Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : 71 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ಬಿಹಾರ ವಿಧಾನಸಭೆ ಚುನಾವಣೆ : 71 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಮೂಲಕ ಎರಡು ಹಂತದ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ಎನ್‌ಡಿಎ ಬಣದ ಮೊದಲ ಪಕ್ಷ ಎನಿಸಿಕೊಂಡಿದೆ. ಮೊದಲ ಪಟ್ಟಿಯಲ್ಲಿ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ.

ಚೌಧರಿ ಮುಂಗೇರ್‌ನ ತಾರಾಪುರದಿಂದ ಸ್ಪರ್ಧಿಸಿದರೆ, ಸಿನ್ಹಾ ಲಖಿಸರಾಯ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಜೆಡಿಯುನ ರಾಜೀವ್ ಕುಮಾರ್ ಸಿಂಗ್ 2021ರಲ್ಲಿ ನಡೆದ ಉಪಚುನಾವಣೆಯಲ್ಲಿ ತಾರಾಪುರ ಸ್ಥಾನವನ್ನು ಗೆದ್ದಿದ್ದರು.

71 ಅಭ್ಯರ್ಥಿಗಳ ಪೈಕಿ ಒಂಬತ್ತು ಮಂದಿ ಮಹಿಳೆಯರಿದ್ದಾರೆ. ಬಿಹಾರ ವಿಧಾನಸಭಾ ಸ್ಪೀಕರ್ ನಂದ ಕಿಶೋರ್ ಯಾದವ್ ಅವರ ಹೆಸರು ಪಟ್ಟಿಯಲ್ಲಿಲ್ಲ. ಯಾದವ್ ಅವರ ಬದಲಿಗೆ ಪಾಟ್ನಾ ಸಾಹೇಬ್‌ನಿಂದ ಹೊಸ ಅಭ್ಯರ್ಥಿ ರತ್ನೇಶ್ ಕುಶ್ವಾಹ ಅವರನ್ನು ಕಣಕ್ಕಿಳಿಸಲಾಗಿದೆ.

ವಿಧಾನ ಪರಿಷತ್ ಸದಸ್ಯರಾಗಿರುವ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರಿಗೂ ಟಿಕೆಟ್ ನೀಡಲಾಗಿದೆ. ಅವರು ತಮ್ಮ ತವರು ಜಿಲ್ಲೆಯ ಸಿವಾನ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಪಾಟಲಿಪುತ್ರದ ಮಾಜಿ ಸಂಸದ ರಾಮ್ ಕೃಪಾಲ್ ಯಾದವ್ ಅವರು ದಾನಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮಾಜಿ ಕೇಂದ್ರ ಸಚಿವರೂ ಆಗಿರುವ ರಾಮ್ ಕೃಪಾಲ್ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಹಿರಿಯ ಪುತ್ರಿ ಮಿಸಾ ಭಾರತಿ ವಿರುದ್ಧ ಸೋತಿದ್ದರು.

ಪ್ರಮುಖ ಕ್ಷೇತ್ರಗಳಾದ ಬೆಟ್ಟಿಯಾದಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ರೇಣು ದೇವಿ, ಪರಿಹಾರ್‌ನಿಂದ ಗಾಯತ್ರಿ ದೇವಿ, ಛಾತಾಪುರದಿಂದ ನೀರಜ್ ಕುಮಾರ್ ಸಿಂಗ್ ಬಬ್ಲು ಮತ್ತು ಗಯಾದಿಂದ ಪ್ರೇಮ್ ಕುಮಾರ್‌ ಸ್ಪರ್ಧಿಸಲಿದ್ದಾರೆ.

ಬಿಜೆಪಿ ಹಿಸುವಾ ಸ್ಥಾನವನ್ನು ಉಳಿಸಿಕೊಂಡಿದ್ದು, ಅನಿಲ್ ಕುಮಾರ್ ಅವರನ್ನು ಮತ್ತೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ಮಾಜಿ ಉಪಮುಖ್ಯಮಂತ್ರಿ ತರ್ಕಿಶೋರ್ ಪ್ರಸಾದ್ ಕತಿಹಾರ್‌ನಿಂದ ಸ್ಪರ್ಧಿಸಲಿದ್ದಾರೆ ಮತ್ತು ಅಲೋಕ್ ರಂಜನ್ ಝಾ ಸಹರ್ಸಾದಿಂದ ಸ್ಪರ್ಧೆ ಮಾಡಲಿದ್ದಾರೆ.

ಮಂಗಳವಾರ (ಇಂದು) ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಬೆಳಿಗ್ಗೆ ಹೇಳಿದ್ದರು. ಅದರಂತೆ ಪಟ್ಟಿ ಪ್ರಕಟಿಸಲಾಗಿದೆ.

ಆದಾಗ್ಯೂ, ಬಿಜೆಪಿ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಗೆ ಹಂಚಿಕೆ ಮಾಡಲಾದ ಕೆಲವು ಸ್ಥಾನಗಳ ಬಗ್ಗೆ ಜೆಡಿಯು ಅಸಮಾಧಾನ ವ್ಯಕ್ತಪಡಿಸಿದೆ.

ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಬಿಜೆಪಿ ಮತ್ತು ಜೆಡಿ(ಯು) ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ಆರ್‌ವಿ) ಪಕ್ಷಕ್ಕೆ 29 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದ್ದು, ಜಿತನ್ ರಾಮ್ ಮಾಂಝಿ ಅವರ ಎಚ್‌ಎಎಂ ಮತ್ತು ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಂ ತಲಾ ಆರು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.

ಹರಿಯಾಣ| ಮೃತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...