎಂದು ಆರೋಪಿಸಿರುವ ಹಿನ್ನೆಲೆ ಇಡಿ ತನಿಖೆಯನ್ನು ತೀವ್ರಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...