Homeಕರ್ನಾಟಕಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

- Advertisement -
- Advertisement -

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ಖಾಸಗಿ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ನಾಯಕರು, ಈಗಾಗಲೇ ಆತಂಕದಲ್ಲಿರುವ ವಿದ್ಯಾರ್ಥಿನಿಯರನ್ನು ಮತ್ತಷ್ಟು ಭಯ ಬೀಳಿಸಿ ವಿಕೃತಿ ಮೆರೆದಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಿ ವಿಕೃತಿ ಮೆರೆಯಲಾಗಿದೆ.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದಾರೆ.

ಉಡುಪಿ ಬಾಲಕಿರು ವಿದ್ಯಾರ್ಥಿನಿಯರ ದಾಖಲಾತಿ ವಿವರಗಳನ್ನು ಕಾಲೇಜು ಸೋರಿಕೆ ಮಾಡಿದೆ ಎಂದು ‘ದಿ ಕ್ವಿಂಟ್’ ಜಾಲತಾಣ ವರದಿ ಮಾಡಿತ್ತು. ಈ ಕುರಿತು ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು ತಾವು ಸ್ವೀಕರಿಸುತ್ತಿರುವ ಥ್ರೆಟ್‌ ಕಾಲ್‌ಗಳಿಂದ ಭಯಗೊಂಡಿರುವುದಾಗಿ ಹೇಳಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಗೆ ಸ್ಥಳೀಯ ಶಾಸಕ ರಘುಪತಿ ಭಟ್ ಅಧ್ಯಕ್ಷರಾಗಿದ್ದಾರೆ. ಆದರೆ ಖಾಸಗಿ ವಿವರಗಳು ಹೇಗೆ ಸೋರಿಕೆಯಾದವು ಎಂಬ ಮಾಹಿತಿ ಇರಲಿಲ್ಲ. ಆದರೀಗ ಬಿಜೆಪಿ ನಾಯಕರು, ಬಿಜೆಪಿಯ ಟ್ವಿಟರ್‌ ಖಾತೆಯ ಮೂಲಕ ಖಾಸಗಿ ವಿವರಗಳನ್ನು ಹಂಚಿಕೊಳ್ಳಲಾಗಿದೆ.

“ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು? ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ?” ಎಂದು ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ವಿದ್ಯಾರ್ಥಿನಿಯರ ವಿಳಾಸಗಳನ್ನು ಒಳಗೊಂಡ ಕೋರ್ಟ್ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಇದೇ ರೀತಿಯಲ್ಲಿಯೇ ‘ಬಿಜೆಪಿ ಕರ್ನಾಟಕ’ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

“ನಾನು ಇನ್ನು ಮುಂದೆ ನನ್ನ ಮುಖವನ್ನು ತೋರಿಸಲು ಸೂಕ್ತವೆನಿಸುವುದಿಲ್ಲ. ನಾನು ಹೇಗೆ ಕಾಣುತ್ತೇನೆ ಮತ್ತು ನನ್ನ ಮನೆ ಎಲ್ಲಿದೆ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಯಾರಾದರೂ ನನ್ನನ್ನು ಗುರಿಯಾಗಿಸಿಕೊಂಡರೆ ಏನು ಮಾಡುವುದು?” ಎಂದು ಆ ಹೆಣ್ಣುಮಗಳೊಬ್ಬಳು ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದಳು.

ಮತ್ತೊಬ್ಬ ವಿದ್ಯಾರ್ಥಿನಿ, “ನನ್ನ ಹೆತ್ತವರಿಗೂ ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದಿದ್ದರು.

ವಿದ್ಯಾರ್ಥಿನಿ ಆಲಿಯಾ ಮಾತನಾಡಿ, “ಅವರು ಕೇಸರಿ ಶಾಲು ಧರಿಸುವುದನ್ನು ಬೆಂಬಲಿಸುವ ಮೂಲಕ ಹಿಜಾಬ್‌ಗಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಕೋಮುವಾದಿಕರಿಸಿದ್ದಾರೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುವಂತೆ ಅವರು ಪ್ರೇರೇಪಿಸಿದರು. ಈಗ ಅವರು ಕಾಲೇಜು ಮಾತ್ರವಲ್ಲದೆ ನಮ್ಮ ಮನೆಗಳನ್ನೂ ಆತಂಕಕ್ಕೆ ತಳ್ಳಿದ್ದಾರೆ” ಎಂದು ಆರೋಪಿಸಿದ್ದರು.

“ನಾವು ಹತ್ತನೇ ತರಗತಿಯಲ್ಲಿ ಕಳಪೆ ಸಾಧನೆ ಮಾಡಿದ್ದೇವೆ ಎಂಬ ನಕಲಿ ಮೌಲ್ಯಮಾಪನವನ್ನು ಅವರು ಪ್ರಸಾರ ಮಾಡುತ್ತಿದ್ದಾರೆ. ನಾವು ಈಗ ತರಗತಿಯ ಕಲಿಕೆಯನ್ನು ಕಳೆದುಕೊಳ್ಳುವ ಬಗ್ಗೆ ಅವರು ಏಕೆ ಚಿಂತಿಸುತ್ತಿಲ್ಲ?” ಎಂದು ಬಹಳ ನೊಂದು ಕೇಳಿದ್ದರು ಆಲಿಯಾ.

“ನನ್ನ ತಂದೆ ಆಟೋ ಚಾಲಕ. ಮೊದಲು ಅವರು ನನ್ನನ್ನು ಶ್ರೀಮಂತರು ಎಂದು ದೂಷಿಸಿದರು. ನಾವು ಬಡವರಾಗಿದ್ದೇವೆ. ಇವರು ತೊಂದರೆ ಕೊಡುವವರು ಎಂದು ಹೇಳುತ್ತಿದ್ದಾರೆ” ಎಂದು ಆಲಿಯಾ ನೋವು ತೋಡಿಕೊಂಡಿದ್ದರು.

“ದುಡ್ಡು ತೆಗೆದುಕೊಂಡು ಹಿಜಾಬ್ ಧರಿಸಿ ಬರುವ ಹುಡುಗಿಯರೆಂದು ನಮ್ಮನ್ನು ಅವರು ದೂಷಿಸಿದ್ದಾರೆ. ನಾವು ನಮ್ಮ ಧಾರ್ಮಿಕ ನಂಬಿಕೆಗಾಗಿ ಹಿಜಾಬ್‌ ಧರಿಸುತ್ತೇವೆ ಹೊರತು, ಹಣಕ್ಕಾಗಿ ಅಲ್ಲ” ಎಂದಿದ್ದರು ಶಿಫಾ.

“ಈ ದ್ವೇಷ ಅಭಿಯಾನದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ” ಎಂದು ವಿದ್ಯಾರ್ಥಿಗಳು ಹೇಳಿದ್ದರು. ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವಾಗ ಈ ವಿದ್ಯಾರ್ಥಿಗಳು ಕೆಲವು ದಿನಗಳಿಂದ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ.

“ನಾನು ಕಳೆದುಕೊಂಡ ಮೊದಲ ಸಂಗತಿಯೆಂದರೆ ನನ್ನ ಮಾನಸಿಕ ಶಾಂತಿ. ನಾವು ಮಾನಸಿಕವಾಗಿ ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿದ್ದೇವೆ. ನಾನು ಸಮಯವನ್ನು ಕಳೆದುಕೊಂಡೆ, ಬಹಳಷ್ಟು ಮಾಧ್ಯಮಗಳಿಗೆ ಬೈಟ್‌ಗಳನ್ನು ನೀಡಿದೆ. ನನಗೂ ನರ್ವಸ್ ಆಗಿದೆ. ಇದು ನಿಜವಾಗಿಯೂ ಕಷ್ಟಕರವಾಗಿದೆ” ಎನ್ನುತ್ತಾರೆ ಆಲಿಯಾ. ಪ್ರತಿ ಬಾರಿ ಸಾರ್ವಜನಿಕವಾಗಿ ಮಾತನಾಡುವಾಗ, “ಹೆಚ್ಚಿನ ವಿವಾದವನ್ನು ತಪ್ಪಿಸಲು ತನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತಿದ್ದಾರೆ” ಎನ್ನುತ್ತಾರೆ ವಿದ್ಯಾರ್ಥಿನಿ. ಆದರೆ ಕಾಲೇಜಿನ ಡೇಟಾ ಸೋರಿಕೆಯಿಂದ ಈ ವಿದ್ಯಾರ್ಥಿನಿಯರ ಜೀವನ ಇನ್ನಷ್ಟು ಕಠಿಣವಾಗಿದೆ.

“ನನ್ನ ಮುಸ್ಲಿಮೇತರ ಸ್ನೇಹಿತರು ನಮ್ಮನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ” ಎಂದು ಶಿಫಾ ಹೇಳಿದ್ದರು. ಓದಲು ಕುಳಿತಾಗಲೆಲ್ಲ ಏಕಾಗ್ರತೆ ಸಾಧ್ಯವಾಗುತ್ತಿಲ್ಲ ಎಂದಿದ್ದರು ಶಿಫಾ. ಈಗ ಬಿಜೆಪಿ ನಾಯಕರ ವಿಕೃತಿಯಿಂದ ವಿದ್ಯಾರ್ಥಿನಿಯರು ಮತ್ತಷ್ಟು ಆತಂಕಪಡುವಂತಾಗಿದೆ.


ಇದನ್ನೂ ಓದಿರಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...