Homeಮುಖಪುಟಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

- Advertisement -
- Advertisement -

ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಪಡೆಯುವ ಚುನಾವಣಾ ಬಾಂಡ್ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಬೃಹತ್ ಕಾರ್ಪೋರೇಟ್ ಕಂಪನಿಗಳಿಂದ ಬಿಜೆಪಿ ಪಡೆದಿರುವ ವಿವಿಧ ಚುನಾವಣಾ ಬಾಂಡ್ ವಿಷಯವನ್ನು ಗೌಪ್ಯವಾಗಿಟ್ಟಿರುವ ವಿಷಯ ಪ್ರಸ್ತಾಪಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಚುನಾವಣಾ ಬಾಂಡ್ ಪಡೆಯುವಲ್ಲಿ ದೊಡ್ಡ ಹಗರಣ ನಡೆದಿದೆ. ಬಿಜೆಪಿ ಚುನಾವಣಾ ಬಾಂಡ್ ಗಳ ಮೂಲಕ ಹಣ ಪಡೆದು ಭ್ರಷ್ಟಾಚಾರವನ್ನು ಅಧಿಕೃತಗೊಳಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

‘ದಿ ವೈರ್’ ಮತ್ತು ‘ನ್ಯಾಷನಲ್ ಹೆರಾಲ್ಡ್’ ಆನ್ ಲೈನ್ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟಗೊಂಡಿದೆ. 2014-15ನೇ ಸಾಲಿನಲ್ಲಿ ಬಿಜೆಪಿ ಹಣಕಾಸು ನಿರ್ವಹಣೆ ವೇಳೆ ಯಾವ ಯಾವ ಕಂಪನಿಗಳಿಂದ ಚುನಾವಣಾ ಬಾಂಡ್ ಗಳನ್ನು ಸ್ವೀಕರಿಸಿದೆ ಮತ್ತು ಚುನಾವಣಾ ಆಯೋಗಕ್ಕೆ ನೀಡಿದ್ದ ಮಾಹಿತಿ ಏನಿತ್ತು ಎಂಬುದನ್ನು ಬಹಿರಂಗಪಡಿಸಿವೆ.

ಭಯೋತ್ಪಾದನೆಗೆ ಹಣ ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ  ಕಂಪನಿಯಿಂದಲೂ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ 10 ಕೋಟಿ ರೂಪಾಯಿ ದೇಣಿಗೆ ಪಡೆದುಕೊಂಡಿದೆ. ಇದೀಗ ಪ್ರಮುಖ ವಿವಾದದಕ್ಕೆ ಕಾರಣವಾಗಿದೆ. ಒಂದು ಕಂಪನಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಕ್ಷಕ್ಕೆ ದೇಣಿಗೆ ನೀಡಿರುವುದು ಇದೇ ಮೊದಲು. ಬಿಜೆಪಿಗೆ 10 ಕೋಟಿ ರೂಪಾಯಿ ದೇಣಿಗೆ ನೀಡಿರುವ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಭಯೋತ್ಪಾದಕರೊಂದಿಗೆ ಕಂಪನಿ ನಂಟು ಹೊಂದಿರುವ ಸಂಗತಿಯನ್ನು ಇಡಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 743 ಕೋಟಿ ಪಾರ್ಟಿ ಫಂಡ್‌ ಪಡೆದ ಬಿಜೆಪಿ: ಇತರ ಪಕ್ಷಗಳಿಗಿಂತ ಮೂರು ಪಟ್ಟು ಹೆಚ್ಚು!

ಆರ್.ಕೆ.ಡಬ್ಲ್ಯೂಡೆವಲಪರ್ ಲಿಮಿಟೆಡ್, ಕಂಪನಿ 2014-15ರಲ್ಲಿ ಬಿಜೆಪಿಗೆ 10 ಕೋಟಿ ರೂ. ನೀಡಿದೆ. ಇದೇ ಆರ್.ಕೆ.ಡಬ್ಲ್ಯು ಕಂಪನಿ ಈಗ ಭಯೋತ್ಪಾದಕರೊಂದಿಗೆ ನಂಟು ಹೊಂದಿದೆ ಎಂದು ತನಿಖೆ ನಡೆಸುತ್ತಿರುವ ಇಡಿ ಬೆಚ್ಚಿ ಬೀಳಿಸುವ ಮಾಹಿತಿಯನ್ನು ಹೊರಹಾಕಿದೆ. ಆರ್.ಕೆ.ಡಬ್ಲ್ಯು ಕಂಪನಿ ಭಯೋತ್ಪಾದಕರ ನಿಧಿಗೆ ಹಣ ವರ್ಗಾಯಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ.

2018ರಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಗುರುತಿಸಲಾಗದ ರಾಜಕೀಯ ಪಕ್ಷಕ್ಕೆ ಅಥವಾ ಪಕ್ಷಗಳಿಗೆ ಅವಧಿ ಮುಗಿದ ಚುನಾವಣಾ ಬಾಂಡ್ ಗಳನ್ನು ಪಡೆಯಲು ಹಣಕಾಸು ಇಲಾಖೆ ಬಾಗಿಲು ತೆರೆದಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಆರ್.ಕೆ.ಡಬ್ಲ್ಯುಡೆವಲಪರ್ ಲಿ. ಕಂಪನಿಯು 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಇಕ್ಬಾಲ್ ಮೆನನ್ ಅಲಿಯಾಸ್ ಇಕ್ಬಾಲ್ ಮಿರ್ಚಿಯೊಂದಿಗೆ ವಹಿವಾಟು ನಡೆಸಿದೆ. ಅಲ್ಲದೇ ಇಕ್ಬಾಲ್ ಮಿರ್ಚಿಯ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮುಂದುವರೆಸಿದೆ.

ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪ ಹೊತ್ತಿರುವ ಇಕ್ಬಾಲ್ ಮಿರ್ಚಿಯಿಂದ ಎನ್.ಸಿ.ಪಿ ನಾಯಕ ಪ್ರಫುಲ್ ಪಟೇಲ್ ಪತ್ನಿ ಆಸ್ತಿ ಖರೀದಿಸಿರುವ ಕುರಿತು ಗೃಹ ಸಚಿವ ಅಮಿತ್ ಶಾ ಆರೋಪ ಮಾಡಿದ ಒಂದು ವಾರದಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಆರ್.ಕೆ.ಡಬ್ಲ್ಯೂ ಕಂಪನಿ ಅತಿ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬಿಜೆಪಿ ಕಂಪನಿಯಿಂದ ಹಲವು ಬಾರಿ ಚುನಾವಣಾ ಬಾಂಡ್ ಗಳನ್ನು ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಭಯೋತ್ಪಾದಕರೊಂದಿಗೆ ಹಣಕಾಸು ವಹಿವಾಟು ನಡೆಸಿರುವ ಆರೋಪ ಹೊತ್ತಿರುವ ಕಂಪನಿ ವಿರುದ್ಧ ತನಿಖೆ ನಡೆಯುತ್ತಿರುವಾಗಲೇ, ಅದೇ ಕಂಪನಿಯಿಂದ ಬಿಜೆಪಿ ಚುನಾವಣಾ ಬಾಂಡ್ ಪಡೆದಿದ್ದು, ದೊಡ್ಡ ಹಗರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಆರ್.ಕೆ.ಡಬ್ಲ್ಯೂ ಡೆವೆಲಪರ್ ಲಿ. ಕಂಪನಿಯ ಮಾಜಿ ನಿರ್ದೇಶಕ ರಂಜಿತ್ ಬಿಂದ್ರಾ ಭೂಗತ ಜಗತ್ತಿನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಹಿನ್ನೆಲೆ ಬಂಧಿಸಲಾಗಿದೆ. ಇದೇ ವೇಳೆ ಆರ್.ಕೆ.ಡಬ್ಲ್ಯೂ ಕಂಪನಿ ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಮಾರಾಟ ಮಾಡಿದ್ದು, ಇದಕ್ಕಾಗಿ ಬಿಂದ್ರಾ 30 ಕೋಟಿ ರೂಪಾಯಿ ಕಮಿಷನ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಖರೀದಿಸಿದೆ ಎಂದು ಇಡಿ ಆರೋಪಿಸಿದೆ. ಬಿಜೆಪಿ ಚುನಾವಣಾ ಆಯೋಗದಲ್ಲಿ ಘೋಷಿಸಿಕೊಂಡಿರುವಂತೆ ಸ್ಕಿಲ್ ರಿಯಲ್ ಟರ್ ಪ್ರೈ. ಲಿಮಿಟೆಡ್ ನಿಂದ 2 ಕೋಟಿ ರೂಪಾಯಿ ಪಡೆದಿರುವುದಾಗಿ ಹೇಳಿದೆ. ಇದು ಸನ್ ಬ್ಲಿಂಕ್ ಕಂಪನಿಯ ಸೋದರ ಕಂಪನಿಯಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇಂಟರೆಸ್ಟಿಂಗ್ ವಿಷಯ ಅಂದರೆ ಇಕ್ಬಾಲ್ ಮಿರ್ಚಿ ವಿಷಯ ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಸ್ತಾಪವಾಗಿತ್ತು. ಮಿರ್ಚಿ ಮತ್ತು ಸನ್ ಬ್ಲಿಂಕ್ ಮಿಲೇನಿಯಂ ಡೆವಲಪರ್ಸ್ ನಡುವೆ ಆಸ್ತಿ ವಹಿವಾಟು ನಡೆದಿದೆ ಎಂದು ಆರೋಪಿಸಿರುವ ಹಿನ್ನೆಲೆ ಇಡಿ ತನಿಖೆಯನ್ನು ತೀವ್ರಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...