Homeಮುಖಪುಟಬಿಜೆಪಿ ಪ್ರಣಾಳಿಕೆಯಲ್ಲಿ 'ಅಲ್ಪಸಂಖ್ಯಾತರು' ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

- Advertisement -
- Advertisement -

ಬಿಜೆಪಿ ಅಲ್ಪಸಂಖ್ಯಾತರನ್ನು ದ್ವೇಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ ‘ಅಲ್ಪಸಂಖ್ಯಾತರು’ ಎಂಬ ಪದವನ್ನು ಕೂಡ ಬಳಸಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಮುಸ್ಲಿಮರನ್ನು ಅಂಚಿಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳದ ಜೊತೆಗಿನ ಎಐಎಂಐಎಂ ಮೈತ್ರಿ ವಿಧಾನಸಭೆ ಚುನಾವಣೆಯಲ್ಲಿಯೂ ಮುಂದುವರಿಯುತ್ತದೆ ಮತ್ತು ಮಹಾರಾಷ್ಟ್ರದ ಅಕೋಲಾದಲ್ಲಿ ಪ್ರಕಾಶ್ ಅಂಬೇಡ್ಕರ್ ಮತ್ತು ಅಮರಾವತಿಯಲ್ಲಿ ಆನಂದ್ ಅಂಬೇಡ್ಕರ್ ಅವರನ್ನು ಪಕ್ಷ ಬೆಂಬಲಿಸುತ್ತದೆ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ನಾನು ಏಪ್ರಿಲ್ 17ರಂದು ವಿವಿಧ ಪತ್ರಿಕೆಗಳಲ್ಲಿ ಬಿಜೆಪಿಯ ಜಾಹೀರಾತನ್ನು ನೋಡಿದ್ದೇನೆ. ಅವರು ಸರ್ಕಾರದಿಂದ ಸಾಲ ಅಥವಾ ಉದ್ಯಮ ಪ್ರಾರಂಭಿಸಲು ಸಹಾಯ ಮಾಡುವ ಬಗ್ಗೆ ಮಾತನಾಡುವಾಗ ದಯವಿಟ್ಟು ನೋಡಿ, ಅದರಲ್ಲಿ ಎಸ್‌ಟಿ ಮತ್ತು ಒಬಿಸಿ ಎಂದು ಹೇಳಲಾಗಿದೆ. ಮುಸ್ಲಿಮರ ಹೆಸರು ಬಿಡಿ ಕನಿಷ್ಠ ಅಲ್ಪಸಂಖ್ಯಾತರು ಎಂಬ ಪದವನ್ನು ಕೂಡ ಉಲ್ಲೇಖಿಸಲು ಬಿಜೆಪಿ ನಿರಾಕರಿಸಿದೆ. ಅಲ್ಪಸಂಖ್ಯಾತರು ಎಂಬ ಪದವನ್ನು ಭಾರತದ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ ಮತ್ತು ಬಿಜೆಪಿಯು ‘ಎಂ’ ಪದದ ಬಗ್ಗೆ ಅಪಾರ ದ್ವೇಷವನ್ನು ಹೊಂದಿದೆ ಎಂದು ಓವೈಸಿ ಹೇಳಿದ್ದಾರೆ.

ಅವರು ಅಲ್ಪಸಂಖ್ಯಾತರು ಎಂಬ ಪದವನ್ನು ಉಲ್ಲೇಖಿಸಿಲ್ಲ, ಹಿಂದುಳಿದ ಸಮುದಾಯಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಅವರು ಹೇಳುತ್ತಾರೆ. ದಲಿತರು ಮತ್ತು ಮುಸ್ಲಿಮರಲ್ಲಿ ಶಾಲೆ ಬಿಡುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮುಸ್ಲಿಂ ಸಮುದಾಯದಲ್ಲಿ ಶಾಲೆ ಬಿಡುತ್ತಿರುವವರ ಪ್ರಮಾಣ ಹೆಚ್ಚಾಗಿರುವುದನ್ನು ಬಿಜೆಪಿ ಖಚಿತಪಡಿಸಿದೆ ಎಂದು ಅವರು ಹೇಳಿದ್ದಾರೆ.

ಉದ್ಯೋಗದ ಕೊರತೆಯಿಂದ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಿದೆ, ಅಲ್ಪಸಂಖ್ಯಾತರ ಮೇಲಿನ ದ್ವೇಷ ಹೆಚ್ಚುತ್ತಿದೆ ಮತ್ತು ಇದು ಸಂವಿಧಾನಕ್ಕೆ ಬೆದರಿಕೆಯಾಗಿದೆ ಎಂದು ಆರೋಪಿಸಿದ ಅಸಾದುದ್ದೀನ್ ಓವೈಸಿ  ಯಾವುದೇ ಪಕ್ಷಕ್ಕೆ ಮತ ಹಾಕುವ ಮೊದಲು ಜನರು ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದರು.

ಬಿಜೆಪಿಯು ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಬಗ್ಗೆ ಮಾತನಾಡಬಹುದು, ಆದರೆ ಬೆಳವಣಿಗೆಯ ವಿಷಯಕ್ಕೆ ಬಂದಾಗ ತಲಾ ಆದಾಯವನ್ನು ಪರಿಗಣಿಸಬೇಕು. ಈ ಹಿಂದೆ ತಮಿಳುನಾಡಿನಲ್ಲಿ ತಮ್ಮ ಪಕ್ಷ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಚರ್ಚೆಗಳು ನಡೆದಿತ್ತು. ಪಳನಿಸ್ವಾಮಿ ನೇತೃತ್ವದ ಪಕ್ಷವು ಎನ್‌ಡಿಎಯಿಂದ ಹೊರಬಂದು ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವುದಾಗಿ ಹೇಳಿದ್ದರಿಂದ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅದು ಅತ್ಯಂತ ಶಕ್ತಿಶಾಲಿ ಪಕ್ಷವಾಗಲಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ ಪತ್ನಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

0
ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ...