Homeಮುಖಪುಟಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

- Advertisement -
- Advertisement -

ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಪಡೆಯುವ ಚುನಾವಣಾ ಬಾಂಡ್ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಬೃಹತ್ ಕಾರ್ಪೋರೇಟ್ ಕಂಪನಿಗಳಿಂದ ಬಿಜೆಪಿ ಪಡೆದಿರುವ ವಿವಿಧ ಚುನಾವಣಾ ಬಾಂಡ್ ವಿಷಯವನ್ನು ಗೌಪ್ಯವಾಗಿಟ್ಟಿರುವ ವಿಷಯ ಪ್ರಸ್ತಾಪಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಚುನಾವಣಾ ಬಾಂಡ್ ಪಡೆಯುವಲ್ಲಿ ದೊಡ್ಡ ಹಗರಣ ನಡೆದಿದೆ. ಬಿಜೆಪಿ ಚುನಾವಣಾ ಬಾಂಡ್ ಗಳ ಮೂಲಕ ಹಣ ಪಡೆದು ಭ್ರಷ್ಟಾಚಾರವನ್ನು ಅಧಿಕೃತಗೊಳಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

‘ದಿ ವೈರ್’ ಮತ್ತು ‘ನ್ಯಾಷನಲ್ ಹೆರಾಲ್ಡ್’ ಆನ್ ಲೈನ್ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟಗೊಂಡಿದೆ. 2014-15ನೇ ಸಾಲಿನಲ್ಲಿ ಬಿಜೆಪಿ ಹಣಕಾಸು ನಿರ್ವಹಣೆ ವೇಳೆ ಯಾವ ಯಾವ ಕಂಪನಿಗಳಿಂದ ಚುನಾವಣಾ ಬಾಂಡ್ ಗಳನ್ನು ಸ್ವೀಕರಿಸಿದೆ ಮತ್ತು ಚುನಾವಣಾ ಆಯೋಗಕ್ಕೆ ನೀಡಿದ್ದ ಮಾಹಿತಿ ಏನಿತ್ತು ಎಂಬುದನ್ನು ಬಹಿರಂಗಪಡಿಸಿವೆ.

ಭಯೋತ್ಪಾದನೆಗೆ ಹಣ ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ  ಕಂಪನಿಯಿಂದಲೂ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ 10 ಕೋಟಿ ರೂಪಾಯಿ ದೇಣಿಗೆ ಪಡೆದುಕೊಂಡಿದೆ. ಇದೀಗ ಪ್ರಮುಖ ವಿವಾದದಕ್ಕೆ ಕಾರಣವಾಗಿದೆ. ಒಂದು ಕಂಪನಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಕ್ಷಕ್ಕೆ ದೇಣಿಗೆ ನೀಡಿರುವುದು ಇದೇ ಮೊದಲು. ಬಿಜೆಪಿಗೆ 10 ಕೋಟಿ ರೂಪಾಯಿ ದೇಣಿಗೆ ನೀಡಿರುವ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಭಯೋತ್ಪಾದಕರೊಂದಿಗೆ ಕಂಪನಿ ನಂಟು ಹೊಂದಿರುವ ಸಂಗತಿಯನ್ನು ಇಡಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 743 ಕೋಟಿ ಪಾರ್ಟಿ ಫಂಡ್‌ ಪಡೆದ ಬಿಜೆಪಿ: ಇತರ ಪಕ್ಷಗಳಿಗಿಂತ ಮೂರು ಪಟ್ಟು ಹೆಚ್ಚು!

ಆರ್.ಕೆ.ಡಬ್ಲ್ಯೂಡೆವಲಪರ್ ಲಿಮಿಟೆಡ್, ಕಂಪನಿ 2014-15ರಲ್ಲಿ ಬಿಜೆಪಿಗೆ 10 ಕೋಟಿ ರೂ. ನೀಡಿದೆ. ಇದೇ ಆರ್.ಕೆ.ಡಬ್ಲ್ಯು ಕಂಪನಿ ಈಗ ಭಯೋತ್ಪಾದಕರೊಂದಿಗೆ ನಂಟು ಹೊಂದಿದೆ ಎಂದು ತನಿಖೆ ನಡೆಸುತ್ತಿರುವ ಇಡಿ ಬೆಚ್ಚಿ ಬೀಳಿಸುವ ಮಾಹಿತಿಯನ್ನು ಹೊರಹಾಕಿದೆ. ಆರ್.ಕೆ.ಡಬ್ಲ್ಯು ಕಂಪನಿ ಭಯೋತ್ಪಾದಕರ ನಿಧಿಗೆ ಹಣ ವರ್ಗಾಯಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ.

2018ರಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಗುರುತಿಸಲಾಗದ ರಾಜಕೀಯ ಪಕ್ಷಕ್ಕೆ ಅಥವಾ ಪಕ್ಷಗಳಿಗೆ ಅವಧಿ ಮುಗಿದ ಚುನಾವಣಾ ಬಾಂಡ್ ಗಳನ್ನು ಪಡೆಯಲು ಹಣಕಾಸು ಇಲಾಖೆ ಬಾಗಿಲು ತೆರೆದಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಆರ್.ಕೆ.ಡಬ್ಲ್ಯುಡೆವಲಪರ್ ಲಿ. ಕಂಪನಿಯು 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಇಕ್ಬಾಲ್ ಮೆನನ್ ಅಲಿಯಾಸ್ ಇಕ್ಬಾಲ್ ಮಿರ್ಚಿಯೊಂದಿಗೆ ವಹಿವಾಟು ನಡೆಸಿದೆ. ಅಲ್ಲದೇ ಇಕ್ಬಾಲ್ ಮಿರ್ಚಿಯ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮುಂದುವರೆಸಿದೆ.

ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪ ಹೊತ್ತಿರುವ ಇಕ್ಬಾಲ್ ಮಿರ್ಚಿಯಿಂದ ಎನ್.ಸಿ.ಪಿ ನಾಯಕ ಪ್ರಫುಲ್ ಪಟೇಲ್ ಪತ್ನಿ ಆಸ್ತಿ ಖರೀದಿಸಿರುವ ಕುರಿತು ಗೃಹ ಸಚಿವ ಅಮಿತ್ ಶಾ ಆರೋಪ ಮಾಡಿದ ಒಂದು ವಾರದಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಆರ್.ಕೆ.ಡಬ್ಲ್ಯೂ ಕಂಪನಿ ಅತಿ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬಿಜೆಪಿ ಕಂಪನಿಯಿಂದ ಹಲವು ಬಾರಿ ಚುನಾವಣಾ ಬಾಂಡ್ ಗಳನ್ನು ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಭಯೋತ್ಪಾದಕರೊಂದಿಗೆ ಹಣಕಾಸು ವಹಿವಾಟು ನಡೆಸಿರುವ ಆರೋಪ ಹೊತ್ತಿರುವ ಕಂಪನಿ ವಿರುದ್ಧ ತನಿಖೆ ನಡೆಯುತ್ತಿರುವಾಗಲೇ, ಅದೇ ಕಂಪನಿಯಿಂದ ಬಿಜೆಪಿ ಚುನಾವಣಾ ಬಾಂಡ್ ಪಡೆದಿದ್ದು, ದೊಡ್ಡ ಹಗರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಆರ್.ಕೆ.ಡಬ್ಲ್ಯೂ ಡೆವೆಲಪರ್ ಲಿ. ಕಂಪನಿಯ ಮಾಜಿ ನಿರ್ದೇಶಕ ರಂಜಿತ್ ಬಿಂದ್ರಾ ಭೂಗತ ಜಗತ್ತಿನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಹಿನ್ನೆಲೆ ಬಂಧಿಸಲಾಗಿದೆ. ಇದೇ ವೇಳೆ ಆರ್.ಕೆ.ಡಬ್ಲ್ಯೂ ಕಂಪನಿ ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಮಾರಾಟ ಮಾಡಿದ್ದು, ಇದಕ್ಕಾಗಿ ಬಿಂದ್ರಾ 30 ಕೋಟಿ ರೂಪಾಯಿ ಕಮಿಷನ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಇಕ್ಬಾಲ್ ಮಿರ್ಚಿ ಆಸ್ತಿಯನ್ನು ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಖರೀದಿಸಿದೆ ಎಂದು ಇಡಿ ಆರೋಪಿಸಿದೆ. ಬಿಜೆಪಿ ಚುನಾವಣಾ ಆಯೋಗದಲ್ಲಿ ಘೋಷಿಸಿಕೊಂಡಿರುವಂತೆ ಸ್ಕಿಲ್ ರಿಯಲ್ ಟರ್ ಪ್ರೈ. ಲಿಮಿಟೆಡ್ ನಿಂದ 2 ಕೋಟಿ ರೂಪಾಯಿ ಪಡೆದಿರುವುದಾಗಿ ಹೇಳಿದೆ. ಇದು ಸನ್ ಬ್ಲಿಂಕ್ ಕಂಪನಿಯ ಸೋದರ ಕಂಪನಿಯಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇಂಟರೆಸ್ಟಿಂಗ್ ವಿಷಯ ಅಂದರೆ ಇಕ್ಬಾಲ್ ಮಿರ್ಚಿ ವಿಷಯ ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಸ್ತಾಪವಾಗಿತ್ತು. ಮಿರ್ಚಿ ಮತ್ತು ಸನ್ ಬ್ಲಿಂಕ್ ಮಿಲೇನಿಯಂ ಡೆವಲಪರ್ಸ್ ನಡುವೆ ಆಸ್ತಿ ವಹಿವಾಟು ನಡೆದಿದೆ ಎಂದು ಆರೋಪಿಸಿರುವ ಹಿನ್ನೆಲೆ ಇಡಿ ತನಿಖೆಯನ್ನು ತೀವ್ರಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...