Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : 71 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ಬಿಹಾರ ವಿಧಾನಸಭೆ ಚುನಾವಣೆ : 71 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಮೂಲಕ ಎರಡು ಹಂತದ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ಎನ್‌ಡಿಎ ಬಣದ ಮೊದಲ ಪಕ್ಷ ಎನಿಸಿಕೊಂಡಿದೆ. ಮೊದಲ ಪಟ್ಟಿಯಲ್ಲಿ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ.

ಚೌಧರಿ ಮುಂಗೇರ್‌ನ ತಾರಾಪುರದಿಂದ ಸ್ಪರ್ಧಿಸಿದರೆ, ಸಿನ್ಹಾ ಲಖಿಸರಾಯ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಜೆಡಿಯುನ ರಾಜೀವ್ ಕುಮಾರ್ ಸಿಂಗ್ 2021ರಲ್ಲಿ ನಡೆದ ಉಪಚುನಾವಣೆಯಲ್ಲಿ ತಾರಾಪುರ ಸ್ಥಾನವನ್ನು ಗೆದ್ದಿದ್ದರು.

71 ಅಭ್ಯರ್ಥಿಗಳ ಪೈಕಿ ಒಂಬತ್ತು ಮಂದಿ ಮಹಿಳೆಯರಿದ್ದಾರೆ. ಬಿಹಾರ ವಿಧಾನಸಭಾ ಸ್ಪೀಕರ್ ನಂದ ಕಿಶೋರ್ ಯಾದವ್ ಅವರ ಹೆಸರು ಪಟ್ಟಿಯಲ್ಲಿಲ್ಲ. ಯಾದವ್ ಅವರ ಬದಲಿಗೆ ಪಾಟ್ನಾ ಸಾಹೇಬ್‌ನಿಂದ ಹೊಸ ಅಭ್ಯರ್ಥಿ ರತ್ನೇಶ್ ಕುಶ್ವಾಹ ಅವರನ್ನು ಕಣಕ್ಕಿಳಿಸಲಾಗಿದೆ.

ವಿಧಾನ ಪರಿಷತ್ ಸದಸ್ಯರಾಗಿರುವ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರಿಗೂ ಟಿಕೆಟ್ ನೀಡಲಾಗಿದೆ. ಅವರು ತಮ್ಮ ತವರು ಜಿಲ್ಲೆಯ ಸಿವಾನ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಪಾಟಲಿಪುತ್ರದ ಮಾಜಿ ಸಂಸದ ರಾಮ್ ಕೃಪಾಲ್ ಯಾದವ್ ಅವರು ದಾನಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮಾಜಿ ಕೇಂದ್ರ ಸಚಿವರೂ ಆಗಿರುವ ರಾಮ್ ಕೃಪಾಲ್ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಹಿರಿಯ ಪುತ್ರಿ ಮಿಸಾ ಭಾರತಿ ವಿರುದ್ಧ ಸೋತಿದ್ದರು.

ಪ್ರಮುಖ ಕ್ಷೇತ್ರಗಳಾದ ಬೆಟ್ಟಿಯಾದಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ರೇಣು ದೇವಿ, ಪರಿಹಾರ್‌ನಿಂದ ಗಾಯತ್ರಿ ದೇವಿ, ಛಾತಾಪುರದಿಂದ ನೀರಜ್ ಕುಮಾರ್ ಸಿಂಗ್ ಬಬ್ಲು ಮತ್ತು ಗಯಾದಿಂದ ಪ್ರೇಮ್ ಕುಮಾರ್‌ ಸ್ಪರ್ಧಿಸಲಿದ್ದಾರೆ.

ಬಿಜೆಪಿ ಹಿಸುವಾ ಸ್ಥಾನವನ್ನು ಉಳಿಸಿಕೊಂಡಿದ್ದು, ಅನಿಲ್ ಕುಮಾರ್ ಅವರನ್ನು ಮತ್ತೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ಮಾಜಿ ಉಪಮುಖ್ಯಮಂತ್ರಿ ತರ್ಕಿಶೋರ್ ಪ್ರಸಾದ್ ಕತಿಹಾರ್‌ನಿಂದ ಸ್ಪರ್ಧಿಸಲಿದ್ದಾರೆ ಮತ್ತು ಅಲೋಕ್ ರಂಜನ್ ಝಾ ಸಹರ್ಸಾದಿಂದ ಸ್ಪರ್ಧೆ ಮಾಡಲಿದ್ದಾರೆ.

ಮಂಗಳವಾರ (ಇಂದು) ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಬೆಳಿಗ್ಗೆ ಹೇಳಿದ್ದರು. ಅದರಂತೆ ಪಟ್ಟಿ ಪ್ರಕಟಿಸಲಾಗಿದೆ.

ಆದಾಗ್ಯೂ, ಬಿಜೆಪಿ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಗೆ ಹಂಚಿಕೆ ಮಾಡಲಾದ ಕೆಲವು ಸ್ಥಾನಗಳ ಬಗ್ಗೆ ಜೆಡಿಯು ಅಸಮಾಧಾನ ವ್ಯಕ್ತಪಡಿಸಿದೆ.

ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಬಿಜೆಪಿ ಮತ್ತು ಜೆಡಿ(ಯು) ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ಆರ್‌ವಿ) ಪಕ್ಷಕ್ಕೆ 29 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದ್ದು, ಜಿತನ್ ರಾಮ್ ಮಾಂಝಿ ಅವರ ಎಚ್‌ಎಎಂ ಮತ್ತು ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಂ ತಲಾ ಆರು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.

ಹರಿಯಾಣ| ಮೃತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...