Homeಕರ್ನಾಟಕಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

- Advertisement -
- Advertisement -

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ಖಾಸಗಿ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ನಾಯಕರು, ಈಗಾಗಲೇ ಆತಂಕದಲ್ಲಿರುವ ವಿದ್ಯಾರ್ಥಿನಿಯರನ್ನು ಮತ್ತಷ್ಟು ಭಯ ಬೀಳಿಸಿ ವಿಕೃತಿ ಮೆರೆದಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಿ ವಿಕೃತಿ ಮೆರೆಯಲಾಗಿದೆ.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದಾರೆ.

ಉಡುಪಿ ಬಾಲಕಿರು ವಿದ್ಯಾರ್ಥಿನಿಯರ ದಾಖಲಾತಿ ವಿವರಗಳನ್ನು ಕಾಲೇಜು ಸೋರಿಕೆ ಮಾಡಿದೆ ಎಂದು ‘ದಿ ಕ್ವಿಂಟ್’ ಜಾಲತಾಣ ವರದಿ ಮಾಡಿತ್ತು. ಈ ಕುರಿತು ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು ತಾವು ಸ್ವೀಕರಿಸುತ್ತಿರುವ ಥ್ರೆಟ್‌ ಕಾಲ್‌ಗಳಿಂದ ಭಯಗೊಂಡಿರುವುದಾಗಿ ಹೇಳಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಗೆ ಸ್ಥಳೀಯ ಶಾಸಕ ರಘುಪತಿ ಭಟ್ ಅಧ್ಯಕ್ಷರಾಗಿದ್ದಾರೆ. ಆದರೆ ಖಾಸಗಿ ವಿವರಗಳು ಹೇಗೆ ಸೋರಿಕೆಯಾದವು ಎಂಬ ಮಾಹಿತಿ ಇರಲಿಲ್ಲ. ಆದರೀಗ ಬಿಜೆಪಿ ನಾಯಕರು, ಬಿಜೆಪಿಯ ಟ್ವಿಟರ್‌ ಖಾತೆಯ ಮೂಲಕ ಖಾಸಗಿ ವಿವರಗಳನ್ನು ಹಂಚಿಕೊಳ್ಳಲಾಗಿದೆ.

“ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು? ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ?” ಎಂದು ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ವಿದ್ಯಾರ್ಥಿನಿಯರ ವಿಳಾಸಗಳನ್ನು ಒಳಗೊಂಡ ಕೋರ್ಟ್ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಇದೇ ರೀತಿಯಲ್ಲಿಯೇ ‘ಬಿಜೆಪಿ ಕರ್ನಾಟಕ’ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

“ನಾನು ಇನ್ನು ಮುಂದೆ ನನ್ನ ಮುಖವನ್ನು ತೋರಿಸಲು ಸೂಕ್ತವೆನಿಸುವುದಿಲ್ಲ. ನಾನು ಹೇಗೆ ಕಾಣುತ್ತೇನೆ ಮತ್ತು ನನ್ನ ಮನೆ ಎಲ್ಲಿದೆ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಯಾರಾದರೂ ನನ್ನನ್ನು ಗುರಿಯಾಗಿಸಿಕೊಂಡರೆ ಏನು ಮಾಡುವುದು?” ಎಂದು ಆ ಹೆಣ್ಣುಮಗಳೊಬ್ಬಳು ದಿ ಕ್ವಿಂಟ್‌ಗೆ ಪ್ರತಿಕ್ರಿಯಿಸಿದ್ದಳು.

ಮತ್ತೊಬ್ಬ ವಿದ್ಯಾರ್ಥಿನಿ, “ನನ್ನ ಹೆತ್ತವರಿಗೂ ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದಿದ್ದರು.

ವಿದ್ಯಾರ್ಥಿನಿ ಆಲಿಯಾ ಮಾತನಾಡಿ, “ಅವರು ಕೇಸರಿ ಶಾಲು ಧರಿಸುವುದನ್ನು ಬೆಂಬಲಿಸುವ ಮೂಲಕ ಹಿಜಾಬ್‌ಗಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಕೋಮುವಾದಿಕರಿಸಿದ್ದಾರೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುವಂತೆ ಅವರು ಪ್ರೇರೇಪಿಸಿದರು. ಈಗ ಅವರು ಕಾಲೇಜು ಮಾತ್ರವಲ್ಲದೆ ನಮ್ಮ ಮನೆಗಳನ್ನೂ ಆತಂಕಕ್ಕೆ ತಳ್ಳಿದ್ದಾರೆ” ಎಂದು ಆರೋಪಿಸಿದ್ದರು.

“ನಾವು ಹತ್ತನೇ ತರಗತಿಯಲ್ಲಿ ಕಳಪೆ ಸಾಧನೆ ಮಾಡಿದ್ದೇವೆ ಎಂಬ ನಕಲಿ ಮೌಲ್ಯಮಾಪನವನ್ನು ಅವರು ಪ್ರಸಾರ ಮಾಡುತ್ತಿದ್ದಾರೆ. ನಾವು ಈಗ ತರಗತಿಯ ಕಲಿಕೆಯನ್ನು ಕಳೆದುಕೊಳ್ಳುವ ಬಗ್ಗೆ ಅವರು ಏಕೆ ಚಿಂತಿಸುತ್ತಿಲ್ಲ?” ಎಂದು ಬಹಳ ನೊಂದು ಕೇಳಿದ್ದರು ಆಲಿಯಾ.

“ನನ್ನ ತಂದೆ ಆಟೋ ಚಾಲಕ. ಮೊದಲು ಅವರು ನನ್ನನ್ನು ಶ್ರೀಮಂತರು ಎಂದು ದೂಷಿಸಿದರು. ನಾವು ಬಡವರಾಗಿದ್ದೇವೆ. ಇವರು ತೊಂದರೆ ಕೊಡುವವರು ಎಂದು ಹೇಳುತ್ತಿದ್ದಾರೆ” ಎಂದು ಆಲಿಯಾ ನೋವು ತೋಡಿಕೊಂಡಿದ್ದರು.

“ದುಡ್ಡು ತೆಗೆದುಕೊಂಡು ಹಿಜಾಬ್ ಧರಿಸಿ ಬರುವ ಹುಡುಗಿಯರೆಂದು ನಮ್ಮನ್ನು ಅವರು ದೂಷಿಸಿದ್ದಾರೆ. ನಾವು ನಮ್ಮ ಧಾರ್ಮಿಕ ನಂಬಿಕೆಗಾಗಿ ಹಿಜಾಬ್‌ ಧರಿಸುತ್ತೇವೆ ಹೊರತು, ಹಣಕ್ಕಾಗಿ ಅಲ್ಲ” ಎಂದಿದ್ದರು ಶಿಫಾ.

“ಈ ದ್ವೇಷ ಅಭಿಯಾನದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ” ಎಂದು ವಿದ್ಯಾರ್ಥಿಗಳು ಹೇಳಿದ್ದರು. ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವಾಗ ಈ ವಿದ್ಯಾರ್ಥಿಗಳು ಕೆಲವು ದಿನಗಳಿಂದ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ.

“ನಾನು ಕಳೆದುಕೊಂಡ ಮೊದಲ ಸಂಗತಿಯೆಂದರೆ ನನ್ನ ಮಾನಸಿಕ ಶಾಂತಿ. ನಾವು ಮಾನಸಿಕವಾಗಿ ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿದ್ದೇವೆ. ನಾನು ಸಮಯವನ್ನು ಕಳೆದುಕೊಂಡೆ, ಬಹಳಷ್ಟು ಮಾಧ್ಯಮಗಳಿಗೆ ಬೈಟ್‌ಗಳನ್ನು ನೀಡಿದೆ. ನನಗೂ ನರ್ವಸ್ ಆಗಿದೆ. ಇದು ನಿಜವಾಗಿಯೂ ಕಷ್ಟಕರವಾಗಿದೆ” ಎನ್ನುತ್ತಾರೆ ಆಲಿಯಾ. ಪ್ರತಿ ಬಾರಿ ಸಾರ್ವಜನಿಕವಾಗಿ ಮಾತನಾಡುವಾಗ, “ಹೆಚ್ಚಿನ ವಿವಾದವನ್ನು ತಪ್ಪಿಸಲು ತನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತಿದ್ದಾರೆ” ಎನ್ನುತ್ತಾರೆ ವಿದ್ಯಾರ್ಥಿನಿ. ಆದರೆ ಕಾಲೇಜಿನ ಡೇಟಾ ಸೋರಿಕೆಯಿಂದ ಈ ವಿದ್ಯಾರ್ಥಿನಿಯರ ಜೀವನ ಇನ್ನಷ್ಟು ಕಠಿಣವಾಗಿದೆ.

“ನನ್ನ ಮುಸ್ಲಿಮೇತರ ಸ್ನೇಹಿತರು ನಮ್ಮನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ” ಎಂದು ಶಿಫಾ ಹೇಳಿದ್ದರು. ಓದಲು ಕುಳಿತಾಗಲೆಲ್ಲ ಏಕಾಗ್ರತೆ ಸಾಧ್ಯವಾಗುತ್ತಿಲ್ಲ ಎಂದಿದ್ದರು ಶಿಫಾ. ಈಗ ಬಿಜೆಪಿ ನಾಯಕರ ವಿಕೃತಿಯಿಂದ ವಿದ್ಯಾರ್ಥಿನಿಯರು ಮತ್ತಷ್ಟು ಆತಂಕಪಡುವಂತಾಗಿದೆ.


ಇದನ್ನೂ ಓದಿರಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...