Homeಮುಖಪುಟಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

- Advertisement -
- Advertisement -

ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಪಡೆಯುವ ಚುನಾವಣಾ ಬಾಂಡ್ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಬೃಹತ್ ಕಾರ್ಪೋರೇಟ್ ಕಂಪನಿಗಳಿಂದ ಬಿಜೆಪಿ ಪಡೆದಿರುವ ವಿವಿಧ ಚುನಾವಣಾ ಬಾಂಡ್ ವಿಷಯವನ್ನು ಗೌಪ್ಯವಾಗಿಟ್ಟಿರುವ ವಿಷಯ ಪ್ರಸ್ತಾಪಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಚುನಾವಣಾ ಬಾಂಡ್ ಪಡೆಯುವಲ್ಲಿ ದೊಡ್ಡ ಹಗರಣ ನಡೆದಿದೆ. ಬಿಜೆಪಿ ಚುನಾವಣಾ ಬಾಂಡ್ ಗಳ ಮೂಲಕ ಹಣ ಪಡೆದು ಭ್ರಷ್ಟಾಚಾರವನ್ನು ಅಧಿಕೃತಗೊಳಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

‘ದಿ ವೈರ್’ ಮತ್ತು ‘ನ್ಯಾಷನಲ್ ಹೆರಾಲ್ಡ್’ ಆನ್ ಲೈನ್ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟಗೊಂಡಿದೆ. 2014-15ನೇ ಸಾಲಿನಲ್ಲಿ ಬಿಜೆಪಿ ಹಣಕಾಸು ನಿರ್ವಹಣೆ ವೇಳೆ ಯಾವ ಯಾವ ಕಂಪನಿಗಳಿಂದ ಚುನಾವಣಾ ಬಾಂಡ್ ಗಳನ್ನು ಸ್ವೀಕರಿಸಿದೆ ಮತ್ತು ಚುನಾವಣಾ ಆಯೋಗಕ್ಕೆ ನೀಡಿದ್ದ ಮಾಹಿತಿ ಏನಿತ್ತು ಎಂಬುದನ್ನು ಬಹಿರಂಗಪಡಿಸಿವೆ.

ಭಯೋತ್ಪಾದನೆಗೆ ಹಣ ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ  ಕಂಪನಿಯಿಂದಲೂ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ 10 ಕೋಟಿ ರೂಪಾಯಿ ದೇಣಿಗೆ ಪಡೆದುಕೊಂಡಿದೆ. ಇದೀಗ ಪ್ರಮುಖ ವಿವಾದದಕ್ಕೆ ಕಾರಣವಾಗಿದೆ. ಒಂದು ಕಂಪನಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಕ್ಷಕ್ಕೆ ದೇಣಿಗೆ ನೀಡಿರುವುದು ಇದೇ ಮೊದಲು. ಬಿಜೆಪಿಗೆ 10 ಕೋಟಿ ರೂಪಾಯಿ ದೇಣಿಗೆ ನೀಡಿರುವ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಭಯೋತ್ಪಾದಕರೊಂದಿಗೆ ಕಂಪನಿ ನಂಟು ಹೊಂದಿರುವ ಸಂಗತಿಯನ್ನು ಇಡಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 743 ಕೋಟಿ ಪಾರ್ಟಿ ಫಂಡ್‌ ಪಡೆದ ಬಿಜೆಪಿ: ಇತರ ಪಕ್ಷಗಳಿಗಿಂತ ಮೂರು ಪಟ್ಟು ಹೆಚ್ಚು!

ಆರ್.ಕೆ.ಡಬ್ಲ್ಯೂಡೆವಲಪರ್ ಲಿಮಿಟೆಡ್, ಕಂಪನಿ 2014-15ರಲ್ಲಿ ಬಿಜೆಪಿಗೆ 10 ಕೋಟಿ ರೂ. ನೀಡಿದೆ. ಇದೇ ಆರ್.ಕೆ.ಡಬ್ಲ್ಯು ಕಂಪನಿ ಈಗ ಭಯೋತ್ಪಾದಕರೊಂದಿಗೆ ನಂಟು ಹೊಂದಿದೆ ಎಂದು ತನಿಖೆ ನಡೆಸುತ್ತಿರುವ ಇಡಿ ಬೆಚ್ಚಿ ಬೀಳಿಸುವ ಮಾಹಿತಿಯನ್ನು ಹೊರಹಾಕಿದೆ. ಆರ್.ಕೆ.ಡಬ್ಲ್ಯು ಕಂಪನಿ ಭಯೋತ್ಪಾದಕರ ನಿಧಿಗೆ ಹಣ ವರ್ಗಾಯಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ.

2018ರಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಗುರುತಿಸಲಾಗದ ರಾಜಕೀಯ ಪಕ್ಷಕ್ಕೆ ಅಥವಾ ಪಕ್ಷಗಳಿಗೆ ಅವಧಿ ಮುಗಿದ ಚುನಾವಣಾ ಬಾಂಡ್ ಗಳನ್ನು ಪಡೆಯಲು ಹಣಕಾಸು ಇಲಾಖೆ ಬಾಗಿಲು ತೆರೆದಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಆರ್.ಕೆ.ಡಬ್ಲ್ಯುಡೆವಲಪರ್ ಲಿ. ಕಂಪನಿಯು 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಇಕ್ಬಾಲ್ ಮೆನನ್ ಅಲಿಯಾಸ್ ಇಕ್ಬಾಲ್ ಮಿರ್ಚಿಯೊಂದಿಗೆ ವಹಿವಾಟು ನಡೆಸಿದೆ. ಅಲ್ಲದೇ ಇಕ್ಬಾಲ್ ಮಿರ್ಚಿಯ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮುಂದುವರೆಸಿದೆ.

ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪ ಹೊತ್ತಿರುವ ಇಕ್ಬಾಲ್ ಮಿರ್ಚಿಯಿಂದ ಎನ್.ಸಿ.ಪಿ ನಾಯಕ ಪ್ರಫುಲ್ ಪಟೇಲ್ ಪತ್ನಿ ಆಸ್ತಿ ಖರೀದಿಸಿರುವ ಕುರಿತು ಗೃಹ ಸಚಿವ ಅಮಿತ್ ಶಾ ಆರೋಪ ಮಾಡಿದ ಒಂದು ವಾರದಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಆರ್.ಕೆ.ಡಬ್ಲ್ಯೂ ಕಂಪನಿ ಅತಿ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬಿಜೆಪಿ ಕಂಪನಿಯಿಂದ ಹಲವು ಬಾರಿ ಚುನಾವಣಾ ಬಾಂಡ್ ಗಳನ್ನು ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಭಯೋತ್ಪಾದಕರೊಂದಿಗೆ ಹಣಕಾಸು ವಹಿವಾಟು ನಡೆಸಿರುವ ಆರೋಪ ಹೊತ್ತಿರುವ ಕಂಪನಿ ವಿರುದ್ಧ ತನಿಖೆ ನಡೆಯುತ್ತಿರುವಾಗಲೇ, ಅದೇ ಕಂಪನಿಯಿಂದ ಬಿಜೆಪಿ ಚುನಾವಣಾ ಬಾಂಡ್ ಪಡೆದಿದ್ದು, ದೊಡ್ಡ ಹಗರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಆರ್.ಕೆ.ಡಬ್ಲ್ಯೂ ಡೆವೆಲಪರ್ ಲಿ. ಕಂಪನಿಯ ಮಾಜಿ ನಿರ್ದೇಶಕ ರಂಜಿತ್ ಬಿಂದ್ರಾ ಭೂಗತ ಜಗತ್ತಿನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಹಿನ್ನೆಲೆ ಬಂಧಿಸಲಾಗಿದೆ. ಇದೇ ವೇಳೆ ಆರ್.ಕೆ.ಡಬ್ಲ್ಯೂ ಕಂಪನಿ ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಮಾರಾಟ ಮಾಡಿದ್ದು, ಇದಕ್ಕಾಗಿ ಬಿಂದ್ರಾ 30 ಕೋಟಿ ರೂಪಾಯಿ ಕಮಿಷನ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಖರೀದಿಸಿದೆ ಎಂದು ಇಡಿ ಆರೋಪಿಸಿದೆ. ಬಿಜೆಪಿ ಚುನಾವಣಾ ಆಯೋಗದಲ್ಲಿ ಘೋಷಿಸಿಕೊಂಡಿರುವಂತೆ ಸ್ಕಿಲ್ ರಿಯಲ್ ಟರ್ ಪ್ರೈ. ಲಿಮಿಟೆಡ್ ನಿಂದ 2 ಕೋಟಿ ರೂಪಾಯಿ ಪಡೆದಿರುವುದಾಗಿ ಹೇಳಿದೆ. ಇದು ಸನ್ ಬ್ಲಿಂಕ್ ಕಂಪನಿಯ ಸೋದರ ಕಂಪನಿಯಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇಂಟರೆಸ್ಟಿಂಗ್ ವಿಷಯ ಅಂದರೆ ಇಕ್ಬಾಲ್ ಮಿರ್ಚಿ ವಿಷಯ ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಸ್ತಾಪವಾಗಿತ್ತು. ಮಿರ್ಚಿ ಮತ್ತು ಸನ್ ಬ್ಲಿಂಕ್ ಮಿಲೇನಿಯಂ ಡೆವಲಪರ್ಸ್ ನಡುವೆ ಆಸ್ತಿ ವಹಿವಾಟು ನಡೆದಿದೆ ಎಂದು ಆರೋಪಿಸಿರುವ ಹಿನ್ನೆಲೆ ಇಡಿ ತನಿಖೆಯನ್ನು ತೀವ್ರಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...